“ಸಹಕಾರ ಸಂಘಗಳ ಅಭಿವೃದ್ಧಿ” ಕುರಿತ ವಿಚಾರ ಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಜಂಟಿಯಾಗಿ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 70ನೇ ವಾರ್ಷಿಕ ಸಂಭ್ರಮ ನಿಮಿತ್ತ ಮಾರ್ಚ್ 12 ರಂದು “ಸಹಕಾರ ಸಂಘಗಳ ಅಭಿವೃದ್ಧಿ” ಕುರಿತ ವಿಚಾರ ಗೋಷ್ಠಿ ಕಾರ್ಯಕ್ರಮದಲ್ಲಿ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಅರುಣ್ ಕುಮಾರ್ ಅವರಿಗೆ ಸಹಕಾರ ಶಿಕ್ಷಣ ನಿಧಿ ರೂ.1,00,179/- ಗಳ ಚೆಕ್ಕನ್ನು ಸಂಘದ ಅಧ್ಯಕ್ಷ ಎಂ.ಎಸ್.ರಾಜೇಂದ್ರಕುಮಾರ್ ಹಾಗೂ ಕಾರ್ಯದರ್ಶಿ ಎ.ಎಸ್.ನಾಗರಾಜಸ್ವಾಮಿ ಅರ್ಪಿಸಿದರು. ಸಂಘದ ಉಪಾಧ್ಯಕ್ಷ ಎಸ್. ಲಕ್ಷ್ಮೀನಾರಾಯಣ, ಖಜಾಂಚಿ ಯತಿರಾಜು, ನಿರ್ದೇಶಕರಾದ ಎಂ.ಡಿ.ಶಿವಕುಮಾರ(ಬೆಳ್ಳಿತಟ್ಟೆ), ಬಿ.ಎನ್. ಮೋಹನ್ ಕುಮಾರ್, ಎನ್. ವನಿತಾ, ಸಚ್ಚಿದಾನಂದ ಕುರಗುಂದ್,ಶಿವಣ್ಣ ಮತ್ತು ಕಾರ್ಯಕ್ರಮ ಸಮನ್ವಯಾಧಿಕಾರಿ ಎಂ. ಮಲ್ಲರಾಜ್ ಉಪಸ್ಥಿತರಿದ್ದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.