ಇಂಧನ ಇಲಾಖೆಯಲ್ಲಿ ಪ್ರಾಣಾಪಾಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆಗೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ರಾಜ್ಯದಲ್ಲಿರುವ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಹೊರ ಗುತ್ತಿಗೆ ನೌಕರರು ತಮ್ಮ ಕುಟುಂಬದೊಂದಿಗೆ ಬೃಹತ್ ಪ್ರತಿಭಟನೆ.

ಈಗಾಗಲೇ 2023 ಆಗಸ್ಟ್ ತಿಂಗಳಿನಲ್ಲಿ ಸತತ ಐದು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ಗಮನಸೆಳೆದು ಮಾನ್ಯ ಇಂಧನ ಸಚಿವರಿಗೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಿದ್ದೆವು. ನಮ್ಮ ಮನವಿಗೆ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಹಂತ ಹಂತವಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆಂದು ಹೇಳಿ ನಮ್ಮ ಹೋರಾಟವನ್ನು ಹಿಂಪಡೆಯಲು ಮನವೊಲಿಸಿದ್ದರು. ಅದರಂತೆ ನಾವು ಒಂದು ವರ್ಷ ನಾಲ್ಕು ತಿಂಗಳು ಕಾಲ ಕಾಯ್ದರೂ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸದ ಸರ್ಕಾರ ಮತ್ತು ಇಂಧನ ಇಲಾಖೆಯ ವಿರುದ್ಧ ಪ್ರಾಣಪಾಯದಲ್ಲಿ ಕೆಲಸ ಮಾಡುತ್ತಿರುವ ಸ್ಟೇಷನ್ ಅಪರೇಟರ್ಸ್, ಸ್ಟೇಷನ್ ಹೆಲ್ವರ್ಸ್‌, ಗ್ಯಾಂಗ್ ಮ್ಯಾನ್, ಮೀಟರ್ ರೀಡರ್ಸ್ ಮತ್ತು ಚಾಲಕರು ಹಾಗು ಮತ್ತಿತರರ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ದಿನಾಂಕ: 28/01/2025 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರ ಹಿತರಕ್ಷಣಾ ವೇದಿಕೆ ಹಾಗು ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ನಿರ್ಣಯ ಕೈಗೊಂಡಿರುತ್ತೇವೆ ಈ ಪ್ರತಿಭಟನೆಗೆ ವಿವಿಜಿ ಮಾಡಿಕೊಡದೆ ಸರ್ಕಾರ ಮತ್ತು ಇಂದನ ಇಲಾಖೆ ಇದೇ ತಿಂಗಳು 27 ರ ಒಳಗೆ  ಹಾಕಿರುವ ಹೊರ ಗುತ್ತಿಗೆ ನೌಕರರನ್ನು ಮರು ನೇಮಕ ಮಾಡಬೇಕು ಎಂದು ತಮ್ಮ More ಮಾಧ್ಯಮಗಳ ಮುಖೇನವಾಗಿ ಸರ್ಕಾರವನ್ನು ವಿನಂತಿಸುತ್ತೇವೆ. ಒಂದು ವೇಳೆ ಗಡುವು ನೀಡಿರುವ ದಿನಾಂಕದ ಒಳಗೆ ಸರ್ಕಾರ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗೆ ನಿಗದಿ ಮಾಡಿರುವ ದಿನಾಂಕದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನೌಕರರು ರಾಜ್ಯದ ಎಲ್ಲಾ ವಿಧ್ಯುತ್ ಉಪ ಕೇಂದ್ರಗಳನ್ನು ಸ್ಥಗಿತಗೊಳಿಸಿ ತಮ್ಮ ಕುಟುಂಬ ಸಮೇತವಾಗಿ ಪ್ರತಿಭಟನೆಗೆ ಮುಂದಾಗುತ್ತೇವೆಂದು ನಿಮ್ಮ ಮಾಧ್ಯಮದ ಮೂಲಕ ಸರ್ಕಾರಕ್ಕೆ ತಿಳಿಸ ಬಯಸುತ್ತೇವೆ ಎಂದು ಕರ್ನಾಟಕ ರಾಜ್ಯ ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಸ್ ಹೊರ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ (ರಿ) ವತಿಯಿಂದ ತಿಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ರಾಜ್ಯ ಗೌರವಾಧ್ಯಕ್ಷರಾದ ಮೇಲುಕೋಟೆ ಬೆಟ್ಟಸ್ವಾಮಿ ಗೌಡ, ರಾಜ್ಯಾಧ್ಯಕ್ಷರಾದ ಲೀಲಾಸಾಗರ್ ಎಂ ಎಸ್, ರಾಜ್ಯ ಉಪಾಧ್ಯಕ್ಷರಾದ ಪರಶುರಾಮ್ ರಾಥೋಡ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಾಗಪ್ಪ ಭಾವಿಕಟ್ಟಿ, ರಾಘವೇಂದ್ರ ಉರಣಕರ್, ಮಂಜುನಾಥ್ ಹಾದಿಮುನಿ, ಜಿನೇಂದ್ರ ಕುಮಾರ್ ಬಿ ಪಿ, ಅರ್ಜುನ್ ಗಾಣಿಗೇರ, ಮನೋಹರ್ ಸಿ ಹೆಚ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮಲ್ಲೇಶ್ ಬಿ ಜಿ ಹಾಗು ರಾಜ್ಯ ಕಮಿಟಿ ಮತ್ತು ಜಿಲ್ಲಾ ಕಮಿಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

