ಕೇಂದ್ರದ ಮಾಜಿ ಸಚಿವ ಶ್ರೀ ಎಂ. ವಿ.ರಾಜಶೇಖರನ್ ಅವರ ನಿಧನಕ್ಕೆ ಸನ್ಮಾನ್ಯ ಸಭಾಧ್ಯಕ್ಷರು ತೀವ್ರವಾದ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀ ಎಂ.ವಿ.ರಾಜಶೇಖರನ್ ಅವರು ಸರಳತೆ, ಸಜ್ಜನಿಕೆ ಹಾಗೂ ಉತ್ತಮ ಪ್ರಬುದ್ಧತೆಯ ರಾಜಕಾರಣಿಯಾಗಿದ್ದು,
ಗ್ರಾಮೀಣ ಆರ್ಥಿಕ ಸಲಹೆಗಾರರಾಗಿದ್ದರು.

ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಸೇವೆ ಸಲ್ಲಿಸಿದ್ದರು.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಸನ್ಮಾನ್ಯ ಸಭಾಧ್ಯಕ್ಷರು ಪ್ರಾರ್ಥಿಸಿರುವುದಾಗಿ ತಿಳಿಸಿರುತ್ತಾರೆ.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.