
ಶ್ರೀ ಗುರು ರಾಯರ ಸನ್ನಿಧಿಯಲ್ಲಿ ಅನ್ನದಾನ ವಿಶೇಷ ಉತ್ಸವ ಮತ್ತು “ಭರತನಾಟ್ಯ”
ಪರಮ ಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥಶ್ರೀಪಾದರ ಆದೇಶ ಅನುಗ್ರಹದೊಂದಿಗೆ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ.ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರದಂದು ಬೆಳಗ್ಗೆ ರಾಯರ ಬೃಂದಾವನಕ್ಕೆ ವಿಶೇಷ ಪೂಜಾದಿಗಳು ಜರಗಿತು ನಂತರ ಸನ್ನಿಧಿಗೆ ಆಗಮಿಸಿದ ಸಹಸ್ರಾರು ಭಕ್ತರಿಗೆ ಅನ್ನ ಸಂತರ್ಪಣೆಯು ನೆರವೇರಿತು ಎಂದು ನಂದಕಿಶೋರಾಚಾರ್ಯರು ತಿಳಿಸಿದರು ತದನಂತರ ಸಂಜೆ ಕಾರ್ಯಕ್ರಮದಲ್ಲಿ ವಿಶೇಷ ಉತ್ಸವಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಾ|| ಪ್ರಿಯಾ ಗಣೇಶ್ ಅವರ ನಿರ್ದೇಶನದಲ್ಲಿ “ಸಮುದ್ಭವ” ಕಲೆ ಮತ್ತು ಸಂಸ್ಕೃತ ಸಂಸ್ಥೆಯ ವಿದ್ಯಾರ್ಥಿಗಳಿಂದ”ಭರತನಾಟ್ಯ”ಕಾರ್ಯಕ್ರಮವು ವಿಶೇಷವಾಗಿ ಜರುಗಿತು ಕಾರ್ಯಕ್ರಮದಲ್ಲಿ ಭಕ್ತಾದಿಗಳು ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
City Today News 9341997936