City Today News 9341997936

ರಾಜ್ಯಾದ್ಯಂತ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣೆ ಸಾವು ಹಾಗೂ ಆರೋಗ್ಯ ಇಲಾಖಾ ಸಚಿವರ ಮತ್ತು ಅಧಿಕಾರಿಗಳ ಬೇಜವಾಬ್ದಾರಿ ನಡವಳಿಕೆಗಳಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಜನತಾ ಪಕ್ಷದ ವತಿಯಿಂದ ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾದ ಡಾ.ವಾಣಿ ಎನ್ ಶೆಟ್ಟಿ ರವರ ನೇತೃತ್ವದಲ್ಲಿ  ಪತ್ರಿಕಾಗೋಷ್ಠಿ


ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ನಡವಳಿಕೆಯಿಂದಾಗಿ ಹಾಗೂ ಹಿಂದಿನ ಅವಧಿಯಲ್ಲಿ ಅಧಿಕಾರದಲ್ಲಿದ್ದ ಭಾರತೀಯ ಜನತಾಪಕ್ಷದ ಹೊಣೆಗೇಡಿ ನೀತಿಯಿಂದಾಗಿ ಆರೋಗ್ಯ ಇಲಾಖೆ ಸೇರಿದಂತೆ ಇಡೀ ಆಡಳಿತದೇ ಅವ್ಯವಸ್ಥೆಯ ತಾಣವಾಗಿರುವುದು ನಾಚಿಕೆಗೇಡಿನ ವಿಷಯ ಪ್ರಸ್ತುತ ವೈದ್ಯರ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ವಾಣಂತಿಯರ ಸಾವುಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಕಂಗಾಲಾಗಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳನ್ನು ಗಮನಿಸಿದರೆ ನಾಡಿನ ಜನರ ಆರೋಗ್ಯದ ಬಗ್ಗೆ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಮತ್ತು ನಾಡಿನ ಸಾಕ್ಷಿಪ್ರಶ್ನೆಗಳಿಗೆ ಕಾಳಜಿಯೇ ಇಲ್ಲದಂತಾಗಿದೆ. ಸರ್ಕಾರದ ವಿರೋಧಾಭಾಸದ

ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಸಾವಿಗೀಡಾಗುತ್ತಿರುವ ಅಸಂಖ್ಯಾತ ಬಾಣಂತಿಯರು ಒಂದೆಡೆಯಾದರೆ, ಮತ್ತೊಂದೆಡೆ ನವಣಾತ ಶಿಶುಗಳ ದಾರುಣ ಸಾವು ನಿರಂತರವಾಗಿದೆ. ಸರಣಿ ದುರ್ಘಟನೆಗಳು ಕಣ್ಣೆದುರಿಗೆ ಇದ್ದರೂ ಮಾನ್ಯ ಆರೋಗ್ಯ ಸಚಿವರು “ನನ್ನ ತಪ್ಪಿದ್ದರೆ ರಾಜೀನಾಮೆಗೆ ಸಿದ್ದ” ಎಂಬ ಬೇಜಾವಾಬ್ದಾರಿ ಹೇಳಿಕೆ ನೀಡಿ ಅನುಕಂಪ ಗಿಟ್ಟಿಸಿಕೊಳ್ಳಲು ನೋಡುತ್ತಿದ್ದಾರೆ. ಮುಂದುವರೆದು ಸದರಿ ಸಚಿವರು “ಗ್ಲೋಕೋಸ್ ಕಾರಣವಾಗಿದ್ದರೆ ಕಂಪೆನಿಗಳ ಮೇಲೆ ಕ್ರಮ” ಎಂದಿದ್ದಾರೆ. ಕಳಪೆ ಗುಣಮಟ್ಟದ ಉಪಕರಣಗಳನ್ನು ಸರಬರಾಜು ಮಾಡಿದ ಕಂಪೆನಿಗಳ ಜೊತೆಗೆ, ಸದರಿ ಔಷಧಿಗಳನ್ನು ನಿಯಮಾನು ಅನುಸಾರ ಪರೀಕ್ಷಿಸದೆ ಉಪಯೋಗಿಸಿದ ವೈದ್ಯಕೀಯ ಸಿಬ್ಬರಿ ಬ್ಬಂದಿಗಳ ವಿರುದ್ದವೂ ಸ್ವವೂ ಕ್ರಮ ಜರುಗಿಸುವ మాడుతారు? ಧೈದ್ಯವನ್ನು ಮಾನ್ಯ ಆರೋಗ್ಯ ಸಚಿವರು ಮಾಡ

ಸರಣಿ ದುರ್ಘಟನೆಗಳ ಬಗ್ಗೆ ಮಾಧ್ಯಮಗಳಲ್ಲಿ “ಸಿ.ಎಂ. ಸಿಡಿಮಿಡಿ” ಎಂಬ 327 meoãost మర గావు ఎం చిత్తివాగుడే బుద్ద: ತಕ್ಷಣವೇ ಪ್ರಕಾರ ಎಂದಿದ್ದರೂ, ದಿನೂರನ್ನೂ ದಾಟರುವ ಸಾಧ್ಯತೆಯಿದೆ. ಮೊದಲಿನ ಒಂದೆರೆಡು ಪ್ರಕರಣಗಳು ವರದಿಯಾದ ಸಚಿವರುಗಳು ಮತ್ತು ಅಧಿಕಾರಿಗಲು ಎಚ್ಚರಿಕೆ ವ ವಹಿಸಿದ್ದರೆ, ಇಷ್ಟೊಂದು ಪ್ರಮ ಮಾಣದ ಹೊಣೆಯಾಗಬೇಕಿದೆ. ಈ ಅಂಕಿ- ನೋವನ್ನು ತಪ್ಪಿಸಬಹುದಿತ್ತು. ಇಷ್ಟೊಂದು ಸಾವುಗ ವುಗಳಿಗೆ ಸರ್ಕಾರವೇ ಹೆ ಅಂಶಗಳು . ತಾಯ್ತನದ ಮಹಿಳೆಯ ು ರಲ್ಲಿ ಆತಂಕವನ್ನುಂಟುಮಾಡಿದೆ. ಂಬ ಬಾಲಿಶ ವರದಿಗಳು

ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಸಚಿವೆಯವರು “ಇಲಾಖಾ ತನಿಖೆಗೆ ಆದೇಶಿಸಲಾಗಿವೆ” ಎಂಬ ತಿಪ್ಪೇಸಾರಿಸುವ ಹೇಳಿಕೆ ನೀಡಿದ್ದಾರೆ. ರೆ. ಇವರದೇ ಆಡಳಿತದಲ್ಲಿ ಆಗಿರುವ ದಗಳಿಗೆ ಇವರೇ ಪ್ರಮಾದಗ ನೇಮಿಸಿದ ತನಿಖಾ ತಂಡದಿಂದ ಇಸ ಇವರದೇ ‘ಕರ್ತವ್ಯಲೋಪದ ಬಗ್ಗೆ ಯಾವ ಅಧಿಕಾರಿಂ ಕಾರಿಯಾದರೂ ಸತ್ಯಾ ಸತ್ಯಾಂಶದ ವರದಿ ನೀಡಲು ಸಾಧ್ಯವೇ? ಸಾರ್ವಜನಿಕರನ್ನು ದಾರಿತಪ್ಪಿಸುವ ಹೇಳಿಕೆ ಇದಾಗಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮವೂ ಜರುಗುವುದಿಲ್ಲ ಎಂಬುದು ಸಾಮಾನ್ಯಜ್ಞಾನ ಇರುವ ಯಾರಿಗಾದರೂ ಅರ್ಥವಾಗುತ್ತದೆ.

