ಲೋಕ ಸಭಾ ಚುನಾವಣೆ ಸಂಬಂಧಿಸಿದಂತೆ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ ರವರು ಮಾಜಿ ಮುಖ್ಯಮತ್ರಿಗಳಾದ ಶ್ರೀ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭಕೋರಿದರು.
ಮಾಜಿ ಮುಖ್ಯಮತ್ರಿಗಳಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಸಂದರ್ಭದಲ್ಲಿ, ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಜಾತ್ಯತೀತ ಜನತಾದಳದ ರಾಜ್ಯ ಉಪಾಧ್ಯಕ್ಷರಾದ ಡಾ. ಟಿ ಎ ಶರವಣ ಅವರು ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಪ್ರಸಾದವನ್ನು ಹೆಚ್ ಡಿ ಕುಮಾರಸ್ವಾಮಿಯವರಿಗೆ ನೀಡುವುದರ ಮೂಲಕ ಶುಭಕೋರಿದರು.