
ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಿದೆ ಇರುವುದು .ಕಾಂಗ್ರೆಸ್ ಪಕ್ಷದಲ್ಲಿ ಆಸಮಾಧಾನ. ಸಮ್ಮಿಶ್ರ ಸರ್ಕಾರಕ್ಕೆ ಗಂಡಾತರ….. ಕಾಂಗ್ರೆಸ್ ಸ್ವಯಂಕೃತ ಅಪರಾಧದಿಂದ ಹಲವಾರು ರಾಜ್ಯಗಳಲ್ಲಿ ತನ್ನ ಅಧಿಕಾರಿ ಕಳೆದುಕೊಂಡಿದೆ .ಕರ್ನಾಟಕ ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಬಾರಿ ಹಿನ್ನಡೆಯಾಗುವ ಎಲ್ಲ ಲಕ್ಷಣ ಕಾಣುತ್ತಿದೆ .ಬೆಂಗಳೂರು ನಗರ ರಾಜ್ಯದ ರಾಜಧಾನಿ ಇಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದರೆ ಮಾತ್ರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಅಧಿಪತ್ಯ ಸಾಧಿಸಬಹುದು . ಇತ್ತೀಚಿಗಿನ ಕೆಲವು ವಿದ್ಯಮಾನಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷ ಬೆಂಗಳೂರು ನಗರದ ಕೈ ತಪ್ಪುವ ಎಲ್ಲ ಲಕ್ಷಣ ಗೋಚರಿಸುತ್ತಿದೆ . ಬೆಂಗಳೂರುನಗರ 28ವಿಧಾನಸಭಾ ಕ್ಷೇತ್ರ ಮತ್ತು ,ಮಹಾನಗರ ಪಾಲಿಕೆ ,ಜಿಲ್ಲಾ ಪಂಚಾಯಿತಿ ,ಪ್ರತಿಯೊಬ್ಬ ಕಾಂಗ್ರೆಸ್ ಸದಸ್ಯ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಾಡಿ ಮಿಡಿತ ತಿಳಿದಿರುವ ಏಕೈಕ ರಾಜಕಾರಣಿ ಎಂದರೆ ಮಾಜಿ ಗೃಹ ಸಚಿವರು ,ಶಾಸಕರಾದ ರಾಮಲಿಂಗಾ ರೆಡ್ಡಿರವರು .ಬೆಂಗಳೂರಿನ ಪ್ರತಿಯೊಬ್ಬ ನಾಗರಿಕರಿಗೆ ರಾಮಲಿಂಗಾ ರೆಡ್ಡಿರವರ ನೇರ ಭೇಟಿಯಗಲು ಸಿಗುವ ಸಜ್ಞನ ರಾಜಕಾರಣಿ ಎಂದೇ ಚಿರಪರಿತರು .ಗೃಹ ಸಚಿವರಾಗಿ ಆಡಳಿತ ಅವಧಿಯಲ್ಲಿ ಅವರ ನಡೆ ,ಆಡಳಿತ ವೈಖರಿಯನ್ನು ಕಂಡ ರಾಜ್ಯದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದರು 10ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ,ಏಳು ಬಾರಿ ಶಾಸಕರಾಗಿ ಸೇವೆ .ರಾಮಲಿಂಗಾ ರೆಡ್ಡಿರವರು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಉತ್ತಮ ಒಡನಾಟವಿದೆ. ಯಾವುದೇ ಸಂದರ್ಭದಲ್ಲಿ ಬಂದರು ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ರಾಮಲಿಂಗಾರೆಡ್ಡಿರವರು ಬೆಂಗಳೂರುನಗರ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಬಹು ಮುಖ್ಯ ಪಾತ್ರ ವಹಿಸಿದ್ದಾರೆ .ಕಳೆದ ಆರು ತಿಂಗಳ ಕಾಂಗ್ರೆಸ್ ,ಜೆ.ಡಿ.ಎಸ್.ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ರಾಮಲಿಂಗಾ ರೆಡ್ಡಿರವರನ್ನು ಕೈ ಬಿಟ್ಟಿರುವುದು ,ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಗಳೂರಿನ ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಡೊಡ್ಡ ಅಸಮಾಧಾನವಿದೆ .ಬಿ.ಜೆ.ಪಿ.ಭದ್ರಕೋಟೆಯಾಗಿದ್ದ ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಗತ ವೈಭವಕ್ಕೆ ಮರಳಲು ಕಾರಣಕರ್ತರಾದರು .

ರಾಮಲಿಂಗಾರೆಡ್ಡಿರವರ ಶಕ್ತಿ ಸಾಮರ್ಥ್ಯ ಮತ್ತು ಸಂಘಟನೆ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ಈಗಲಾದರೂ ಎಚ್ಚತ್ತುಕೊಳ್ಳಬೇಕು .ಸಚಿವ ಸಂಪುಟ ವಿಸ್ತರಣೆಯಲ್ಲಿ ರಾಮಲಿಂಗಾ ರೆಡ್ಡಿರವರನ್ನು ಸೇರ್ಪಡೆ ಮಾಡಿಸಿಕೊಂಡರೆ ,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಮೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬಹುದು . ಕಾಂಗ್ರೆಸ್ ಪಕ್ಷ ಸಚಿವ ಸಂಪುಟ ವಿಸ್ತರಣೆ ಮತ್ತೆ ಎಡವಿದರೆ ಬೆಂಗಳೂರುನಗರ ಕಾಂಗ್ರೆಸ್ ಬಹುಡೊಡ್ಡ ಹಾನಿ ಖಚಿತ.
City Today News
(Tj vision media)
9341997936
