
ಫೆಬ್ರವರಿ -2023 ರಲ್ಲಿ 40 ದಿನಗಳ ಕಾಲ 28000 NHM ಒಳ ಗುತ್ತಿಗೆ ನೌಕರರನ್ನು ಖಾಯಂ ಮಾಡುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮುಷ್ಕರ ನಡೆಸಿರುತ್ತೇವೆ ಅಂದಿನ ಸರ್ಕಾರ ಕೊನೆ ಘಳಿಗೆಯಲ್ಲಿ ನಮ್ಮ ಬೇಡಿಕೆಯನ್ನು ಈಡೇರಿಸದೆ ಕಾಲ ಹರಣ ಮಾಡಿ ಇಂದು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ. ಅಂದು ಮುಷ್ಕರದ ವೇದಿಕೆಗೆ KPCC ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ರವರು ಆಗಮಿಸಿ ಕೊರೋನ-19 ಮಹಾಮಾರಿ ಕಾಯಿಲೆ ವಿಶ್ವದಾದ್ಯಂತ ಅಪ್ಪಳಿಸಿದ ಸಮಯದಲ್ಲಿ ಆರೋಗ್ಯ ಇಲಾಖೆಯ ಸೇವೆಯನ್ನು ಪರಿಗಣಿಸಿ ನಮ್ಮ NHM ನೌಕರರನ್ನು ಖಾಯಂ ಮಾಡುವುದಾಗಿ ಭರವಸೆ నిడి ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿರುತ್ತಾರೆ.ಇದರಂತೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಪ್ರಚಂಡ ಬಹುಮತದೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಅಧಿಕಾರ ನಡೆಸುತ್ತಿದೆ.ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಪ್ರಕಟಿಸಿದ 5 ಪ್ರಮುಖ ಭರವಸೆಗಳನ್ನು ಈಗಾಗಲೇ ಯಶಸ್ವಿಯಾಗಿ ಈಡೇರಿಸಿದ್ದು ಇನ್ನು ಅನೇಕ ಬೇಡಿಕೆಗಳನ್ನು ಈಡೇರಿಸಿರುತ್ತಾರೆ. ಇದರಂತೆ NHM ಒಳ ಗುತ್ತಿಗೆ ನೌಕರನ್ನು ಖಾಯಂ ಮಾಡುವಂತೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಉಪ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರನ್ನು NHM ಒಳ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿರುತ್ತೇವೆ.
ಇದರಂತೆ ದಿನಾಂಕ 16-03-2024 ರಲ್ಲಿ ಮಾನ್ಯ ಮುಖ್ಯಮಂತ್ರಿಗಳು ಸೂಕ್ತ ಕ್ರಮ ವಹಿಸಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿರುತ್ತಾರೆ.ಮುಖ್ಯಮಂತ್ರಿಗಳ ನಿರ್ದೇಶನದಂತೆ NHM ಒಳ ಗುತ್ತಿಗೆ ನೌಕರರ ಖಾಯಂ ಕಡತವು ತಯಾರಾಗಿದ್ದು ಸಚಿವ ಸಂಪುಟದಲ್ಲಿ ಅನುಮೋದನೆ ನೀಡುವಲ್ಲಿ ವಿಳಂಬವಾಗುತ್ತಿದೆ. ಇದರಿಂದ ನಮ್ಮ ನೌಕರರು ವಿಚಾಲಿತರಾಗಿರುತ್ತಾರೆ. ಪ್ರಮುಖ ಭರವಸೆಗಳನ್ನು ಈಡೇರಿಸುವ ಜೊತೆಗೆ ಇನ್ನು ಅನೇಕ ಬೇಡಿಕೆಗಳನ್ನು ಈಡೇರಿಸಿರುತ್ತಾರೆ
1) ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ಸಮಯದಲ್ಲಿ ಇಡಿಘಂಟು ಯೋಜನ ಜಾರಿ ಮಾಡಿರುತ್ತಾರೆ.
2) ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಿರುತ್ತಾರೆ.
3) ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಿರುತ್ತಾರೆ.
ಇದರಂತೆ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸಿ ಜನಮನ್ನಣೆ ಪಡೆದಿರುವ ಸರ್ಕಾರವು ನುಡಿದಂತೆ ನಡೆಯುತ್ತಿದೆ.
ಸರ್ಕಾರಿ ನೌಕರರಿಗೆ ಸಮನಾಗಿ ಯಾವುದೇ ಸೌಲಭ್ಯಗಳನ್ನು NHM ನೌಕರರು ಪಡೆಯದೇ ಅತ್ಯಂತ ಕಡಿಮೆ ಸಂಚಿತ ವೇತನ ಪಡೆದು ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅನೇಕ ವರ್ಷಗಳಳಿಂದ ಸೇವೆ ನೀಡುತ್ತಾ ಬಂದಿರುತ್ತೇವೆ. ಸಾಮಾಜಿಕ ನ್ಯಾಯದ ಬಗ್ಗೆ ಅಪಾರ ಕಾಳಜಿ ಹಾಗೂ ಅದನ್ನು ಜಾರಿ ಮಾಡುವಲ್ಲಿ ಯಶಸ್ವಿಯಾಗಿರುವ ನುಡಿದಂತೆ ನಡೆಯುತ್ತಿರುವ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ನಮ್ಮ ನ್ಯಾಯಯುತವಾದ ಖಾಯಂ ಬೇಡಿಕೆಯನ್ನು 15-08- 2024 ರ ಒಳಗೆ ಈಡೇರಿಸಬೇಕೆಂದು 28258 NHM ಒಳ ಗುತ್ತಿಗೆ ನೌಕರರು ಆಗ್ರಹಿಸುತ್ತೇವೆ ಎಂದು
ಅಶ್ವತ್ ಹೆಚ್. ಕೆ ರಾಜ್ಯ ಅಧ್ಯಕ್ಷರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
City Today News 9341997936
