
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ದಿನಾಂಕ : 30-31ನೇ ಮೇ ಹಾಗೂ 1 ನೇ ಜೂನ್ -2022 ರವರೆಗೆ ಬೆಂಗಳೂರು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ‘ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು -2022 ನಡೆಯಲಿವೆ .

ದಿನಾಂಕ : 30-05-2022ರಂದು ಸಂಜೆ 4-30 ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್ . ಬೊಮ್ಮಾಯಿರವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ . ಈ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಸಂಪುಟದ ಹಲವು ಸಚಿವರು ಭಾಗವಹಿಸಲಿದ್ದಾರೆ .
*ರಾಜ್ಯಾದ್ಯಂತ 10 ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ . * ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಆನ್ಲೈನ್ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲಾ ಕ್ರೀಡಾಪಟುಗಳಿಗೆ ಗುಣಮಟ್ಟದ ಟ್ರಾಕ್ಟ್ ಮತ್ತು ಕ್ಯಾಪ್ ನೀಡಲಾಗುವುದು . *ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಕೆ.ಜಿ.ಐ.ಡಿ. ಇಲಾಖೆಯ Online ಸೇವೆ ಯೋಜನೆ ಹಾಗೂ SMS ಮೂಲಕ ನೌಕರರ ಮಾಸಿಕ ವೇತನ ಭತ್ಯೆಗಳ ಮಾಹಿತಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ . * ದಿನಾಂಕ 30-05-2022 ರಂದು ಸಂಜೆ 7.00 ಗಂಟೆಗೆ ಖ್ಯಾತ ಗಾಯಕರಾದ ಶ್ರೀ ವಿಜಯ್ ಪ್ರಕಾಶ್ರವರಿಂದ ‘ ಸಂಗೀತ ರಸ ಸಂಜೆ ‘ ಕಾರ್ಯಕ್ರಮ ನಡೆಯಲಿದೆ . *ದಿನಾಂಕ : 31-05-2022 ರಂದು ಸಂಜೆ 7.00 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 15 ಜಾನಪದ ಕಲಾ ತಂಡಗಳಿಂದ ‘ ಜನಪದೋತ್ಸವ ಕಾರ್ಯಕ್ರಮ ನಡೆಯಲಿದೆ .* ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಟ್ರೋಫಿ ನೀಡಲಾಗುವುದು . * ದಿನಾಂಕ : 30-05-2022 ರಿಂದ 01-06-2022ರವರೆಗೆ ಮೂರು ದಿನಗಳ ಕಾಲ ಎಲ್ಲಾ ಕ್ರೀಡಾಪಟುಗಳಿಗೆ ರುಚಿ – ಶುಚಿಯಾದ ಊಟೋಪಹಾರ ವ್ಯವಸ್ಥೆ ಮಾಡಲಾಗಿದೆ .
ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ Online ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಸಂಘವು ಮನವಿ ಮಾಡುತ್ತದೆ ಎಂದು ಸಿ.ಎಸ್.ಷಡಾಕ್ಟರಿ, ರಾಜ್ಯಾಧ್ಯಕ್ಷರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು
City Today News
9341997936