ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಎಸ್ ಬೊಮ್ಮಾಯಿ ಸರ್ ಗೆ ಹೃತ್ಪೂರ್ವಕ ಅಭಿನಂದನೆಗಳು-ಮಲ್ಲನಗೌಡ ಎಸ್ ಪಾಟೀಲ

ರವಿವಾರ, ದಿನಾಂಕ 01.08.2021 ರಂದು ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಎಸ್ ಬೊಮ್ಮಾಯಿ ಸರ್ ಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಿ ಸನ್ಮಾನಿಸಿದ ಕ್ಷಣ. ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನದ ಉದ್ಯಮಿ ಹಾಗೂ ಅಖಿಲ ಭಾರತ ಲಿಂಗಾಯತ ಮಹಾಸಭಾದ ಐಟಿಬಿಟಿ ಘಟಕದ ರಾಷ್ಟೀಯ ಅಧ್ಯಕ್ಷರಾದ ಮಲ್ಲನಗೌಡ ಎಸ್ ಪಾಟೀಲ (ಕೋರವಾರ), ಶ್ರೀ ಬಸವರಾಜ ದಿಂಡುರ ನಿಕಟ ಪೂರ್ವ್ ರಾಜ್ಯಾಧ್ಯಕ್ಷರು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಮಾಜಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ, ಶ್ರೀ ವಿ. ಸೋಮಣ್ಣ, ಎಂ. ಎಸ್ ಪಾಟೀಲ, ಮಹಾಂತೇಶ್ ತಾರಾಪುರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

City Today News
9341997936

ಪಿಪಿಇ ಕಿಟ್ ಖರೀದಿಯಲ್ಲಿ ಮತ್ತೊಂದು ಹಗರಣ

ಕೋವಿಡ್ -19 ಸಂದರ್ಭದಲ್ಲಿ ರಾಜ್ಯ ಸರ್ಕಾರದ ಅನೇಕ ಇಲಾಖೆಗಳಲ್ಲಿ ಖರೀದಿ ಪ್ರಕ್ರಿಯೆಯಲ್ಲಿ ನಿರಂತರವಾಗಿ ಭುಷ್ಯಾಚಾರ ನಡೆದಿರುತ್ತದೆ . ಕಳೆದ ವರ್ಷ ಮೊದಲನೆಯ ಸಂದರ್ಭದಲ್ಲಿ ಕರ್ನಾಟಕ ಡ್ರಗ್ಸ್ ಲಾಜಿಸ್ಟಿಕ್ಸ್ ಮತ್ತು ವೇರ್ ಹೌಸಿಂಗ್ ಸಂಸ್ಥೆಯು ಪಿಪಿಇ ಕಿಟ್ , ಸ್ಯಾನಿಟೈಸರ್ , ಔಷಧಿ , ಉಪಕರಣ ಮತ್ತು ಇತರ ಪರಿಕರಗಳ ಖರೀದಿಯಲ್ಲಿ ನೂರಾರು ಕೋಟಿ ಹಗರಣ ನಡೆದಿರುವ ಬಗ್ಗೆ ಕೆ . ಆರ್ . ಎಸ್ . ಪಕ್ಷವು ಬಹಿರಂಗ ಮಾಡಿ ಎಸಿಬಿ ಹಾಗೂ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಕಾಗದಪತ್ರಗಳ ಸಮಿಗೆ ದೂರು ನೀಡಿತ್ತು . ನಮ್ಮ ಈ ದೂರಿನ ಆಧಾರದ ಮೇಲೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಂದಿನ ಅಧ್ಯಕ್ಷರಾಗಿದ್ದ ಎಚ್ . ಕೆ . ಪಾಟೀಲ್ ನೇತೃತ್ವದ ಸಮಿತಿಯು ವಿಚಾರಣೆ ಕೈಗೆತ್ತಿಕೊಂಡು , ತನ್ನ ವಿಚಾರಣಾ ವರದಿಯನ್ನು ವಿಧಾನಸಭಾಧ್ಯಕ್ಷರಿಗೆ ಸಲ್ಲಿಸಿದ .

