ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ಸಂಜೆ “ಭರತನಾಟ್ಯ”

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 19, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಶ್ರೀಮತಿ ಕಾವ್ಯ ರಾವ್ ಅವರ ನಿರ್ದೇಶನದಲ್ಲಿ ಹೇಮಾದ್ರಿ ಸ್ಟುಡಿಯೋಸ್  ವಿದ್ಯಾರ್ಥಿಗಳಿಂದ “ಭರತನಾಟ್ಯ” ಕಾರ್ಯಕ್ರಮವು ವಿಶೇಷವಾಗಿ ಜರುಗಿತು ಎಂದು ಶ್ರೀ  ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ ಈ ಸಂದರ್ಭದಲ್ಲಿ ನೂರಾರು ಭಕ್ತರು ಭರತನಾಟ್ಯ ಕಾರ್ಯಕ್ರಮವನ್ನು ವೀಕ್ಷಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಕೊಟ್ಟು ಸಂತೋಷ ವ್ಯಕ್ತಪಡಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.