ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆಗಾರರಿಗೆ ಖುಷಿಯಾಗುವಂತ ಸುದ್ದಿ ನೀಡಲು ತೋಟಗಾರಿಕೆ ಸಚಿವ ಡಾ. ನಾರಾಯಣ ಗೌಡ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ

ಬೆಂಗಳೂರು 15- ಸುಮಾರು 662 ಹೆಕ್ಟೇರ್ ಪ್ರದೇಶದಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆಯಲಾಗುತ್ತೆ. ಕೊವಿಡ್ 19 ಹಿನ್ನೆಲೆಯಲ್ಲಿ ಈ ದ್ರಾಕ್ಷಿ ಮಾರಾಟವಾಗದೆ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ ಸಚಿವರು, ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಬ್ಲೂ ದ್ರಾಕ್ಷಿಯನ್ನ ಬೆಂಗಳೂರು ಗ್ರಾಮಾಂತರದಲ್ಲಿ 400 ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 10 ಸಾವಿರ ಟನ್ ಹಾಗೂ ಚಿಕ್ಕಬಳ್ಳಾಪುರದಲ್ಲಿ 262 ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 5420 ಟನ್‍ನಷ್ಟು ದ್ರಾಕ್ಷಿ ಬೆಳೆಯಲಾಗುತ್ತೆ. ರೈತರ ಹಿತದೃಷ್ಟಿಯಿಂದ ಈ ದ್ರಾಕ್ಷಿಯನ್ನ ಡಿಸ್ಟಿಲರಿಸ್ ಗೆ ಬಳಸುವ ಬಗ್ಗೆ ಚಿಂತಿಸಿದ್ದಾರೆ. ಸದ್ಯ ಡಿಸ್ಟಿಲರಿಸ್ ಕಂಪೆನಿಗಳು ಕಾರ್ಯ ನಿರ್ವಹಿಸುತ್ತಿಲ್ಲ. ತಕ್ಷಣವೇ ಕಂಪೆನಿಗಳನ್ನ ಆರಂಭಿಸಬೇಕು. ಜೊತೆಗೆ ಬೆಂಗಳೂರು ಬ್ಲೂ ದ್ರಾಕ್ಷಿಯನ್ನ ಡಿಸ್ಟಿಲರಿಸ್‍ಗೆ ಬಳಸಿಕೊಳ್ಳಬೇಕು ಎಂದು ಅಬಕಾರಿ ಸಚಿವ ಡಾ. ಹೆಚ್ ನಾಗೇಶ್ ಅವರಲ್ಲಿ ಸಚಿವ ಡಾ. ನಾರಾಯಣಗೌಡ ಅವರು ಮನವಿ ಮಾಡಿದ್ದಾರೆ. ವಿಕಾಸ ಸೌಧದಲ್ಲಿ ಈ ಕುರಿತು ಸಭೆ ನಡೆಸಿದ್ದು, ರೈತರಿಗೆ ಅನುಕೂಲವಾಗುವ ಕಾರಣ ಈ ಕೆಲಸವನ್ನ ತತ್‍ಕ್ಷಣವೇ ಮಾಡುವಂತೆಯೂ ಮನವಿ ಮಾಡಿದ್ದಾರೆ. ಸಚಿವ ನಾರಾಯಣ ಗೌಡ ಅವರ ಮನವಿಗೆ ಸ್ಪಂಧಿಸಿರುವ ಅಬಕಾರಿ ಸಚಿವರು ನಾಳೆಯೇ ಅಧಿಕಾರಿಗಳ ಜೊತೆ ಹಾಗೂ ಡಿಸ್ಟಿಲರಿಸ್ ಘಟಕಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ಅತಿಶೀಘ್ರದಲ್ಲಿ ರೈತರಿಗೆ ಅನುಕೂಲವಾಗುವಂತೆ ಕ್ರಮ ತೆಗೆದುಕೊಳ್ಳುವುದಾಗಿಯೂ ತಿಳಿಸಿದ್ದಾರೆ.

City Today News

(citytoday.media)

9341997937

Leave a comment

This site uses Akismet to reduce spam. Learn how your comment data is processed.