
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ಭಕ್ತರು ಸಮರ್ಪಿಸಿದ ಮಾವಿನ ಹಣ್ಣಿನಿಂದ ಅಭಿಷೇಕವನ್ನು ಮಾಡಲಾಯಿತು ಎಂದು ಶ್ರೀ ನಂದಕಿಶೋರ ಆಚಾರ್ಯರು ತಿಳಿಸಿದರು, ಈ ಅಭಿಷೇಕದ ಪ್ರಸಾದವನ್ನು ಭಕ್ತ ಜನರಿಗೂ ವಿತರಿಸಲಾಯಿತು ಭಕ್ತರು ಪ್ರಸಾದವನ್ನು ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936