ಕೋವಿಡ್ -19 ಸಂಬಂಧಿತ ಬಹುತೇಕ ಖರೀದಿ ಪ್ರಕ್ರಿಯೆಗಳಲ್ಲಿ ಅಕ್ರಮ ಮತ್ತು ಅವ್ಯವಹಾರ ನಡೆದಿರುವುದು ನಿರಂತರವಾಗಿ ಕಂಡುಬಂದಿದೆ . ಇವೆಲ್ಲದರ ಬಗ್ಗೆ ಸರ್ಕಾರ ಯಾವುದೇ ತನಿಖೆ ನಡಸದ ಅಕ್ರಮಗಳಲ್ಲಿ ಭಾಗಿಯಾಗಿರುವವರ ರಕ್ಷಣೆಗೆ ನಿಂತಿದೆ . ಇದರ ಮುಂದುವರಿದ ಭಾಗವೇ , ನಾವು ಇಂದು ಬಹಿರಂಗ ಮಾಡುತ್ತಿರುವ , ಮತ್ತೊಂದು ಖರೀದಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯಲು ಕಾರಣವಾಗಿದೆ . ಇತ್ತೀಚಿಗೆ ಕೋವಿಡ್ -19 ಎರಡನೇ ಅತಿ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ( KSMSCL , ಹಿಂದ ಕರ್ನಾಟಕ ಡ್ರಗ್ಸ್ ಲಾಜಿಕ್ ಮತ್ತು ವೇರ್ ಹೌಸಿಂಗ್ ಸೊಸೈಟಿ ) ಕೊವಿಡ್ ವಾರಿಯರ್ ಗಳಿಗೆ ಎಂದು 12 ಲಕ್ಷ ಪಿಪಿಇ ಕಿಟ್ ಖರೀದಿಗಾಗಿ ದಿನಾಂಕ 26-4-2021 ರಂದು ದರಪಟ್ಟಿಯನ್ನು ( IFQ – Invitation For Quotation ) ಆಹ್ವಾನಿಸಿತ್ತು . ಅನೇಕ ಸರಬರಾಜುದಾರರು ಮತ್ತು ಕಂಪನಿಗಳು ತಮ್ಮ ದರಪಟ್ಟಿಯನ್ನು ಇದಕ್ಕೆ ಪ್ರತಿಯಾಗಿ ಸಲ್ಲಿಸಿದ್ದವು . ಇದರಲ್ಲಿ ಎಚ್ & ಜಡ್ ಅಪಾರ ( H & Z ) ಕಂಪನಿ ಒಂದು ಪಿಪಿಇ ಕಿಟ್ ಗೆ 498 ರೂಗಳ ದರಪಟ್ಟಿ ಸಲ್ಲಿಸಿ L1 ಸ್ನಾನದಲ್ಲಿರುತ್ತಾರೆ ಮತ್ತು ಯುಕ್ಕಾ ಫ್ಯಾಷನ್ 520 ರೂಗಳ ದರ ನೀಡಿ 4 ನೇ ಸ್ನಾನದಲ್ಲಿರುತ್ತಾರೆ . ಆದರೆ H & Z ಅಪಾರ ಸರಬರಾಜು ವೇಳಾಪಟ್ಟಿಯನ್ನು ನೀಡಿರುವುದಿಲ್ಲ , ಆದ್ದರಿಂದ , ನಿಯಮದ ಪುಕಾರ ಅವರನ್ನು ಖರೀದಿ ಪುಕ್ರಿಯೆಯಿಂದ ಹೊರಗಿಡಬೇಕಾಗಿರುತ್ತದೆ . ಮುಂದುವರಿದು , ದಿನಾಂಕ 14-06-2021 ರಂದು KSMSCL ಆನ್ಲೈನ್ ದರ ಸಂಧಾನ ಸಭೆ ಕರೆದು ತಮ್ಮ ದರಗಳನ್ನು ಪುನರ್ ವಿಮರ್ಶಿಸಲು ಕೇಳಿಕೊಳ್ಳುತ್ತಾರೆ . ತದನಂತರ ದಿನಾಂಕ 21-06-2021 ರಂದು KSMSCL ಎಲ್ಲಾ ಸರಬರಾಜುದಾರರಿಗೆ ಇ – ಮೇಲ್ ಮುಖಾಂತರ ಪಿಪಿಇ ಕಿಟ್‌ಗಳ ದರವನ್ನು 370 ರೂಪಾಯಿಗಳಿಗೆ ನಿಗದಿ ಮಾಡುತ್ತಾರೆ . ಇದಕ್ಕೆ ಪ್ರತಿಯಾಗಿ ನಾಲ್ಕನೇ ಸ್ನಾನದಲ್ಲಿದ್ದ ಯುಕ್ಕಾ ಫ್ಯಾಷನ್ ರವರು 22 06-2021ರಂದು 385 ( ರೂ 367+ ಜಿಎಸ್ ಟಿ ) ರೂಪಾಯಿಗಳಿಗೆ ಸರಬರಾಜು ಮಾಡುವುದಾಗಿ ಮತ್ತು H8Z ಅಪಾರೆಲ್ ನವರು 400 ರೂಗಳಿಗೆ ಸರಬರಾಜು ಮಾಡುವುದಾಗಿ ಇ – ಮೇಲ್ ಮುಖಾಂತರ ಅದೇ ದಿನ ತಿಳಿಸುತ್ತಾರೆ . ಅಂತಿಮವಾಗಿ KSMSCL ದಿನಾಂಕ 03-07-2021ರಂದು 4 ಲಕ್ಷ ಪಿಪಿಇ ಕಿಟ್ ಗಳ ಖರೀದಿಗೆ 16 ಕೋಟಿ ರೂಗಳ ಖರೀದಿ ಆದೇಶವನ್ನು ಹೊರಡಿಸುತ್ತಾರೆ . ಈ ಖರೀದಿ ಆದೇಶದ ಮೇಲೆ ಇಲ್ಲಿಯವರೆಗೂ H8Z ಅಪಾರೆಲ್ 2 ಲಕ್ಷ ಪಿಪಿಇ ಕಿಟ್ ಗಳನ್ನು ಸರಬರಾಜು ಮಾಡಿರುತ್ತಾರೆ . ಇವರು ಸರಬರಾಜು ಮಾಡಿರುವ ಪಿಪಿಇ ಕಿಟ್ ಗಳೂ ಕಳಪೆ ಗುಣಮಟ್ಟದ್ದಾಗಿದ್ದು ನಿಗದಿಪಡಿಸಿರುವ ಮಾನದಂಡದಿಂದ ಕೂಡಿರುವುದಿಲ್ಲ , ಮೊದಲನೇ ಖರೀದಿ ಆದೇಶದಿಂದ ಸರ್ಕಾರಕ್ಕೆ 60 ಲಕ್ಷ ರೂಪಾಯಿಗಳ ನಷ್ಟ ಉಂಟಾಗಿದ್ದು ಜೊತೆಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಸರಬರಾಜಾಗಿದೆ . ಉಳಿದ 8 ಲಕ್ಷ ಪಿಪಿಇ ಕಿಟ್ ಗಳ ಸರಬರಾಜು ಆದೇಶ ನೀಡಿದರೆ , ಸರ್ಕಾರಕ್ಕೆ ಒಟ್ಟಾರೆ 1 ಕೋಟಿ 80 ಲಕ್ಷ ನಷ್ಟ ಉಂಟಾಗುತ್ತದೆ . ಈ ಅಕ್ರಮದಲ್ಲಿ KSMSGL ಅಧಿಕಾರಿಗಳು ನೇರವಾಗಿ ಭಾಗಿಯಾಗಿದ್ದಾರೆ . ಇಲ್ಲಿ ಗಮನಿಸಬೇಕಾದ ಮಹತ್ವದ ಅಂಶವೆಂದರೆ ನಿಗಮದ ವ್ಯವಸ್ಕಾಪಕ ನಿರ್ದೇಶಕರಿಂದ ಹಲವಾರು ಮಾಹಿತಿಗಳನ್ನು ಮರೆಮಾಚಿ ಖರೀದಿ ಪ್ರಕ್ರಿಯೆ ನಡೆಸಲಾಗಿದೆ . ಯಾವ ಕಾರಣಕ್ಕಾಗಿ ಯುಕ್ಕಾ ಫಾಶನ್ ರವರನ್ನು ಕೈಬಿಡಲಾಗಿದೆ ಎಂದು ಕಾರಣ ನೀಡದೆ H8Z ಅಪಾರಲ್ ಗೆ ಖರೀದಿ ಆದೇಶ ನೀಡಲಾಗಿದೆ ಎಂದು ತಿಳಿಸಿಲ್ಲ . KSMSCL ಅಧಿಕಾರಿಗಳು ದುಷ್ಟಕೂಟ ರಚಿಸಿಕೊಂಡು , ಸಂಪೂರ್ಣವಾಗಿ ಕಳಪೆ ಗುಣಮಟ್ಟದ ಪರಿಕರಗಳನ್ನು ಮತ್ತು ಔಷಧಿಗಳನ್ನು ಖರೀದಿ ಮಾಡುತ್ತಿದ್ದಾರೆ . ಕಳಪೆ ಗುಣಮಟ್ಟದಲ್ಲಿ ಖರೀದಿ ಯಾದ ಉಪಕರಣ ಮತ್ತು ಔಷಧಿಗಳಿಗೆ ಗುಣಮಟ್ಟ ಪರೀಕ್ಷೆಯ ಫಲಿತಾಂಶವನ್ನು ತಿದ್ದಿ ತಮಗೆ ಬೇಕಾದಂತಹ ವರದಿಯನ್ನು ನೀಡುತ್ತಿದ್ದಾರೆ . ಪ್ರಸ್ತುತ ಸರಬರಾಜಾಗಿರುವ ಪಿಪಿಇ ಕಿಟ್‌ಗಳು ಅತ್ಯಂತ ಕಳಪೆಯಾಗಿದ್ದು ಜಿಲ್ಲಾ ಗುಣಮಟ್ಟ ಪರಿವೀಕ್ಷಕರಿಗೆ ಉತ್ತಮ ಗುಣಮಟ್ಟ ಎಂದು ವರದಿ ನೀಡುವಂತೆ ಒತ್ತಡ ಮತ್ತು ಬೆದರಿಕೆ ಹಾಕಲಾಗುತ್ತಿದೆ . ಇಲ್ಲಿ ಗಮನಿಸಬೇಕಾದ ಮತ್ತೊಂದು ಪ್ರಮುಖ ಅಂಶವೆಂದರೆ KSMSCL ನಿರಂತರವಾಗಿ ಟೆಂಡರ್ ಪ್ರಕ್ರಿಯೆ ಕೈಬಿಟ್ಟು ಕೇವಲ ದರಪಟ್ಟಿ ಆಧಾರದ ಮೇಲೆ ಖರೀದಿ ನಡೆಸುತ್ತಿರುವುದು . ಅಲ್ಯಾವಧಿ ಟೆಂಡರ್ ( Short Term Tender ) ಕರೆಯಲು ಅವಕಾಶವಿದ್ದರೂ ಕೂಡ , ದರಪಟ್ಟಿಯ ಆಧಾರದ ಮೇಲೆ ಖರೀದಿ ಮಾಡಲಾಗುತ್ತಿದೆ . ಟೆಂಡರ್ ಕರೆದು ನೇರವಾಗಿ ಉತ್ಪಾದಕರಿಂದ ಖರೀದಿಸುವ ಎಲ್ಲಾ ಅವಕಾಶಗಳಿದ್ದರೂ ಕೂಡ ಮಧ್ಯವರ್ತಿಗಳಿಗೆ ಅವಕಾಶವಾಗುವಂತೆ ಖರೀದಿ ಪ್ರಕ್ರಿಯ ನಡೆಸಲಾಗುತ್ತಿದೆ . ಖರೀದಿ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆಯ ಕೊರತೆ ಇದ್ದು ಎಲ್ಲವನ್ನು ಗೋಪ್ಯವಾಗಿ ನಡೆಸಲಾಗುತ್ತಿದೆ . ತುರ್ತಾಗಿ ಅಗತ್ಯ ಎಂದು ದರಪಟ್ಟಿ ಕರಯುವ ನಿಗಮವು ಅಂತಿಮವಾಗಿ ಖರೀದಿ ಮಾಡಲು ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತದೆ ಮತ್ತು ಆ ಕಾರಣಕ್ಕಾಗಿ ನೂರಾರು ಕೋಟಿ ಸಾರ್ವಜನಿಕ ಹಣ ನಷ್ಟ ಮಾಡುತ್ತಿದ್ದು , ಜೊತೆಗೆ ಕಳಪ ಗುಣಮಟ್ಟದ ಔಷಧಿ ಮತ್ತು ಪರಿಕರಗಳು ಖರೀದಿ ಮಾಡುತ್ತಿದೆ . ಮೊದಲನೇ ಅಲೆಯ ಸಂದರ್ಭದಲ್ಲಿ ಕೊವಿಡ್ -19 ನ ಪುಮುಖ ಚಿಕಿತ್ಸಾ ಕೇಂದ್ರ ಆಗಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್ ಗಳ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು . ಆ ಸಂದರ್ಭದಲ್ಲಿ ದರ ಹೆಚ್ಚಾಗಲು ಮತ್ತು ಗುಣಮಟ್ಟದಲ್ಲಿ ರಾಜಿಯಾಗಲು ತುರ್ತು ಪರಿಸ್ಥಿತಿಯ ಕಾರಣ ನೀಡಲಾಗುತ್ತಿತ್ತು . ಇಷ್ಟೆಲ್ಲಾ ನಡೆದಿದ್ದರೂ ಕೂಡ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ . ಇದರಿಂದ ಸರ್ಕಾರದ ಉನ್ನತ ಹಂತದ ಅಧಿಕಾರಿಗಳು ಮತ್ತು ಮಂತ್ರಿಗಳು ನೇರವಾಗಿ ಭಾಗಿಯಾಗಿದ್ದಾರೆ ಎಂದು ಹೇಳಲು ಯಾವುದೇ ಸಂದೇಹವಿಲ್ಲ . ಟೆಂಡರ್ ಕರೆಯದೆ ಮತ್ತು ಖರೀದಿ ಆದೇಶವನ್ನು ತನ್ನ ವೆಬ್ ಸೈಟಿನಲ್ಲಿ ಹಾಕದಿರುವುದು , ಮಾಹಿತಿಯನ್ನು ಮುಚ್ಚಿಟ್ಟು ಅಕ್ರಮ ನಡೆಸಲು ಮಾಡಿಕೊಂಡಿರುವ ವ್ಯವಸ್ಥೆಯಾಗಿದೆ . ಎರಡು ತಿಂಗಳುಗಳ ಹಿಂದೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ KSMSCL ಸೇರಿದಂತೆ ಆರೋಗ್ಯ ಇಲಾಖೆಯಲ್ಲಿನ ಕೊವಿಡ್ ಸಂಬಂಧಿತ ಖರೀದಿ ಪ್ರಕ್ರಿಯೆ ಬಗೆ ಹತ್ತಾರು ಪ್ರಶ್ನೆಗಳನ್ನು , ಆರೋಗ್ಯ ಇಲಾಖೆ ಇದುವರೆಗೂ ಉತ್ತರ ನೀಡದೆ ಕಾಲಹರಣ ಮಾಡಿ ನುಣುಚಿಕೊಳ್ಳುವ ಕೆಲಸ ಮಾಡುತ್ತಿದೆ . ಈ ಹಿಂದೆ ನಾವು ನೀಡಿರುವ ದೂರಿನ ಆಧಾರದ ಮೇಲೆ ತನಿಖೆ ನಡೆಸಲು ಮುಂದಾದ ಸಂದರ್ಭದಲ್ಲಿ , ವಿಚಾರಣೆಗೆ ತಡೆಯೊಡ್ಡುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೋವಿಡ್ – 19 ಕಾರಣ ನೀಡಿ ಎಲ್ಲಾ ವಿಧಾನಮಂಡಲದ ಸಮಿತಿಗಳು ಯಾವುದೇ ಪರಿಶೀಲನಾ ಭೇಟಿ ನೀಡಬಾರದೆಂದು ಆದೇಶಿಸಿ ತನಿಖೆ ನಡೆಯದಂತೆ ನೋಡಿಕೊಂಡಿದ್ದರು . ನಂತರ ಕೊವಿಡ್ ಹಾವಳಿ ಕಡಿಮೆಯಾದರೂ ಕೂಡ ಈ ಆದೇಶವನ್ನು ಅವರು ಹಿಂಪಡೆಯಲಿಲ್ಲ . ನಂತರ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ತನ್ನ ವಿಚಾರಣ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲು ಅನುಮತಿಗಾಗಿ ಮಾನ್ಯ ವಿಧಾನಸಭಾಧ್ಯಕ್ಷರಿಗೆ ಸಲ್ಲಿಸಿ ಹಲವಾರು ತಿಂಗಳುಗಳೇ ಕಳದರೂ ಇಲ್ಲಿಯವರೆಗೂ ಆ ವರದಿ ಸದನದಲ್ಲಿ ಮಂಡನೆಯಾಗಿಲ್ಲ . ಯಾಕಾಗಿ ಸದನದಲ್ಲಿ ಮಂಡನೆಯಾಗಿ ಇಲ್ಲ ಎಂದು ಮಾನ್ಯ ವಿಧಾನಸಭಾಧ್ಯಕ್ಷರು ತಿಳಿಸಬೇಕಾಗಿದೆ . ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಕೊವಿಡ್ ಸಂದರ್ಭದಲ್ಲಿನ ಖರೀದಿ ಸೇರಿದಂತೆ ಅನೇಕ ಅಕ್ರಮಗಳ ಕಾರಣಕ್ಕಾಗಿಯೇ ಪತನವಾಯಿತು ಎಂಬುದನ್ನು ನಾವು ಗಮನಿಸಬೇಕು . ಯಡಿಯೂರಪ್ಪನವರ ನೇತೃತ್ವದ ಸರ್ಕಾರವು ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಎಲ್ಲಾ ಪತ್ರಿಕೆಗಳಿಗೆ ಜಾಹೀರಾತು ನೀಡಿ ತಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದರು . ಆದರೆ ಇದರಲ್ಲಿ ಔಷಧಿ ಖರೀದಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಜಾಹೀರಾತು ಯಾಕೆ ನೀಡಿಲ್ಲವೆಂದು ತಿಳಿದಿಲ್ಲ . ಸರ್ಕಾರವು ಎಲ್ಲಾ ಖರೀದಿ ಪ್ರಕ್ರಿಯೆಗಳನ್ನು ಪಾರದರ್ಶಕ ಮಾಡಬೇಕು , ಖರೀದಿ ಆದೇಶಗಳನ್ನು , ಆದೇಶ ಹೊರಡಿಸಿದ ತಕ್ಷಣ ವೆಬ್ ಸೈಟಿನಲ್ಲಿ ಪ್ರಕಟಿಸಬೇಕು , ಇಲ್ಲಿಯವರೆಗೆ KSMSIL ನಲ್ಲಿ ನಡೆದಿರುವ ಖರೀದಿಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಮತ್ತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಕೆ . ಆರ್ . ಎಸ್ . ಪಕ್ಷ ಆಗ್ರಹಿಸುತ್ತದೆ .

