108 ಅಂಬುಲೆನ್ಸ್  ಟೆಂಡರ್ ರದ್ದಾದ ಕುರಿತು ಹಾಗು ಇದಕ್ಕೆ ಸಂಬಂಧಪಟ್ಟಂತೆ ನಡಿಯುತ್ತಿರುವ ಇತರ ಅಕ್ರಮಗಳ ಕುರಿತಂತೆ ಸದನದ ಶೂನ್ಯ ವೇಳೆಯಲ್ಲಿ ಪ್ರಶ್ನಿಸಿದ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ

ರಾಜ್ಯದಲ್ಲಿ ಡೆಂಘೀರುದ್ರನರ್ತನ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, 108 ಆ್ಯಂಬುಲೆನ್ಸ್ ಸೇವೆ ಒದಗಿಸುವ ಟೆಂಡರ್ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್ ನೀಡಲೂ ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ. ಇದು ತುರ್ತು ಆರೋಗ್ಯ ಸೇವೆಗಳ ಬಗೆಗಿನ ವಿಳಂಬ ಧೋರಣೆಯ ದ್ಯೋತಕ ಎಂಬ ಆರೋಪ ಕೇಳಿ ಬಂದಿದೆ ಎಂದು ಕರ್ನಾಟಕ ವಿಧಾನಪರಿಷತ್ತು ಶಾಸಕರಾದ ಟಿ. ಎ. ಶರವಣ ಅವರು ಪ್ರಶ್ನಿಸಿದರು.

ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆ್ಯಂಬುಲೆನ್ಸ್ ಸೇವೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ 2023ರ ಜು.22ರಂದು ತಾಂತ್ರಿಕ ಸಲಹಾ ಸಮಿತಿ ನೇಮಿಸಲಾಗಿತ್ತು. ಈ ತಾಂತ್ರಿಕ ಸಲಹಾಸಮಿತಿ ವರದಿ ನೀಡಿ ತಿಂಗಳುಗಳೇ ಕಳೆದರೂ ಈವರೆಗೂ ಟೆಂಡರ್ ಕರೆಯಲು ಉನ್ನತ ಮಟ್ಟದ ಸಮಿತಿ ಒಪ್ಪಿಗೆ ನೀಡಿಲ್ಲ. ಹೀಗಾಗಿ ಆ್ಯಂಬುಲೆನ್ಸ್ ಸೇವೆಗೆ ಹಿರಿದಿರುವ ಗ್ರಹಣ ಮುಂದುವರೆದಿದೆ ರಾಜ್ಯದಲ್ಲಿ ತುರ್ತು ಅನಾರೋಗ್ಯ ಸಂಧರ್ಭಗಳಲ್ಲಿ ಆರೋಗ್ಯ ಕವಚ ಆ್ಯಂಬುಲೆನ್ಸ್ ಸೇವೆ ಒದಗಿಸಲು 2007ರಲ್ಲಿ ಟೆಂಡರ್ ಪಡೆ ದಿದ್ದ ಜಿವಿಕೆಯ ಸಂಸ್ಥೆಯ ಗುತ್ತಿಗೆಯನ್ನು ಆಸಮರ್ಪಕ ಸೇವೆ ಹಾಗೂ ನಿಯಮ ಉಲ್ಲಂಘನೆ ಕಾರಣ ನೀಡಿ 2019ರಲ್ಲಿ ಟೆಂಡರ್ ರದ್ದುಪಡಿಸಿತ್ತು ಜೆವಿಕೆ-ಇಎಂಆ‌ರ್ಇ ನಂಸ್ಥೆಯು ವಿಳಂಬ ಸೇವೆ, ಜಿಐಎಸ್ ಆಳವಡಿಕೆ ಮಾಡದಿರುವುದು ಸಿಬ್ಬಂದಿಯ ನಿರ್ವಹಣೆ ವೈಫಲ್ಯ ಸೇರಿದಂತೆ ಟೆಂಡರ್ ಷರತ್ತುಗಳನ್ನು ಉಲ್ಲಂಘಿಸಿದೆ ಎಂಬಕಾರಣಕ್ಕೆ ಟೆಂಡ‌ರ್ ರದ್ದುಪಡಿಸಲಾಗಿತ್ತು ಬಳಿಕ ಬಾರಿ ಟೆಂಡರ್ ಕರೆದಿದ್ದರೂ ಯಾರೊಬ್ಬರೂ ಭಾಗವಹಿಸಿರಲಿಲ್ಲ. ಹೀಗಾಗಿ 2019ರಲ್ಲಿ ಜಿವಿಕೆ ಹಾಗೂ ತುರ್ತು ಗ್ರೀನ್ ಹೆಲ್ತ್ ಜತೆ ಒಡಂಬಡಿಕೆ ಆಧಾರದ ಮೇಲೆ ಆ್ಯಂಬುಲೆನ್ಸ್ ಸೇವೆನೀಡಲಾಗುತ್ತಿದೆ ಆದರೆ, 7 ವರ್ಷದಿಂದ ಅಧಿಕೃತ ಟೆಂಡರ್ ಪಡೆದಿರುವ ಆ್ಯಂಬುಲೆನ್ಸ್ ಸೇವಾದಾರ ಸಂಸ್ಥೆ ಇಲ್ಲದಂತಾಗಿದೆ. ಅದುದರಿಂದ, ಆ್ಯಂಬುಲೆನ್ಸ್ ಸೇವೆಯಲ್ಲಿ ಸತತವಾಗಿ ವ್ಯತ್ಯಯವಾಗುತ್ತಿದೆ ಎಂದು ವಿವರಣೆ ನೀಡಿದರು.

