
ಬೆಂಗಳೂರು 28/11/2022: ಧಾರವಾಡದ ಕೆಸಿಡಿ ಆವರಣದಲ್ಲಿ ದಿನಾಂಕ 30 ನವೆಂಬರ್ 2022 ರಂದು ರಾಜ್ಯ ಮಟ್ಟದ ಅತಿಥಿ ಉಪನ್ಯಾಸಕರ ಶೈಕ್ಷಣಿಕ ಸಮಾವೇಶ ಮತ್ತು ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ.ಪ್ರದ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ (ರಿ)ಬೆಂಗಳೂರು ರಾಜ್ಯಾಧ್ಯಕ್ಷರಾದ ಡಾ.ಹನುಮಂತಗೌಡ ಆರ್.ಕಲ್ಮನಿ ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಶೈಕ್ಷಣಿಕ ಸಮಾವೇಶದ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಮಾನ್ಯ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಉದ್ಘಾಟಕರಾಗಿ ಆಗಮಿಸುವರು, ಮಾಜಿ ಸಭಾಪತಿಗಳು, ವಿಧಾನ ಪರಿಷತ್ತಿನ ಹಿರಿಯ ಸದಸ್ಯರಾದ ಮಾನ್ಯ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್ ಶೆಟ್ಟರ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ, ಶಾಸಕ ಅರವಿಂದ ಬೆಲ್ಲದ, ಶಾಸಕ ಅಮೃತ್ ದೇಸಾಯಿ, ಶಾಸಕ ಪ್ರಸಾದ ಅಬ್ಬಯ್ಯ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವರು.ಸ.ಪ್ರದ.ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಹನುಮಂತಗೌಡ ಆರ್.ಕಲ್ಮನಿ ಸಮಾವೇಶದ ಆಶಯ ನುಡಿ ಹೇಳುವರು.

ಸಮಾವೇಶದಲ್ಲಿ, ವಿಧಾನ ಪರಿಷತ್ತಿನ ಹಿರಿಯ ಸದಸ್ಯರಾದ ಅಯನೂರ್ ಮಂಜುನಾಥ, ಪ್ರಕಾಶ ಹುಕ್ಕೇರಿ, ಪುಟ್ಟಣ್ಣನವರು, ಎಸ್.ವಿ.ಸಂಕನೂರು, ಹನಮಂತ ಆರ್.ನಿರಾಣಿ, ಮರಿತಿಬ್ಬೆಗೌಡರು, ವಾಯ್.ಎ.ನಾರಾಯಣಸ್ವಾಮಿ, ಶಶಿಲ ಜಿ.ನಮೋಶಿ, ಎಸ್.ಎಲ್.ಮೋಜಿಗೌಡ, ಚಿದಾನಂದ ಎಂ.ಗೌಡ, ಚಂದ್ರಶೇಖರ ಪಾಟೀಲ, ಮಧು ಮಾದೇಗೌಡ, ಎ.ದೇವೆಗೌಡ, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್ ಭಾ.ಆ.ಸೇ, ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರಾದ ಪ್ರದೀಪ್.ಪಿ ಭಾ.ಆ.ಸೇ, ಕವಿವಿ ಕುಲಪತಿಗಳಾದ ಡಾ.ಕೆ.ಬಿ.ಗುಡಿಸಿ, ಕೆಸಿಡಿ. ಕಾಲೇಜಿನ ಪ್ರಾಚಾರ್ಯ ಡಾ.ಡಿ.ಬಿ. ಕರಿಡೋಣಿ, ಧಾರವಾಡ, ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಹಿರಿಯ ಶಿಕ್ಷಣ ತಜ್ಞರಾದ ಡಾ.ಆರ್.ಎಂ.ಕುಬೇರಪ್ಪನವರು, ಬಸವರಾಜ ಗುರಿಕಾರ, ರಾಘು ಅಕ್ಕಂಜಿ, ರಾಜ್ಯ ಸಪ್ರದ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಡಾ.ಟಿ.ದುರಗಪ್ಪ ಮತ್ತು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ರಾಜ್ಯದ ಸಮಸ್ತ ಅತಿಥಿ ಉಪನ್ಯಾಸಕರು ಶೈಕ್ಷಣಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರೆಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಹನುಂತಗೌಡ ಆರ್.ಕಲ್ಮನಿ ಹೇಳಿದರು.
ಪ್ರಧಾನ ಕಾರ್ಯದರ್ಶಿ ಡಾ.ಪೀಟರ್ ವಿನೋದ ಚಂದ, ಡಾ.ಚಂದ್ರಶೇಖರ್, ಹಾಳನ್ನವರ್ ಮತ್ತು ಡಾ.ಚನ್ನಬಸಪ್ಪ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತಿಯಿದ್ದರು .
City Today News – 9341997936