ದೀಪಕ್ ಸಿ . ಎನ್ .

ಪ್ರಧಾನ ಕಾರ್ಯದರ್ಶಿ

City Today News
9341997936

According to experts at the Neuberg Centre for Genomic Medicine, the number of women diagnosed with lung cancer is on the rise.

  • Owing to reverse smoking, high lung cancer incidences seen in women
  • 80-85% of patients continue to report lung cancer at advance stages
  • Targeted tissue therapy fast becoming best alternative to chemotherapy for cancer treatment    
  • The life expectancy of lung cancer patients has increased from less than a year to 3-5 years with the help of genetic testing even in advanced stage cancer

India, Friday, July 30, 2021: Ahead of World Lung Cancer Day, the lung cancer experts at Neuberg Centre for Genomic Medicine Panel discussion on Lung Cancer Detection – How Late, is Late? shared the insights that lately, an increasing number of women are reporting cases of lung cancer. The lung cancer incidences in men continue to be high, however, the rising number of incidences in women has become a cause of concern. 

According to experts, weight loss, sputum production, cough, coughing blood are some of the prominent symptoms of lung cancer. Once cancer spreads from the lungs, it can go to the liver causing jaundice, spread to the adrenal glands causing them to fail, resulting in a low-BP emergency, pain, and fracture in bones and stroke or seizures when cancer reaches the brain.

Consuming cigarettes, tobacco chewing, kheni, hookah, betel leaf with tobacco, reverse smoking, household and traffic pollutants,  are the main causes of lung cancer, apart from occupational factors such as working in industries, mining sector, etc. The disease burden of tobacco-related malignancies is expected to rise by 12 percent in India in the next few years, the panelists stated.

Dr. (Brig) S. Viswanath, Medical Oncologist, Kumaran Hospital, said, “Most of the times lung cancer is mistaken for tuberculosis in the earlier stages as the symptoms of both the diseases are very similar. In both the cases, a patient experiences coughing and or coughing up blood. Smoking continues to be a major cause for lung cancer, the risk of developing lung cancer in smokers versus non-smokers is 20:1. A passive smoker has an increase chances of contracting cancer than a smoker. For treating the patient at the early stage, surgery is the most important method followed by radiotherapy. Now, more advanced therapy like targeted therapy and immunotherapy options are available which increases overall survival and  leads to better quality of life. Targeted and immunotherapies have fewer side effects compared to chemotherapy. Genetic testing has been a boon in deciding the therapy options leading to better survival rates. ”

Dr. Jagannath Dixit, Consultant Surgical Oncology, HCG Cancer Hospital, said, “50% of the lung cancer patients die in the first-year post-diagnosis. We can ensure a 14% to 20% decrease in deaths if the cancer is detected at the earlier stages. However, early symptoms are less visible, hence it is difficult to detect lung cancer at early stages. Reverse smoking has come across as a major cause of lung cancer among the rural women, especially those who work in the field in northern Karnataka.”

Dr Dixit emphasized on having a multidisciplinary care for patients with cancer where surgical, medical, molecular pathologist and genetic counselor contribute. There has been a drastic shift in the survival rate after the advent of targeted therapy and genetic testing.

Dr. Siddharth Srivastava, Chief Scientist (Molecular Oncology), Neuberg Center of Genomic Medicine, said, “Targeted therapy has emerged as an important method to treat cancer. Targeted therapies act on specific molecular targets associated with cancer, whereas most standard chemotherapies act on all rapidly dividing normal and cancerous cells, which also kill normal cells. Targeted therapy is known to cause lesser side effects as compared to chemotherapy while improving quality of life of patients.”

City Today News
9341997936

ದಲಿತ ಕೋಟಾದಡಿಯಲ್ಲಿ ಶ್ರೀ ಸುನೀಲ ವಲ್ಯಾಪುರೆ ಗೆ ಸಚಿವ ಸ್ಥಾನ ನೀಡುವಂತೆ ಭೋವಿ (ವಡ್ಡರ) ಸಮುದಾಯದ ಮುಖಂಡರ ಮನವಿ

ಪತ್ರಿಕಾ ಪ್ರಕಟಣೆ

ದಲಿತ ಕೋಟಾದಡಿಯಲ್ಲಿ ಶ್ರೀ ಸುನೀಲ ವಲ್ಯಾಪುರೆ ಗೆ ಸಚಿವ ಸ್ಥಾನ ನೀಡುವಂತೆ ಭೋವಿ (ವಡ್ಡರ) ಸಮುದಾಯದ ಮುಖಂಡರ ಮನವಿ
ಚಿಂಚೋಳಿಯಲ್ಲಿ ಬಿಎಸ್‌ ವೈ ನೀಡಿದ್ದ ಮಾತು ಉಳಿಸಿಕೊಳ್ಳುವ ಭರವಸೆ

