ಕರ್ನಾಟಕ ರಾಜ್ಯ ಯಾದವ(ಗೊಲ್ಲ) ಸಂಘ ಮತ್ತು ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟವು ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರಿಗೆ ಅಭಿನಂದನೆ.

ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸದಾ ಹಿಂದುಳಿದ ವರ್ಗದವರ ಏಳೆಯನ್ನು ಬಯಸುತ್ತಿದ್ದು, ಅದರಂತೆಯೇ ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸದಸ್ಯರನ್ನಾಗಿ ಶ್ರೀ ಎಂ.ವಿ. ರಾಮಕೃಷ್ಣ ಪ್ರಸಾದ್ (ಗೊಲ್ಲ ಜನಾಂಗ) ಕೆ.ಎಸ್.ಪಿ.ಎಸ್, ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಕೆ.ಎಸ್.ಆರ್.ಪಿ) ಮತ್ತು ಶ್ರೀಮತಿ ಕಾವಲಮ್ಮ, (ಪರಿಶಿಷ್ಟ ಜಾತಿ) ಮಧುಗಿರಿ ತಾಲ್ಲೂಕು, ತುಮಕೂರು ಜಿಲ್ಲೆ ಹಾಗೂ ಶ್ರೀಅಲ್ತಾಫ್ ಹುಸೇನ್ (ಅಲ್ಪಸಂಖ್ಯಾತ) ರವರುಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕಾರ/ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಿರುವುದಕ್ಕೆ ಕರ್ನಾಟಕ ರಾಜ್ಯ ಯಾದವ(ಗೊಲ್ಲ) ಸಂಘ ಮತ್ತು ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟವು ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವನ್ನು ಅಭಿನಂದಿಸುತ್ತದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಡಿ.ಟಿ.ಶ್ರೀನಿವಾಸ್ ತಿಳಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.