
ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕ ರಾದ ಶ್ರೀ ಆರ್. ಕೆ. ವಾದೀಂದ್ರಾ ಚಾರ್ಯರ ನೇತೃತ್ವದಲ್ಲಿ ಶ್ರೀ ರಾಮ ನವಮೀ ಉತ್ಸವದ ಪ್ರಯುಕ್ತ ಶ್ರೀ ರಾಮ ದೇವರ ವಿಗ್ರಹಕ್ಕೆ ವಿಶೇಷ ಅಭಿಷೇಕ ಸುವರ್ಣ ತೊಟ್ಟಿಲುನಲ್ಲಿ ಶ್ರೀ ರಾಮ ದೇವರಿಗೆ ಅಲಂಕಾರ ಹಾಗೂ ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ, ರಥೋತ್ಸವ, ಶ್ರೀಹರಿ ಭಜನೆ ಯೊಂದಿಗೆ ವಿಶೇಷ ಪೂಜಾ ಕಾರ್ಯಕ್ರಮವು ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಈ ಸಂದರ್ಭದಲ್ಲಿ ಶ್ರೀಮಠದ ಧರ್ಮಾಧಿಕಾರಿಗಳಾದ ಶ್ರೀ ಕೃಷ್ಣ ಗುಂಡಾಚಾರ್ಯರು ಹಾಗೂ ಅರ್ಚಕ ವೃಂದದವರು ಶ್ರೀಮಠದ ಸಿಬ್ಬಂದಿಗಳು ಭಕ್ತರು ಪೂಜಾ ಉತ್ಸವಗಳಲ್ಲಿ ಭಾಗವಹಿಸಿದ್ದರು ಹಾಗೂ ಸನ್ನಿಧಿಗೆ ಆಗಮಿಸಿದ ಪ್ರತಿಯೊಬ್ಬ ಭಕ್ತರಿಗೂ ಶ್ರೀ ರಾಮದೇವರ ಪ್ರಸಾದ ಹಾಗೂ ಕೋಸಂಬರಿ, ಮಜ್ಜಿಗೆ, ಪಾನಕ, ವಿತರಣೆ ಮಾಡಲಾಯಿತು, ಭಕ್ತಾದಿ ಗಳು ಶ್ರೀರಾಮ್ ಜೈ ರಾಮ್ ಜೈ ಜೈ ರಾಮ್ ಎಂಬ ಘೋಷದೊಂದಿಗೆ ಸಂತೋಷವನ್ನು ವ್ಯಕ್ತಪಡಿಸುತ್ತಾ ಪ್ರಸಾದವನ್ನು ಸ್ವೀಕರಿಸಿ ಶ್ರೀ ರಾಮ ಚಂದ್ರ ದೇವರ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936
