
ಬೆಂಗಳೂರು, ಜೂನ್ 26: ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ, ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು.
ಸಂಜೆಯ ವೇಳೆಗೆ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೂ ಆಯೋಜಿಸಲ್ಪಟ್ಟಿದ್ದವು. ಈ ಸಂದರ್ಭದಲ್ಲಿ ಖ್ಯಾತ ಗಾಯನಶಿಲ್ಪಿ ವಿದುಷಿ ಶ್ರೀಮತಿ ಕಮಲಾ ಪ್ರಾಣೇಶ್ ಮತ್ತು ಅವರ ಸಂಗಡಿಗರು ಭಕ್ತಿಗೀತೆಗಳ ಗಾಯನ ಸೇವೆ ಸಲ್ಲಿಸಿದರು.
ಈ ಕುರಿತು ಮಾಹಿತಿ ನೀಡಿದ ಶ್ರೀ ನಂದಕಿಶೋರ್ ಆಚಾರ್ ಅವರು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಭಕ್ತಾದಿಗಳ ಸ್ಫೂರ್ತಿದಾಯಕ ಸನ್ನಿಧಾನದಿಂದ ಮಠದ ವಾತಾವರಣ ಧಾರ್ಮಿಕ ಭಾವನೆಗಳಿಂದ ತುಂಬಿತ್ತೆಂದು ತಿಳಿಸಿದ್ದಾರೆ.
City Today News 9341997936