ಬೆಂಗಳೂರು ಜುಲೈ 30 2021: ಚಿಂಚೋಳಿ ಉಪಚುನಾವಣೆಯ ಸಂಧರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪನವರು ನುಡಿದಂತೆ ವಿಧಾನಪರಿಷತ್‌ ಸದಸ್ಯರಾದ ಸುನೀಲ್‌ ವಲ್ಯಾಪುರೆ ಅವರನ್ನು ದಲಿತ ಕೋಟಾದಡಿಯಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭೋವಿ(ವಡ್ಡರ) ಸಮುದಾಯದ ಮುಖಂಡರುಗಳು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಭೋವಿ(ವಡ್ಡರ) ಮಹಾಸಭಾ ಕಾರ್ಯಾಧ್ಯಕ್ಷ ರಾಘವೇಂದ್ರ ಧಾರವಾಡ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭೋವಿ (ವಡ್ಡರ) ಸಮುದಾಯವು ಬಿ.ಜೆ.ಪಿ. ಪಕ್ಷಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಅದರಲ್ಲೂ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭೋವಿ (ವಡ್ಡರ) ಸಮುದಾಯ ಬಿ.ಜೆ.ಪಿ. ಪಕ್ಷಕ್ಕೆ ನಿರಂತರವಾಗಿ ಬೆಂಬಲ ಸೂಚಿಸಿದೆ. ಈ ಭಾಗದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಸಂಧರ್ಭದಲ್ಲಿ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಲು ನಮ್ಮ ಸಮುದಾಯದ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸುನೀಲ ವಲ್ಯಾಪುರೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ತಿಪ್ಪಣ್ಣ ಒಡಿರಾಜ, ಅಧ್ಯಕ್ಷರು, ಜಿಲ್ಲಾ ಭೋವಿ (ವಡ್ಡರ) ಸಮಾಜ ಕಲಬುರ್ಗಿ ಮಾತನಾಡಿ, 2 ಬಾರಿ ಶಾಸಕರಾಗಿ 1 ಬಾರಿ ಸಚಿವರಾಗಿ ಸುನೀಲ್‌ ವಲ್ಯಾಪುರೆ ಉತ್ತಮ ಕೆಲಸ ಮಾಡಿದ್ದು ಉತ್ತಮ ಆಡಳಿತದ ಅನುಭವ ಹೊಂದಿದ್ದವರಾಗಿದ್ದಾರೆ. ಶ್ರೀ.ಬಿ.ಎಸ್. ಯಡಿಯೂರಪ್ಪನವರು ಈ ರಾಜ್ಯದ ಮುಖ್ಯ ಮಂತ್ರಿಯಾಗಬೇಕೆಂದು ತಮ್ಮ ಮೀಸಲು ಕ್ಷೇತ್ರವಾದ ಚಿಂಚೋಳ ವಿಧಾನಸಭಾ ಕ್ಷೇತ್ರವನ್ನು ಉಪ ಚುನಾವಣೆ ಸಮಯದಲ್ಲಿ ಡಾ. ಅವಿನಾಶ ಜಾಧವರವರಿಗೆ ಬಿಟ್ಟುಕೊಡುವ ಮೂಲಕ ತ್ಯಾಗ ಮನೋಭಾವ ಮರೆದಿದ್ದಾರೆ. ಅಷ್ಟೆ ಅಲ್ಲದೆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಸುವ ಮುಖಾಂತರ ಶ್ರೀ.ಬಿ.ಎಸ್.ಯಡಿಯೂರಪ್ಪನವರ ಕೈ ಬಲಪಡಿಸಿದ್ದರು.

ಚಿಂಚೋಳಿ ಉಪ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಮಾನ್ಯ. ಶ್ರೀ.ಬಿ.ಎಸ್.ಯಡಿಯೂರಪ್ಪನವರು ಸಾರ್ವಜನಿಕ ಸಮಾರಂಭದಲ್ಲಿ ಸುನೀಲ ವಲ್ಯಾಪುರವರನ್ನು ಎಂ.ಎಲ್.ಸಿ. ಮಾಡಿ ಮಂತ್ರಿಯನ್ನಾಗಿ ಮಾಡಿ ನನ್ನ ಪಕ್ಷದಲ್ಲಯೇ ಇಟ್ಟುಕೊಳ್ಳುತ್ತೇನೆ ಎಂದು ಸಭೆಯಲ್ಲಿ ಘೋಷಿಸಿದ್ದರು. ಅಂದು ಪಕ್ಷಕ್ಕಾಗಿ ತ್ಯಾಗ ಮಾಡಿದ ಸುನೀಲ್‌ ವಲ್ಯಾಪುರೆ ಅವರಿಗೆ ತಾವು ಕೊಟ್ಟ ಮಾತನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಉಳಿಸಿಕೊಳ್ಳುತ್ತಾರೆ ಎನ್ನುವ ನಂಬಿಕೆ ನಮ್ಮದಾಗಿದೆ ಎಂದು ಹೇಳಿದರು.

ಈ ಹಿನ್ನಲೆಯಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಏಕೈಕ ಭೋವಿ (ವಡ್ಡರ) ಸಮುದಾಯದ ಶಾಸಕರಾಗಿರುವ ಶ್ರೀ. ಸುನೀಲ ವಲ್ಯಾಪುರೆ ರವರಿಗೆ ದಲಿತ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡಬೇಕು. ಈ ಮೂಲಕ ಹಿಂದುಳಿದ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ಅವಕಾಶ ಕಲ್ಪಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ, ನಿಟಕಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪನವರು ಹಾಗೂ ಬಿಜೆಪಿ ಮುಖಂಡರುಗಳಿಗೆ ಮನವಿಯನ್ನು ಸಲ್ಲಿಸಲಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್‌ ಕಂದಗಲ್‌ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೋವಿ ಸಮಾಜ, ಮಹಿಳಾ ಭೋವಿ(ವಡ್ಡರ) ಮಹಾಸಭಾ ಬೆಂಗಳೂರು ರಾಜ್ಯಾಧ್ಯಕ್ಷೆ ಶ್ರೀಮತಿ ಪದ್ಮಾ, ಬಾಗಲಕೋಟೆ ಜಿಲ್ಲಾ ಬೋವಿ ಸಮಾಜದ ಯುವ ಮುಖಂಡ ಈರಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

