
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಹೋಳಿ ಹುಣ್ಣಿಮೆ ಪ್ರಯುಕ್ತ ಮಾರ್ಚ್ 25, ಸೋಮವಾರ ಬೆಳಗ್ಗೆ 9:30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ವ್ರತ ಪೂಜೆಯನ್ನು “ಲೋಕ-ಕಲ್ಯಾಣ”ಕ್ಕಾಗಿ “ಸಂಕಲ್ಪಿಸಿ” ಭಕ್ತರ ಸಂಕಲ್ಪದೊಂದಿಗೆ ಮಹಾ ಮಂಗಳಾರತಿಯೊಂದಿಗೆ ವಿಶೇಷ ಪೂಜೆಯನ್ನು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ನೆರವೇರಿಸಿದರು, ತದನಂತರ ಭಕ್ತರಿಗೆ ಪ್ರಸಾದ ವಿತರಣೆಯು ನೆರವೇರಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳಾದ ಶ್ರೀ ಕೃಷ್ಣ ಗುಂಡಾಚಾರ್ಯರು, ಮತ್ತು ಶ್ರೀ ಪ್ರಮೋದಾಚಾರ್,ಶ್ರೀ ಕಟ್ಟಿ ರಾಘವೇಂದ್ರ ಆಚಾರ್ ಹಾಗೂ ಶ್ರೀಮಠದ ಸಿಬ್ಬಂದಿಗಳು, ನೂರಾರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿ, ಪ್ರಸಾದವನ್ನು ಸ್ವೀಕರಿಸಿ, ಶ್ರೀ ಸತ್ಯನಾರಾಯಣ ಸ್ವಾಮಿಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾದರು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದರು.
City Today News 9341997936
