
ಬೆಂಗಳೂರು, ಏಪ್ರಿಲ್ 11: ಪರಮಪೂಜ್ಯ ಶ್ರೀ ಶ್ರೀ 1008 ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆಶೀರ್ವಾದದಂತೆ, ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಭಕ್ತರ ಗಮನ ಸೆಳೆಯಿತು.
ಈ ಕಾರ್ಯಕ್ರಮವು ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರ ಸಂಜೆ ಜರುಗಿದ್ದು, ನೆಲಮಂಗಲದ ಶ್ರೀ ಗಣೇಶ ನೃತ್ಯಾಲಯ ಸಂಗೀತ ಮತ್ತು ನೃತ್ಯ ಶಾಲೆಯ ಪ್ರಭಾರಿಗಳಾದ ವಿದುಷಿ ಶ್ರೀಮತಿ ಭಾವನಾ ಗಣೇಶ್ ಮತ್ತು ವಿದ್ವಾನ್ ಶ್ರೀ ಎಂ.ಡಿ. ಗಣೇಶ್ ದಂಪತಿಗಳು ತಮ್ಮ ಶಿಷ್ಯರಾದ ಸುಮಾರು 35 ವಿದ್ಯಾರ್ಥಿಗಳೊಂದಿಗೆ “ಶ್ರೀಕೃಷ್ಣ ಲೀಲಾ” ಭರತನಾಟ್ಯ ಪ್ರದರ್ಶನವನ್ನು ನಡೆಸಿಕೊಟ್ಟರು.
ಈ ನೃತ್ಯಾವಳಿಯಲ್ಲಿ ಶ್ರೀಕೃಷ್ಣನ ಬಾಲ್ಯ ಲೀಲೆಗಳು, ರಾಸಕ್ರೀಡೆ, ನಂದನ ಮದುವೆ ಸೇರಿದಂತೆ ವಿವಿಧ ಘಟನಾವಳಿಗಳನ್ನು ಭಾವನಾತ್ಮಕವಾಗಿ ಪ್ರದರ್ಶಿಸಲಾಯಿತು. ಭಕ್ತರು ಮತ್ತು ಪ್ರೇಕ್ಷಕರು ಈ ಕಾರ್ಯಕ್ರಮವನ್ನು ಮನಸ್ಸಾರೆ ಆನಂದಿಸಿ, ಕಲಾತ್ಮಕ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಮಠದ ಹಿರಿಯರು ತಿಳಿಸಿದ್ದಾರೆ.
City Today News 9341997936
