
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಈ ದಿನ ಗುರುವಾರದ ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಶ್ರೀ ಗುರು ರಾಯರ ಬೃಂದಾವನದ ಮುಂಭಾಗದಲ್ಲಿ ಅರ್ಚಕರಾದ ಶ್ರೀ ನಂದಕಿಶೋರ್ ಆಚಾರ್ಯರು ಸಂಕಲ್ಪವನ್ನು ಮಾಡಿಸಿದರು. ನಂತರ ಶ್ರೀ ದೇವೇಗೌಡರು ಪ್ರಾರ್ಥನೆಯನ್ನು ಮಾಡಿ ದೀಪಗಳನ್ನು ಬೆಳಗಿಸಿ ಮಂಗಳಾರತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಶೇಷವಸ್ತ್ರ, ಪರಿಮಳ ಪ್ರಸಾದ, ಫಲಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು,
City Today News 9341997936
