ಕೊರೋನ ಸಂಬಂಧಿತ ವಿಷಯ ಮರೆಮಾಚುವ ಅವಶ್ಯಕತೆಯೇ ಇಲ್ಲ- ಡಾ.ಕೆ. ಸುಧಾಕರ್

*ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಪ್ರತಿಕ್ರಿಯೆ

ಬೆಂಗಳೂರು:
ಕೊರೊನಾ ಸಂಬಂಧಿತ ಎಲ್ಲಾ ಅಂಕಿ-ಅಂಶಗಳನ್ನು ಪಾರದರ್ಶಕವಾಗಿ ಪ್ರಕಟಿಸುವಲ್ಲಿ ನಮ್ಮ ಸರ್ಕಾರ ಇಡೀ ದೇಶದಲ್ಲೇ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

ಕೋಲಾರದಲ್ಲಿ ಕೊರೊನಾದಿಂದ ಸಾವಿನಪ್ಪಿದವರ ಬಗ್ಗೆ ನಿಖರ ಅಂಕಿ‌-ಅಂಶ ನೀಡಿಲ್ಲವೆಂದು ಸಿದ್ದರಾಮಯ್ಯ ಅವರ ಆರೋಪದ ಟ್ವೀಟ್‌ಗೆ, ಟ್ವೀಟ್ ಮೂಲಕವೇ ಸಚಿವರು ಉತ್ತರ ನೀಡಿದ್ದಾರೆ.

ಸೆಪ್ಟೆಂಬರ್ 19 ರಂದು ಕೋಲಾರದ ಆರ್.ಎಲ್.ಜೆ ಆಸ್ಪತ್ರೆಯಲ್ಲಿ 3 ಸಾವು ಸಂಭವಿಸಿತ್ತು. ಆಸ್ಪತ್ರೆಯು ಮರಣದ ಕಾರಣದ ಬಗ್ಗೆ ನಿಗದಿತ ನಮುನೆಗಳಲ್ಲಿ ಮಾಹಿತಿ ನೀಡಲು ವಿಳಂಬವಾದ ಕಾರಣ ಅದನ್ನು ಸೆ. 24 ರಂದು ವರದಿ ಮಾಡಲಾಗಿತ್ತು. ಸೆ.20ರಂದು ಸಂಭವಿಸಿದ 1 ಸಾವನ್ನು ಇದೇ ಕಾರಣಕ್ಕಾಗಿ ಸೆ. 25ರಂದು ವರದಿ ಮಾಡಲಾಗಿದೆ.

ಕೊರೋನ ಸಂಬಂಧ ನಿಖರ ಮಾಹಿತಿ ನೀಡುವಲ್ಲಿ ಹಾಗೂ ನಿರ್ವಹಣೆಯಲ್ಲಿ ಇಡೀ ದೇಶದಲ್ಲೇ ನಮ್ಮ ಸರ್ಕಾರ
ಅತ್ಯಂತ ದಕ್ಷತೆ, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಮಾಧ್ಯಮ ವರದಿಯಿಂದ ಬಹಿರಂಗವಾಗಿದೆ.
ಅಷ್ಟಕ್ಕೂ ಕೊರೋನ ಸಂಬಂಧ ಯಾವುದೇ ವಿಷಯವನ್ನೂ ಮರೆಮಾಚುವ ಉದ್ದೇಶವೂ ಇಲ್ಲ ಮತ್ತು ಅದರ ಅವಶ್ಯಕತೆಯೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.