ಹೊಣೆಗೇಡಿ ಸರ್ಕಾರವು ನಾಮಕೇವಾಸ್ತೆ ನೇಮಿಸಿರುವ ಐಎಎಸ್ ಅಧಿಕಾರಿಯಿಂದ ಬಾರದರ್ಶಕ ತನಿಖೆ ಅಸಾಧ್ಯ. ಇಂತಹ ಗಂಭೀರ ಪ್ರಕರಣಗಳ ತನಿಖೆ ನಡೆಸಬೇಕಾದವರು ವೈದ್ಯಕೀಯ ವಿಜ್ಞಾನದಲ್ಲಿ ವಿಶೇಷವಾಗಿ ಸ್ತ್ರೀರೋಗ ಮತ್ತು ಪ್ರಸೂತಿ ಹಾಗೂ ಮಕ್ಕಳ ತಜ್ಞರಾಗಿರಬೇಕು. ಹೀಗಾಗಿ ಸದರಿ ತನಿಖಾ ತಂಡದ ಸೇಮಕಾತಿಯ ಕಣ್ಣೂರೆಸುವ ತಂತ್ರವಾಗಿದೆ. ಇದರಿಂದಾಗಿ ಸಮಯ ಹಾಗೂ ದೊಕ್ಕಸಕ್ಕೆ ಮತ್ತಷ್ಟು ಹಾನಿಯೇ ಹೊರತು ಯಾವುದೇ ಸತ್ಯಾಂಶವೂ ಹೊರಬರುವುದಿಲ್ಲ ಮತ್ತು ತಪ್ಪಿತಸ್ಥರ ಬಗ್ಗೆಯೂ ಜಗತ್ತಿಗೆ ತಿಳಿಯುವುದಿಲ್ಲ,

ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಘೋಷಿಸಿರುವ ರೂ.5 ಲಕ್ಷಗಳ ಪರಿಹಾರವಂತೂ ಅವೈಜ್ಞಾನಿಕ, ಅಸಂಬದ್ಧ, ಅತಾರ್ಕಿಕ ತೀರ್ಮಾನವಾಗಿದೆ. ಇದರಿಂದಾಗಿ ಪರಿಹಾರ ವಿತರಣೆಯಲ್ಲೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಬಾಣಂತಿಯರ ಮತ್ತು ನವಜಾತ ಶಿಶುಗಳ ಜೀವಕ್ಕೆ ಸರ್ಕಾರವೇ ಬೆಲೆ ಕಟ್ಟಿದಂತಾಗುತ್ತದೆ. ಅಸಂಬದ್ದ ಪದ್ಧತಿಯನ್ನು ಹುಟ್ಟುಹಾಕಿದಂತೆ.

ವಿರೋಧಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಇಲ್ಲಿಯೂ ಆಡಳಿತ ಪಕ್ಷದವರು ತಮಗೆ ಅನುಕೂಲವಾಗುವಂತಹ ನಿವೃತ್ತ ವ್ಯಕ್ತಿಗಳನ್ನೇ ನೇಮಿಸುವುದು, ತಿಪ್ಪೆಸಾರಿಸುವುದು. ವರದಿಯ ಅನುಷ್ಠಾನವಾಗದೆ ಕ್ರಮೇಣ ಪ್ರಕರಣಗಳು ಮುಚ್ಚಿಹೋಗಿರುವುದನ್ನು ನೋಡಿದ್ದೇವೆ. ಹಾಗಾಗಿ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ಮಾತ್ರವೇ ತನಿಖೆ ನಡೆಸಬೇಕೆಂದು ಜನತಾಪಕ್ಷವು ಆಗ್ರಹಿಸುತ್ತದೆ.

ಇವೆಲ್ಲದರ ಪರಿಣಾಮವಾಗಿ ಬಡಬಗ್ಗರು ಸರ್ಕಾರಿ ಆಸ್ಪತ್ರೆಗಳನ್ನು ಸಾವಿನ ಮನೆಗಳನ್ನು ಕಂಡಂತೆ ಭಯಭೀತರಾಗಿದ್ದಾರೆ. ಪರೋಕ್ಷವಾಗಿ ಸಾಲ-ಸೋಲ ಮಾಡಿ ದುಬಾರಿ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಹ ಅನಿವಾರ್ಯ ವಾತಾವರಣವನ್ನು ಸರ್ಕಾರವೇ ಸೃಷ್ಟಿಸುತ್ತಿರುವ ಅನುಮಾನ ಸಾರ್ವಜನಿರನ್ನು ಕಾಡುತ್ತಿದೆ. ಒಟ್ಟಾರೆ ಪ್ರಸ್ತುತ ಸರ್ಕಾರ ಮತ್ತು ಸರ್ಕಾರಿ ಆಸ್ಪತ್ರೆಗಳು ಬಡವರ ಪರವಾಗಿಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಘಟಿಸುತ್ತಿರುವ ಬಾಣಂತಿಯರ ಸಾವು, ನವಜಾತ ಶಿಶುಗಳ ಸಾವು ಒಳಗೊಂಡಂತೆ ಸಮಸ್ತ ಆರೋಗ್ಯ ಇಲಾಖೆಗೇ ಮೇಜರ್ ಸರ್ಜರಿಯ ಅಗತ್ಯವಿದೆ.

ಸದರಿ ಪ್ರಕರಣಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಆಯೋಗದಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜನತಾಪಕ್ಷವು ಕೆಳಕಂಡ ಪದಾಧಿಕಾರಿಗಳ ನೇತೃತ್ವದಲ್ಲಿ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾದ ಡಾ.ವಾಣಿ ಎನ್ ಶೆಟ್ಟಿ ರವರ ನೇತೃತ್ವದಲ್ಲಿ ನಾಗೇಶ್.ಎನ್,ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ, ಶ್ರೀಮತಿ ಕನ್ಯಾ ಭೂಷಣ್ :ನಿವೃತ್ತ ಶಿಕ್ಷಕಿ ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷರು, ಮಹಿಳಾ ಘಟಕ, ಶ್ರೀಮತಿ ಸುನಂದ: ನಿವೃತ್ತ ಶಿಕ್ಷಕಿ ಹಾಗೂ ರಾಜ್ಯ ಉಪಾಧ್ಯಕ್ಷರು, ಮಹಿಳಾ ಘಟಕ, ಶ್ರೀಮತಿ ಸ್ನೇಹ: ರಾಜ್ಯ ಪ್ರಧಾನ ಕಾರ್ಯದರ್ಶಿ, ಮಹಿಳಾ ಘಟಕ, ಶ್ರೀ ದಿಲೀಪ್‌ ಕುಮಾರ್: ರಾಜ್ಯ ಕಾರ್ಯದರ್ಶಿ ಹಾಗೂ ಶ್ರೀ ಎ.ರಾಜ್: ಬೆಂಗಳೂರು ನಗರ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು .

City Today News 9341997936

ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜನವರಿ 2, ಗುರುವಾರದ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆ ಜರುಗಿದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಪದ್ಮಜಾ ಜಯರಾಮ್ ಅವರ ನಿರ್ದೇಶನದಲ್ಲಿ ನಾಟ್ಯ ಕಲಾರ್ಪಣ ನೃತ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಿ ಶ್ರೀ ಗುರುರಾಯರ ದರ್ಶನ ಪಡೆದು ತದನಂತರ ತೀರ್ಥ , ಮಂತ್ರಾಕ್ಷತೆ, ಪ್ರಸಾದ ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ  ಅನುಗ್ರಹಕ್ಕೆ ಪಾತ್ರರಾದರು.

City Today New 9341997936

ಚಿಂತಾಮಣಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ;  ಆನೇಕಲ್ ಅಂಬೇಡ್ಕರ್ ಯುವಕ ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆ.



