
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ , 2018ರ ವಿಧಾನಸಭಾ ಚುನಾವಣೆಯಲ್ಲಿ “ ಚಾಮರಾಜಪೇಟೆ ” ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ( ಐ ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿರುವ B , Z . ಜಮೀರ್ ಅಹಮದ್ ಖಾನ್ ರವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ನಮೂನೆ 26 ರ ಪ್ರಮಾಣಪತ್ರದ ಕ್ರಮ ಸಂಖ್ಯೆ – 08 ರಲ್ಲಿ ತಾವು ಚೆಲುವರಾಯ ಸ್ವಾಮಿಯವರಿಂದ ( 42 , 00 , 000 / – ( ನಲವತ್ತೆರಡು ಲಕ್ಷ ) ಗಳನ್ನು ಸಾಲ ಪಡೆದಿರುವುದಾಗಿ ಘೋಷಿಸಿಕೊಂಡಿದ್ದಾರೆ . ಆದರೆ , ಅದೇ ಚುನಾವಣೆಯಲ್ಲಿ “ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ( ಐ ) ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚೆಲುವರಾಯ ಸ್ವಾಮಿ ಯವರು ,

ತಾವು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ನಮೂನೆ 26 ರ ಪ್ರಮಾಣಪತ್ರದಲ್ಲಿ ಶಾಸಕ B , Z , ಜಮೀರ್ ಅಹಮದ್ ಖಾನ್ ಅವರಿಗೆ ಯಾವುದೇ ಸಾಲವನ್ನು ನೀಡಿರುವ ಬಗ್ಗೆ ಘೋಷಣೆಯನ್ನೇ ಮಾಡಿಲ್ಲದಿರುವುದು ಸ್ಪಷ್ಟವಾಗಿದೆ . – ಅಂದರೆ , ಶಾಸಕ B . Z . ಜಮೀರ್ ಅಹಮದ್ ಖಾನ್ ರವರು , ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವುದು ಅತ್ಯಂತ ಸ್ಪಷ್ಟವಾಗಿದೆ . ಆದುದರಿಂದ , B . Z . ಜಮೀರ್ ಅಹಮದ್ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಸಂಬಂಧ ಕಾನೂನು ರೀತ್ಯಾ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ .
– ರಮೇಶ್ ಎನ್ . ಆರ್ .
City Today News
(citytoday.media)
9341997936
