ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಆಚರಣೆ

ಬೆಂಗಳೂರು, ಜಯನಗರ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವವು ಬೆಂಗಳೂರು ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಅದ್ದೂರಿಯಾಗಿ ನೆರವೇರಿತು. ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹದೊಂದಿಗೆ, ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯ ಮತ್ತು ಜಿ.ಕೆ. ಆಚಾರ್ಯರ ನೇತೃತ್ವದಲ್ಲಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮಹೋತ್ಸವದ ಅಂಗವಾಗಿ ಶ್ರೀ ಹರಿ ವಾಯು ಉತ್ಸವ ಸೇವಾ ಭಜನಾ ಮಂಡಳಿ ವಿಶೇಷ ಭಜನೆ ನಡೆಸಿದ್ದು, ಭಕ್ತರಿಗಾಗಿ ರಥೋತ್ಸವ ಮತ್ತು ಅನ್ನ ಸಂತರ್ಪಣೆ ಆಯೋಜಿಸಲಾಯಿತು. ನೂರಾರು ಭಕ್ತರು ಈ ಪಾವನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಹರಿ, ವಾಯು, ಗುರುಗಳು ಹಾಗೂ ಶ್ರೀ ಪುರಂದರ ದಾಸರ ಅನುಗ್ರಹಕ್ಕೆ ಪಾತ್ರರಾದರು ಎಂದು ಶ್ರೀ ನಂದಕಿಶೋರಾಚಾರ್ಯರು ತಿಳಿಸಿದ್ದಾರೆ.

ಈ ಮಹೋತ್ಸವವು ಭಕ್ತರಲ್ಲಿ ಆಧ್ಯಾತ್ಮಿಕತೆ ಹಾಗೂ ಭಕ್ತಿ ಭಾವನೆ ಹೆಚ್ಚಿಸುವತ್ತ ಒತ್ತಾಸೆಯಾಗಿದೆ.

City Today News 9341997936

Leave a comment

This site uses Akismet to reduce spam. Learn how your comment data is processed.