ಬೆಂಗಳೂರು ಜನವರಿ2,2025;  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಸ್ಥಾಪಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಕೊಳಕು ಬಟ್ಟೆ ಹೊದಿಸಿ ಅವಮಾನ ಮಾಡಲಾಗುತ್ತಿದೆ.  ಅದನ್ನು ಹೋಗಲಾಡಿಸುವವರೆಗೂ ಉಗ್ರ ಹೋರಾಟ ನಡೆಸಲಾಗುವುದು ಎಂದು ಆನೇಕಲ್ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಎಚ್ಚರಿಸಿದೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮರಸೂರು ಕೃಷ್ಣಪ್ಪ, ಚಿಂತಾಮಣಿ ನಗರದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಪ್ರತಿಮೆಗೆ ಅಪಮಾನದ ಹಿಂದೆ ಸಚಿವ ಸುಧಾಕರ್ ಹಾಗೂ ರೆಡ್ಡಿ ಸಮಾಜದ ಮಾನವತಾವಾದಿಗಳ ಕೈವಾಡವಿದೆ.  ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಕೆಲವು ವಂಚಕರು, ದಲಿತ ನಾಯಕರನ್ನು ಕಟ್ಟಿಕೊಂಡು ಕೊಳಕು ಬಟ್ಟೆ ಹೊದಿಸಿ ವಿರೋಧಿಸುತ್ತಿದ್ದಾರೆ.  ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ದೂರು ಸಲ್ಲಿಸಲಾಗುವುದು.

ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರೇಣುಕಾ ಬೊಮ್ಮಸಂದ್ರ ಮಾತನಾಡಿ, ಕಳೆದ ಆಗಸ್ಟ್ ನಲ್ಲಿ ಚಿಂತಾಮಣಿ ಪಟ್ಟಣದ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರತಿಮೆ ಅನಾವರಣಗೊಳಿಸಲಾಗಿತ್ತು.  ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದರೂ ಕೆಲ ಮಾನವ ಹಕ್ಕು ಕಾರ್ಯಕರ್ತರು ಹಾಗೂ ಪಟ್ಟಭದ್ರ ಹಿತಾಸಕ್ತಿಗಳು ಕೊಳಕು ಬಟ್ಟೆ ಸುತ್ತಿ ಅವಮಾನ ಮಾಡಿದ್ದಾರೆ.  ಸುತ್ತಿದ ಬಟ್ಟೆ ತೆಗೆಯುವವರೆಗೆ ಆನೇಕಲ್ ಅಂಬೇಡ್ಕರ್ ಯುವಕ ಸಂಘ ಬೃಹತ್ ಪ್ರತಿಭಟನೆ ನಡೆಸಲಿದೆ.

ಖಜಾಂಚಿ ಮೈಲಾರಪ್ಪ, ಮಂಜುನಾಥ್.  ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಿ.ಭೀಮ ಪುತ್ರಿ ಪವಿತ್ರ, ಮಾನೆ ರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.

City Today News 9341997936

Ambedkar Statue Insulted in Chintamani: Anekal Ambedkar Youth Association Warns of Vigorous Struggle

Bengaluru, January 2, 2025 – The Anekal Dr. B. R. Ambedkar Youth Association has expressed outrage over the alleged disrespect shown to the statue of Dr. B. R. Ambedkar, the architect of the Indian Constitution, in Chintamani town, Chikkaballapur district. The association has warned of a vigorous protest if the issue is not addressed immediately.

At a press conference held at the Bengaluru Press Club, the association’s president, Marasur Krishnappa, alleged that Minister Sudhakar and certain members of the Reddy community were complicit in the act. “The statue, installed in front of a primary school in Chintamani, has been insulted by being covered with dirty cloth. This act is a blatant attack on Ambedkar’s legacy and Dalit pride,” said Krishnappa. He also announced plans to file a formal complaint with Home Minister Dr. G. Parameshwar.

State Women’s Unit President Renuka Bommasandra further elaborated on the issue, stating, “Despite securing all necessary permissions from the Education Department, some vested interests have continued to insult the statue, which was unveiled last August. Until the disgraceful covering is removed, the Anekal Ambedkar Youth Association will launch a massive protest.”

Treasurer Mailarappa, Manjunath. P. Bheema putri pavitra,Maane Ramanna, and other members of the association were also present at the press conference.

The association has urged authorities to take immediate action to resolve the issue, failing which they have warned of intensified protests.

City Today News 9341997936