“ರಾಯರ ಮಠದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ”

“ರಾಯರ ಮಠದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ”

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಧರ್ಮಾಧಿಕಾರಿಗಳಾದ ಜಿ.ಕೆ. ಆಚಾರ್ಯರು ಹಾಗೂ ಪುರೋಹಿತರಾದ ನಂದಕಿಶೋರ್ ಆಚಾರ್ಯರು ಮತ್ತು ರಾಘವೇಂದ್ರ ಕಟ್ಟಿ ಆಚಾರ್ಯರು ಧನುರ್ಮಾಸದ “ಪೌರ್ಣಮಿ” ಪ್ರಯುಕ್ತ ಅರುಣೋದಯ ಕಾಲದಲ್ಲಿ ಸಾಮೂಹಿಕ ಶ್ರೀ “ಸತ್ಯನಾರಾಯಣ ವ್ರತ ಪೂಜೆ”ಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

Leave a comment

This site uses Akismet to reduce spam. Learn how your comment data is processed.