ಶ್ರೀ ಗುರುರಾಯರ ಸನ್ನಿಧಿಯಲ್ಲಿ ಗುರುವಾರ ಪ್ರಯುಕ್ತ ವಿಶೇಷ “ವೀಣಾವಾದನ”

ಪರಮಪೂಜ್ಯ ಶ್ರೀ1008  ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ  ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ವಾದೀಂದ್ರಾಚಾರ್ಯರ ಮಾರ್ಗದರ್ಶನದಲ್ಲಿ  ನವೆಂಬರ್ 28, ಗುರುವಾರ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ರಾಯರ ಬೃಂದಾವನಕ್ಕೆ  ವಿಶೇಷ ಅಲಂಕಾರ ಸಹಸ್ರಾರು  ಭಕ್ತರಿಗೆ ಅನ್ನದಾನ ಸೇವೆ ಜರುಗಿದವು ಎಂದು ಶ್ರೀ ನಂದ ಕಿಶೋರ್ ಆಚಾರ್ಯರು ತಿಳಿಸಿದರು. ನಂತರ ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ, ನರ್ತನ ಸೇವೆ, ಗಜವಾಹನೋತ್ಸವ ತೊಟ್ಟಿಲು ಸೇವೆ ಕಾರ್ತೀಕ ದೀಪೋತ್ಸವಗಳ ಸೇವೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಶ್ರೀಮತಿ ಮಾಲಾ ವೆಂಕಟೇಶ್ ಮತ್ತು ಅವರ ಶಿಷ್ಯೆ ಕು|| ಸ್ಫೂರ್ತಿ ಗುರುಪ್ರಸಾದ್ ಅವರಿಂದ ವೀಣಾ ವಾದನ ಕಾರ್ಯಕ್ರಮವು ಜರುಗಿತು. ಇವರ ವೀಣಾ ವಾದನಕ್ಕೆ ಸಹವಾದ್ಯದಲ್ಲಿ ವಿದ್ವಾನ್ ಮುರಳಿ ನಾರಾಯಣರಾವ್ ಮೃದಂಗದಲ್ಲಿ ಹಾಗೂ ವಿದ್ವಾನ್ ಬಾಲಸುಬ್ರಹ್ಮಣ್ಯಂ ಘಟದಲ್ಲಿ ಸಾಥ್ ನೀಡಿದರು ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ಹರಿ ವಾಯು  ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

Leave a comment

This site uses Akismet to reduce spam. Learn how your comment data is processed.