
ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯಶ್ರೀ108ಶ್ರೀಸುಬುಧೇಂದ್ರತೀರ್ಥ ಶ್ರೀಪಾದರ ಅನುಗ್ರಹ ಆಶೀರ್ವಾದ ದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ , ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 428 ನೇ ಜನ್ಮದಿನೋತ್ಸವಕ್ಕಾಗಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪರಮ ಪೂಜ್ಯ ಉಡುಪಿಯ ಪೇಜಾವರ ಮಠದ ಶ್ರೀ108 ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ “ಲಕ್ಷ- ಪುಷ್ಪಾರ್ಚನೆ” ಲೋಕ ಕಲ್ಯಾಣ ಕ್ಕಾಗಿ ತಮ್ಮ ಅಮೃತ ಹಸ್ತದಿಂದ ನೆರವೇರಿಸಿದರು ತದನಂತರ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು, ಶ್ರೀ ಗುರು ರಾಯರ ಜನ್ಮದಿನದಅಂಗವಾಗಿ ರಾಯರ ಬೃಂದಾವನಕ್ಕೆ ಫಲಪಂಚಾಮೃತ ಅಭಿಷೇಕ , ಪ್ರವಚನ, ಉತ್ಸವ, ಸುಮಾರು 108 ಋತ್ವಿಜರಿಂದ ಅಷ್ಟೋತ್ತರ ಪಾರಾಯಣ ವಿಶೇಷವಾಗಿ ನೆರವೇರಿತು ಈ ಸಂದರ್ಭದಲ್ಲಿ ಸಾವಿರಾರು ಭಕ್ತ ಜನರಿಗೆ ಅನ್ನ ಸಂತರ್ಪಣೆಯು ನೆರವೇರಿತು ಭಕ್ತರು ರಾಯರ ದರ್ಶನ ಪಡೆದು ಮಹಾಪ್ರಸಾದ ಸ್ವೀಕರಿಸಿ ಶ್ರೀಗುರುರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗಿ ಶ್ರೀ ಮಠದ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕಂಡು ತುಂಬಾ ಸಂತೋಷ ವ್ಯಕ್ತಪಡಿಸಿದರು.
City Today News – 9341997936