
ಬೆಂಗಳೂರು, ಮಾ. 30: ಯುಗಾದಿ ಹಬ್ಬದ ಪ್ರಯುಕ್ತ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶ್ವಾವಸು ನಾಮ ಸಂವತ್ಸರದ ವಿಶೇಷ ಪಂಚಾಂಗ ಶ್ರವಣ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಪರಮ ಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ, ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ. ವಾದೀಂದ್ರಾಚಾರ್ಯ ಹಾಗೂ ಶ್ರೀ ಕೃಷ್ಣ ಗುಂಡಾಚಾರ್ಯರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯವನ್ನು ಆಯೋಜಿಸಲಾಯಿತು.
ಸಂಜೆ 6.30ಕ್ಕೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಪಂಡಿತರಾದ ಡಾ. ಅಗ್ನಿಹೋತ್ರಿ ವೇಣುಗೋಪಾಲಾಚಾರ್ಯರು ವಿಶ್ವಾವಸು ನಾಮ ಸಂವತ್ಸರದ ಪಂಚಾಂಗ ಶ್ರವಣವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ, ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
ಶ್ರೀ ನಂದಕಿಶೋರಾಚಾರ್ಯ ಅವರು ಈ ಬಗ್ಗೆ ಮಾತನಾಡಿ, “ಯುಗಾದಿ ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಭಕ್ತಾದಿಗಳು ಧಾರ್ಮಿಕ ಪರಂಪರೆಯನ್ನು ಪಾಲಿಸಿ, ಪಂಚಾಂಗ ಶ್ರವಣದ ಮೂಲಕ ಹೊಸ ವರ್ಷದ ಭವಿಷ್ಯ ಕುರಿತು ಮಾಹಿತಿಯನ್ನು ಪಡೆದುಕೊಂಡರು,” ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಠದ ಹಲವು ಪಂಡಿತರೂ ಉಪಸ್ಥಿತರಿದ್ದರು.
City Today News(citytoday.media) 9341997936
