
ಬೆಂಗಳೂರು: ಮುಜರಾಯಿ ಇಲಾಖೆಯ ಆಶ್ರಯದಲ್ಲಿ ಇಂದು ನಡೆದ ಶ್ರೀ ವಸಂತವಲ್ಲಭರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಕ್ತರ ಭಕ್ತಿ ಮೇಳವಾಯಿತು. ಈ ಪವಿತ್ರ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ಡಾ. ಮಂಜುನಾಥ್ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಕೃಷ್ಣಪ್ಪ ಅವರು ಭಾಗವಹಿಸಿದರು.
ಉತ್ಸವದ ವೇಳೆ ಭಕ್ತರು ಭಜನೆ-ಪೂಜೆಯಲ್ಲಿ ತೊಡಗಿಸಿಕೊಂಡು, ಸ್ವಾಮಿಯ ಕೃಪೆಗೆ ಪಾತ್ರರಾದರು. ಭಕ್ತರ ಅಪಾರ ಜನಸ್ತೋಮದ ನಡುವೆ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು. ಈ ಸಂದರ್ಭ ಹಲವು ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜೆ ಮತ್ತು ಅನ್ನದಾನವೂ ಆಯೋಜಿಸಲಾಗಿತ್ತು.
ಈ ಧಾರ್ಮಿಕ ಉತ್ಸವ ಭಕ್ತರಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪ್ರೇರಣೆಯಾಗಿ ಮಾರ್ಪಟ್ಟಿದ್ದು, ಸ್ಥಳೀಯರು ಮತ್ತು ವಿವಿಧ ಭಾಗದ ಭಕ್ತರು ಅದರಲ್ಲಿ ಭಾಗವಹಿಸಿದರು.
City Today News 9341997936
