ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ‘ಧನುರ್ಮಾಸ” ದ್ವಾದಶಿ ಪ್ರಾತಃಕಾಲದ ವಿಶೇಷ ಪೂಜೆ

“ಮಂತ್ರಾಲಯ ಶ್ರೀಗಳಿಂದ ಧನುರ್ಮಾಸ ಪೂಜೆ” ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  ಶ್ರೀಮನ್ ಮೂಲರಾಮಚಂದ್ರದೇವರ ಸಂಸ್ಥಾನ ಪೂಜೆ ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ
‘ಧನುರ್ಮಾಸ” ದ್ವಾದಶಿ ಪ್ರಾತಃಕಾಲದ ವಿಶೇಷ ಪೂಜೆ, ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ನೆರವೇರಿತು ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಶ್ರೀಗಳು ತಮ್ಮ ಅಮೃತ ಹಸ್ತದಿಂದ ಮಹಾಮಂಗಳಾರತಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ  ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್  ಹಾಗೂ ಭಕ್ತರು ಶಿಷ್ಯರು ಪೂಜೆಯಲ್ಲಿ ಭಕ್ತಿಯಿಂದ ಭಾಗವಹಿಸಿದ್ದರು ಎಂದು ಪುರೋಹಿತರಾದ ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಇದೇ ಸಂದರ್ಭದಲ್ಲಿ  ನೂರಾರು ಭಕ್ತರು ಶ್ರೀಗಳಿಂದ ತೀರ್ಥ ಫಲ ಮಂತ್ರಾಕ್ಷತೆ ಪ್ರಸಾದ ಸ್ವೀಕರಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

Leave a comment

This site uses Akismet to reduce spam. Learn how your comment data is processed.