ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜೆ, ಅನ್ನದಾನ ಸೇವೆ, ರಥೋತ್ಸವ, ದಾಸವಾಣಿ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ಮಾರ್ಗದರ್ಶನದಲ್ಲಿ ಅಕ್ಟೋಬರ್ 12 ಗುರುವಾರದ ಪ್ರಯುಕ್ತ ಬೆಳಗಿನ ಕಾರ್ಯಕ್ರಮಗಳಲ್ಲಿ ರಾಯರಿಗೆ ಕನಕಾಭಿಷೇಕ, ವಿಶೇಷ ಅಲಂಕಾರ, ಅನ್ನದಾನ ಸೇವೆ, ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಸಂಜೆ 5-30 ರಿಂದ ರಥೋತ್ಸವ, ಗಜವಾಹನೋತ್ಸವ, ತೊಟ್ಟಿಲು ಸೇವೆ, ಮಹಾಮಂಗಳಾರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಶೃತಿ ಕಲ್ಕುಂಟೆ ಮತ್ತು ಸಂಗಡಿಗರಿಂದ ದಾಸವಾಣಿ ಜರುಗಿತು. ಈ ಸಂದರ್ಭದಲ್ಲಿ ನೂರಾರು ಭಕ್ತಾದಿಗಳು ಭಾಗವಹಿಸಿ, ಪ್ರಸಾದವನ್ನು ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.