
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ , ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 14, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾ ಮಂಗಳಾರತಿ ಹಾಗೂ ‘ಅನ್ನದಾನ” ಸೇವೆಯ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ಗಜವಾಹನೋತ್ಸವ, ತೊಟ್ಟಿಲು ಪೂಜೆ ಹಾಗೂ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಗೀತಾ ಭತ್ತದ್ ಮತ್ತು “ಗಾನ ಸಿದ್ದಗಂಗಾ ಸಂಗೀತ” ವಿದ್ಯಾಲಯದ ವಿದ್ಯಾರ್ಥಿಗಳು ‘ದಾಸವಾಣಿ’ಕಾರ್ಯಕ್ರಮವನ್ನು ಅತ್ಯದ್ಭುತವಾಗಿ ಯಶಸ್ವಿಯಾಗಿ ನಡೆಸಿಕೊಟ್ಟರು, ನೆರೆದಿದ್ದ ಭಕ್ತ ಸಮೂಹ ಸಂಗೀತಾಸಕ್ತರು “ದಾಸವಾಣಿ” ಮತ್ತು ಭಕ್ತಿಯ ಸಂಗೀತವನ್ನು ಸವಿದರು ಎಂದು ಶ್ರೀ ನಂದಕಿಶೋರಾಚಾರ್ಯರು ತಿಳಿಸಿದರು , ಈ ಸಂದರ್ಭದಲ್ಲಿ ಶ್ರೀ ಮಠದ ವ್ಯವಸ್ಥಾಪಕರಾದ ಆರ್, ಕೆ ವಾದಿಂದ್ರಾಚಾರ್ಯರು ಮತ್ತು ಕಿಶೋರಾಚಾರ್ಯರು “ದಾಸವಾಣಿ”ವೃಂದದವರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳವರ ಭಾವಚಿತ್ರವನ್ನು ನೀಡಿ ಗುರುಗಳ ಫಲ ಮಂತ್ರಾಕ್ಷತೆಯೊಂದಿಗೆ ಆಶೀರ್ವದಿಸಿದರು, ಸಹಸ್ರಾರು ಭಕ್ತರು ರಾಯರ ಸೇವೆಯಲ್ಲಿ ಭಾಗವಹಿಸಿ “ಅನ್ನಸಂತರ್ಪಣೆ” ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು,
City Today News 9341997936
