
ಬೆಂಗಳೂರು, ಏಪ್ರಿಲ್ 12, 2020 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನಗರದ ಹಲವೆಡೆ ಸಂಚರಿಸಿ ಲಾಕ್ ಡೌನ್ ಅನುಷ್ಠಾನವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರು ಪೊಲೀಸರು, ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.

ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ ಸಿಎಂ ಯಡಿಯೂರಪ್ಪ. ಲಾಕ್ಡೌನ್ ಜಾರಿ ಹಾಗೂ ಜನರ ಸಮಸ್ಯೆಗಳ ಬಗ್ಗೆ ಖುದ್ದು ಅವಲೋಕಿಸಿದ ಸಿಎಂ. ಈ ವೇಳೆ ಹಣ್ಣು, ಹೂವು ವ್ಯಾಪಾರಿಗಳ ಜತೆ ಚರ್ಚಿಸಿ ಸೂಕ್ತ ಸಲಹೆ ನೀಡಿ ಧೈರ್ಯ ತುಂಬಿದ ಬಿಎಸ್ವೈ.
City Today News
(citytoday.media)
9341997936