ಮುಂದುವರೆದು, 108 ಆ್ಯಂಬುಲೆನ್ಸ್ ಸೆ ಸೇವೆ ಕುರಿತು 2014 19ರವರೆಗಿನ ಪ್ರಕರಣಗಳ ಬಗ್ಗೆ ಸಿಎಜಿ ವರದಿ ಸಲ್ಲಿಸಿದ್ದು ಶೇ.60ರಷ್ಟು ಎಮರ್ಜನ್ಸಿ ಪ್ರಕರಣಗಳಲ್ಲಿ 100 ಆ್ಯಂಬು ಲೆನ್ಸ್ ಸೇವೆ ನಿಗದಿತ ಸಮಯಕ್ಕೆ ದೊರೆತಿಲ್ಲ. ಮತ್ತು, 51 ಲಕ್ಷ ಎಮರ್ಜೆನ್ಸಿಪ್ರಕರಣಗಳಲ್ಲಿ 41.9 ಲಕ್ಷ ಮಾತ್ರ ಆ್ಯಂಬುಲೆನ್ಸ್ ನಿಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿಟೆಂಡರ್ ರದ್ದುಪಡಿಸಿ ಬೇರೆ ಕಂಪನಿಗೆಟೆಂಡ‌ರ್ ನೀಡಲು ನಿರ್ಧರಿಸಲಾಗಿತ್ತು ಆದರೆ ಒಡಂಬಡಿಕೆ ಆಧಾರದ ಮೇಲೆ 746 ಆ್ಯಂಬುಲೆನ್ಸ್ ನಿರ್ವಹಿಸಲು ಅವಕಾಶ ನೀಡಲಾಗಿತ್ತು ಆದರೆ ಒಡಂಬಡಿಕೆ ಮಾಡಿಕೊಂಡಿರುವ ಸಂಸ್ಥೆಗೆ ಸರ್ಕಾರ ಕಾಲಕಾಲಕ್ಕೆ ವೇತನ ನೀಡುತ್ತಿದ್ದರೂ ಅವರು ಸಿಬ್ಬಂದಿಗೆ ನೀಡುತ್ತಿಲ್ಲ, ಗುತ್ತಿದೆ ಜತೆಗೆ ಸರ್ಕಾರಿ ಆಸ್ಪತ್ರೆ ಬದಲಿಗೆ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗುವುದು ರೋಗಿಯ ಬಳಿ ಹಣ ಪಡೆಯುವುದು ಸೇರಿದಂತೆ ಹಲವು ಸಮಸ್ಯೆಗಳಿಗೆ ಈವರೆಗೆ ಪರಿಹಾರ ಕಂಡುಕೊಂಡಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.