
ಬೆಂಗಳೂರು: ಸುವರ್ಣ ಸಂಭ್ರಮ-2026 ಅಂಗವಾಗಿ ವಿಶ್ವಕರ್ಮ ಸಮುದಾಯ ಭವನದ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 29ರಂದು ಯಲಹಂಕ ಉಪನಗರದಲ್ಲಿರುವ ವಿಶ್ವಕರ್ಮೇಣ ಧಾಮ್ನೆ (ಸಿ.ಎ 21, ಸೆಕ್ಟರ್–ಎ)ಯಲ್ಲಿ ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ವಿಶ್ವಬ್ರಾಹ್ಮಣ ಸಂಘ (ನೋಂ) ಬೆಂಗಳೂರು ತಿಳಿಸಿದೆ.
ಈ ಕುರಿತು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ತುಕಾರಾಮ್ ಆಚಾರ್ಯ, ಜಯಲಕ್ಷ್ಮಿ ಎಸ್. ಆಚಾರ್ಯ, ಶಶಿಕಾಂತ್ ಎಂ., ಮೋಹನ್ ಮಲ್ಲಮ್ಮಾರ್ ಹಾಗೂ ಮಂಜುನಾಥ್ ಆಚಾರ್ಯ ಮಾತನಾಡಿದರು.
ಕಾರ್ಯಕ್ರಮವು ಬೆಳಿಗ್ಗೆ 7.30ರಿಂದ ರಾತ್ರಿ 8ರವರೆಗೆ ನಡೆಯಲಿದ್ದು, ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು, ವಿಶ್ವಕರ್ಮ ಜಗದ್ಗುರು ಪೀಠದ ಶಿವ ಸುಜ್ಞಾನ ತೀರ್ಥ ಮಹಾಸ್ವಾಮಿಗಳು, ಶಾಸಕ ಎಸ್.ಆರ್. ವಿಶ್ವನಾಥ್, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಮುದಾಯದ ಸದಸ್ಯರು, ಸಂಘದ ಪದಾಧಿಕಾರಿಗಳು ಸೇರಿ ಸುಮಾರು 1200ರಿಂದ 1500 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
City Today News 9341997936
