“ಭಕ್ತರಿಂದ ಶ್ರೀ ಗುರು ರಾಯರ ಸನ್ನಿಧಿಗೆ “ದೀಪ ಸ್ತಂಭಗಳು” ಸಮರ್ಪಣೆ ಹಾಗೂ ಮಠದಲ್ಲಿ ವಿಶೇಷ ಪೂಜೆ,ಅನ್ನದಾನ, ರಥೋತ್ಸವ ಮತ್ತು ನೃತ್ಯ ಪ್ರದರ್ಶನ”

ಬೆಂಗಳೂರು : ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜನವರಿ 4, ಗುರುವಾರದ ಪ್ರಯುಕ್ತ ಬೆಳಿಗ್ಗೆ ವಿಶೇಷ ಪೂಜೆ, ಅನ್ನದಾನ ಸೇವೆ, ಮಹಾಮಂಗಳಾರತಿ ಕಾರ್ಯಕ್ರಮಗಳು ನೆರವೇರಿದವು ಈ ಸಂದರ್ಭದಲ್ಲಿ ಶ್ರೀ ಗುರು ರಾಯರ ಸನ್ನಿಧಿಗೆ ದೀಪ ಸ್ತಂಭಗಳನ್ನು ಭಕ್ತರಿಂದ ಸಮರ್ಪಿಸಲಾಯಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ತದ ನಂತರ ಸಂಜೆಯ ಉತ್ಸವದ ಕಾರ್ಯಕ್ರಮದಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ, ತೊಟ್ಟಿಲು ಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ನಿವೇದಿತ ಶರ್ಮಾ ನಾಡಿಗ್ ಅವರ ನಿರ್ದೇಶನದಲ್ಲಿ ನಿವೇದಿತಾ ಸ್ಕೂಲ್ ಆಫ್ ಡ್ಯಾನ್ಸ್ ನ ವಿದ್ಯಾರ್ಥಿಗಳಿಂದ “ನೃತ್ಯ ಪ್ರದರ್ಶನವು” ಜರುಗಿತು. ಈ ಸಂದರ್ಭದಲ್ಲಿ ಶ್ರೀ ಮಠದ ಸಿಬ್ಬಂದಿಗಳು ಸಹಿತ ಭಕ್ತಾದಿಗಳು ಎಲ್ಲಾ ಪೂಜಾ ಸಮಯದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

Leave a comment

This site uses Akismet to reduce spam. Learn how your comment data is processed.