
ಬೆಂಗಳೂರು : ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ 1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಆದೇಶ ಅನುಗ್ರಹ ದೊಂದಿಗೆ ಶ್ರೀ ಮಠದ ವ್ಯವಸ್ಥಾಪಕರಾದ ಶ್ರೀ ಆರ್.ಕೆ. ವಾದೀಂದ್ರಾಚಾರ್ಯರ ಮಾರ್ಗದರ್ಶನದಲ್ಲಿ”ಲೋಕ ಕಲ್ಯಾಣಕ್ಕಾಗಿ ಮತ್ತು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹ ಪಡೆದುಕೊಳ್ಳಲು ಗುರು ಪ್ರಾಪ್ತಿಗಾಗಿ ವಿಶೇಷ ಕಾರ್ತೀಕ ಮಾಸದ ಕೊನೆಯ ದಿನ ಅಮಾವಾಸ್ಯೆಯ ಅಂಗವಾಗಿ ಸಾಮೂಹಿಕ “ಲಕ್ಷ ದೀಪೋತ್ಸವ” ದ ಕಾರ್ಯಕ್ರಮವು ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು ವಿಶೇಷವಾಗಿ ಭಕ್ತರಿಗಾಗಿ ದೀಪಗಳನ್ನು ಪ್ರಜ್ವಲಿಸಲು ಸಿಬ್ಬಂದಿಗಳ ಭಕ್ತರ ಸಹಕಾರದಿಂದ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು , ಈ ವಿಶೇಷವಾದ ದೀಪೋತ್ಸವದ ಕಾರ್ಯಕ್ರಮದಲ್ಲಿ. ಶ್ರೀಯುತ ಶ್ರೀಪಾದ ಪಾಟೀಲ ವಾರ್ತಾ ವಿಭಾಗ, ರಿಪಬ್ಲಿಕ್ ಕನ್ನಡ, ರಿಪಬ್ಲಿಕ್ ನ್ಯಾಶನಲ್ ನೆಟ್ವರ್ಕ್ ವಾರ್ತಾ ನಿರೂಪಕರು ಅದ ಶ್ರೀಪಾದ್ ಪಾಟೀಲ್ ಕುಟುಂಬ ಸಮೇತ ಸನ್ನಿಧಿಗೆ ಆಗಮಿಸಿ ದೀಪಗಳನ್ನು ಬೆಳಗಿಸಿ ಗುರುಗಳ ಫಲ ಮಂತ್ರಾಕ್ಷತೆ ಸ್ವೀಕರಿಸಿ ಶ್ರೀ ಗುರು ರಾಯರ ಅನುಗ್ರಹಕ್ಕೆ ಪಾತ್ರರಾದರು ಹಾಗೂ ಭಕ್ತರು ಸಹ ಲೋಕ ಕಲ್ಯಾಣಕ್ಕಾಗಿ ಮತ್ತು “ಗುರು ಬಲ” ಪ್ರಾಪ್ತಿಗಾಗಿ ಶ್ರದ್ಧೆ ಮತ್ತು ಭಕ್ತಿಯಿಂದ ಭಾಗವಹಿಸಿ ದೀಪಗಳನ್ನು ಪ್ರಜ್ವಲಿಸಿ ಫಲ ಮಂತ್ರಾಕ್ಷತೆ ಮತ್ತು ಪ್ರಸಾದವನ್ನು ಸ್ವೀಕರಿಸಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು
City Today News 9341997936
