“ಲೋಕ-ಕಲ್ಯಾಣಕ್ಕಾಗಿ ಲಕ್ಷ ದೀಪೋತ್ಸವ” ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರಾಚಾರ್ಯರ ಮಾರ್ಗದರ್ಶನ ಹಾಗೂ ಧರ್ಮಾಧಿಕಾರಿಗಳಾದ ಜಿ,ಕೆ ಆಚಾರ್ಯರ ನೇತೃತ್ವದಲ್ಲಿ “ಲೋಕ-ಕಲ್ಯಾಣಕ್ಕಾಗಿ” ಕಾರ್ತಿಕ ಮಾಸದ ಲಕ್ಷ ದೀಪೋತ್ಸವದ ಕಾರ್ಯಕ್ರಮವು ವಿಶೇಷವಾಗಿ ನೆರವೇರಿತು ಎಂದು ಶ್ರೀ ನಂದಕಿಶೋರ ಆಚಾರ್ಯರು ತಿಳಿಸಿದರು ಈ ಸಂದರ್ಭದಲ್ಲಿ ಸೇವಾಕರ್ತೃಗಳ ಹಾಗೂ ಭಕ್ತರ ಹೆಸರು ಗೋತ್ರ ನಕ್ಷತ್ರ ರಾಶಿ ಸಂಕಲ್ಪದೊಂದಿಗೆ “ಲೋಕ- ಕಲ್ಯಾಣಕ್ಕಾಗಿ”ಪ್ರಾರ್ಥಿಸಿ ಅರ್ಚಕರ ಮುಖೇನ ಸಂಕಲ್ಪಿಸಿ ಭಕ್ತಾದಿಗಳು ರಾಯರ ಪ್ರಕಾರದ ಸುತ್ತಲೂ ದೀಪಗಳನ್ನು ಬೆಳಗಿಸುವ ಮುಖಾಂತರ ಈ ಪೂಜಾ ಸಮಯದಲ್ಲಿ ಭಾಗವಹಿಸಿದ ಶ್ರೀಮಠದ ಸಿಬ್ಬಂದಿಗಳು ಭಕ್ತರು ಶಿಷ್ಯರು ಸೇವಾ ಕರ್ತೃಗಳು ಫಲ ಮಂತ್ರಾಕ್ಷತೆಯನ್ನು ಹಾಗೂ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು,

City Today News 9341997936

Leave a comment

This site uses Akismet to reduce spam. Learn how your comment data is processed.