ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ”ಉದ್ಘಾಟನೆ”

ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ”ಉದ್ಘಾಟನೆ” ಸೋಸಲೇ ವ್ಯಾಸರಾಜ ಮಠದ ಪರಮ ಪೂಜ್ಯ ಶ್ರೀ 108 ಶ್ರೀ ಶ್ರೀ ವಿದ್ಯಾಶ್ರೀಶ ತೀರ್ಥರಿಂದ
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಸಪ್ತ ರಾತ್ರೋತ್ಸವದ ಅಂಗವಾಗಿ ಪರಮ ಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದಹಿರಿಯ ವ್ಯವಸ್ಥಾಪಕ ರಾದ ಆರ್, ಕೆ ವಾದಿಂದ್ರಾಚಾ- ರ್ಯರ ನೇತೃತ್ವದಲ್ಲಿ ಪರಮ ಪೂಜ್ಯ ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದಂಗಳವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ ಶ್ರೀಗಳ ಅಮೃತ ಹಸ್ತದಿಂದ ಧ್ವಜಾರೋಹಣ, ಗೋ ಪೂಜೆ, ಧನ ಧಾನ್ಯ ಪೂಜೆಯೊಂದಿಗೆ 352 ನೇ ಆರಾಧನಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮವು ನೆರವೇರಿಸಿ ಅನುಗ್ರಹ ಸಂದೇಶ ನೀಡಿದರು

ಈ ಸಂದರ್ಭದಲ್ಲಿ ಶ್ರೀ ಮಠದ ಧರ್ಮಾಧಿಕಾರಿಗಳಾದ ಜಿ, ಕೆ ಆಚಾರ್ಯರು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಮತ್ತು ಭಕ್ತರು, ಸೇವಾಕರ್ತರು, ಶ್ರೀಮಠದ ಸಿಬ್ಬಂದಿಗಳು ಭಾಗವಹಿಸಿದ್ದರು , ಈ ವಿಶೇಷ ಸಂದರ್ಭದಲ್ಲಿ ಶ್ರೀಮುಖ್ಯಪ್ರಾಣ ದೇವರ ಮತ್ತು ಶ್ರೀರಾಘವೇಂದ್ರ ಸ್ವಾಮಿಗಳ ಭಾವ ಚಿತ್ರವನ್ನು ಎಂ, ಶ್ರೀನಿವಾಸ ಕಟ್ಟಿ ಅವರು ರಂಗೋಲಿಯಲ್ಲಿ “ಚಿತ್ರಕಲೆ* ಯನ್ನು ಬಿಡಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾದರು,

City Today News 9341997936

Leave a comment

This site uses Akismet to reduce spam. Learn how your comment data is processed.