
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಕಾರ್ತಿಕ ಪೌರ್ಣಮಿ ಪ್ರಯುಕ್ತ ಶ್ರೀ ಸತ್ಯನಾರಾಯಣ ವ್ರತ ಪೂಜೆ ನೆರವೇರಿತು ಮತ್ತು ಈ ದಿನ ಸಂಜೆ 6-30 ಕ್ಕೆ ಲೋಕ ಕಲ್ಯಾಣಕ್ಕಾಗಿ “ಲಕ್ಷ ದೀಪೋತ್ಸವದ” ಕಾರ್ಯಕ್ರಮವು ವಿಶೇಷವಾಗಿನೆರವೇರಲಿದೆ ಎಂದು ಶ್ರೀ ನಂದಕಿಶೋರ ಆಚಾರ್ಯರು ತಿಳಿಸಿದರು. ಈ ಸಂದರ್ಭದಲ್ಲಿ ಸೇವಾಕರ್ತರು, ಭಕ್ತರು ಭಾಗವಹಿಸಿ ಸೇವೆಯನ್ನು ಸಲ್ಲಿಸಿ ಶ್ರೀಹರಿ ವಾಯುಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936
