60 ಲಕ್ಷ ಜನಸಂಖ್ಯೆ ಹೊಂದಿರುವ ವಾಲ್ಮೀಕಿ ನಾಯಕ ಜನಾಂಗಕ್ಕೆ ಸಾಮಾನ್ಯ ಕ್ಷೇತ್ರಗಳಲ್ಲಿ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಕುರಿತು.

ಈ ಮೂಲಕ ತಮ್ಮಲ್ಲಿ ವಿನಂತಿ ಮಾಡುವುದೇನೆಂದರೆ, ವಾಲ್ಮೀಕಿ ನಾಯಕ ಜನಾಂಗವು ಕರ್ನಾಟಕದಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವುದು ತಮಗೆಲ್ಲರಿಗೂ ತಿಳಿದಿರುವುದು ಸರಿಯಷ್ಟೇ. ಆದರೆ ಎಸ್.ಟಿ. ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಸಾಮಾನ್ಯ ಕ್ಷೇತ್ರಗಳಲ್ಲಿಯೂ ಸಹ ನಿರ್ಣಾಯಕ ಮತದಾರರ ಸಂಖ್ಯೆ ಹೊಂದಿರುತ್ತೇವೆ. ಆದ್ದರಿಂದ ತಾವುಗಳು ಮುಂಬರುವ ವಿಧಾನಸಭಾ ಚುನಾವಣೆಗೆ ನಮ್ಮ ಜನಾಂಗದ ಅಭ್ಯರ್ಥಿಗಳಿಗೆ ಪ್ರಾಶಸ್ತ್ರ ಕೊಟ್ಟು ತಮ್ಮ ಪಕ್ಷದ ವತಿಯಿಂದ ಸಾಮಾನ್ಯ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತೇವೆ. ರಾಜ್ಯದಲ್ಲಿ ವಾಲ್ಮೀಕಿ ನಾಯಕ ಜನಾಂಗವು ಸುಮಾರು 80 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ಅಭ್ಯರ್ಥಿಯ ಫಲಿತಾಂಶದಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು. ಆದ್ದರಿಂದ ಎಲ್ಲ ಪಕ್ಷಗಳಿಂದಲೂ ತಾವುಗಳು ನಮ್ಮ ಜನಾಂಗರ ಅಭಿವೃದ್ಧಿಗಾಗಿ ಸಾಮಾನ್ಯ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ತಮ್ಮ ತಮ್ಮ ಪಕ್ಷದಿಂದ ಅವಕಾಶ ಮಾಡಿಕೊಡಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇವೆ.

ತಾವುಗಳು ನಮ್ಮ ಜನಾಂಗದ ಅಭ್ಯರ್ಥಿಗಳಿಗೆ ಸಾಮಾನ್ಯ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದಲ್ಲಿ ನಾವುಗಳು ರಾಜ್ಯಾದ್ಯಂತ ತಮ್ಮ ಪಕ್ಷಕ್ಕೆ ಬೆಂಬಲ ಸಿಗಲಿದೆ. ಆದ್ದರಿಂದ ನಮ್ಮ ಈ ಮನವಿಯನ್ನು ಪರಿಗಣಿಸಿ ನಮ್ಮ ಸಮಾಜದ ಅಭಿವೃದ್ಧಿಗೆ ಇದೊಂದು ಸುವರ್ಣಾವಕಾಶ ಎಂದು ಭಾವಿಸಿ ಸಾಮಾನ್ಯ ಕ್ಷೇತ್ರಕ್ಕೆ ನಮ್ಮ ಜನಾಂಗದ ಆಕಾಂಕ್ಷಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕಾಗಿ ಕೋರಲಾಗಿದೆ.

– ಜಿ.ಟಿ. ಚಂದ್ರಶೇಖರಪ್ಪ ರಾಜ್ಯಾಧ್ಯಕ್ಷರು

– ಕೆಂಪರಾಮಯ್ಯ ಪ್ರಧಾನ ಕಾರ್ಯದರ್ಶಿಗಳು

City Today News – 9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.