City Today News
9341997936

ಸನ್ಮಾನ್ಯ ಶ್ರೀ. ಕೆ.ಎಸ್.ಈಶ್ವರಪ್ಪರವರನ್ನು ಉಪಮುಖ್ಯಮಂತ್ರಿ ಮಾಡುವಂತೆ ಒತ್ತಾಯ

ಸನ್ಮಾನ್ಯ ಶ್ರೀ. ಕೆ.ಎಸ್.ಈಶ್ವರಪ್ಪನವರು , ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ , ಮೂರು ದಶಕಗಳ ಕಾಲ ತನ್ನ ಪಕ್ಷಕ್ಕಾಗಿ ತನ್ನನ್ನು ತೊಡಗಿಸಿಕೊಂಡು , ಜನಸಂಘದಲ್ಲಿ ಗುರುತಿಸಿಕೊಂಡಿದ್ದರು . 75-77ರ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಬಂಧನಕ್ಕೊಳಗಾಗಿದ್ದರು . 1982 ರಲ್ಲಿ ಶಿವಮೊಗ್ಗ ನಗರ ಘಟಕದ ಅಧ್ಯಕ್ಷರಾಗಿ , ಬಿಜೆಪಿ , ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡವರು . 1989 ರಲ್ಲಿ ಮೊಟ್ಟ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ , ಅಂದಿನಿಂದ ನಿರಂತರ ಪರಿಶ್ರಮದಿಂದ ದಕ್ಷಿಣಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ 2008 ರಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಡಿಯೂರಪ್ಪನವರಷ್ಟೇ ಶ್ರಮವನ್ನು ಈಶ್ವರಪ್ಪನವರು ಪಟ್ಟಿದ್ದಾರೆ . ಇಂದಿಗೂ ಸಹ ತನ್ನ ಪಕ್ಷವನ್ನು ತಾಯಿಯ ಸ್ಥಾನದಲ್ಲಿಟ್ಟು ಗೌರವಿಸುತ್ತಿದ್ದಾರೆ ಪಕ್ಷಸಿದ್ದಾಂತಗಳನ್ನು ಪಾಲನೆ ಮಾಡುತ್ತಿದ್ದಾರೆ . ರಾಜ್ಯದಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 55 % ರಷ್ಟಿರುವ ಹಿಂದುಳಿದ ವರ್ಗಗಳ ನಾಯಕರಾಗಿ , ಆ ವರ್ಗಗಳ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ .

ಯಾವತ್ತಿಗೂ ಸಹ ತನ್ನ ಪಕ್ಷನಿಷ್ಠೆಗೆ ಮೋಸ ಮಾಡದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ . ಯಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ಬಿಟ್ಟಾಗಳು ಸಹ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮುನ್ನೆಡೆಸಿದ್ದರವರು . 2008-2013ರ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪನವರ , ಸದಾನಂದಗೌಡರು , ಜಗದೀಶಶೆಟ್ಟರ್‌ ರವರು ಮುಖ್ಯಮಂತ್ರಿಗಳಾಗಿದ್ದರು , 2019 ರಲ್ಲಿ ಮತ್ತೊಮ್ಮೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ .

ರಾಜ್ಯದಲ್ಲಿ ಮತ್ತೆ ಲಿಂಗಾಯುತ ಸಮುದಾಯದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ . ಆದ್ದರಿಂದ ಮುಖ್ಯಮಂತ್ರಿ ಸ್ಥಾನದಿಂದ ಶ್ರೀ ಕೆ.ಎಸ್.ಈಶ್ವರಪ್ಪನವರಿಗೆ ರಾಜ್ಯ ಉಪಮುಖ್ಯಮಂತ್ರಿ ಸ್ಥಾನವನ್ನು ಕೊಡುವುದರ ಮೂಲಕ ಹಿಂದುಳಿದ ವರ್ಗ ಹಾಗೂ ರಾಜ್ಯದ ದೊಡ್ಡ ಸಮುದಾಯದಲ್ಲಿ ಒಂದಾದ ಕುರುಬ ಸಮಾಜಕ್ಕೆ ನ್ಯಾಯ ಕಲ್ಪಿಸಿಕೊಡಬೇಕಾಗಿ ಈ ಪತ್ರಿಕಾಗೋಷ್ಠಿಯ ಮೂಲಕ ರಾಜ್ಯ ಬಿಜೆಪಿ ಹಾಗೂ ಕೇಂದ್ರ ಬಿಜೆಪಿ ವರಿಷ್ಠರಿಗೆ ಮನವಿ ಮಾಡುತ್ತಿದ್ದೇವೆ .

-ವೀರೇಶ್ ಉಂಡೋಡಿ

ರಾಜ್ಯಾಧ್ಯಕ್ಷರು

ಮಂಜುನಾಥ್.ಎಂ

ರಾಜ್ಯ ಪ್ರಧಾನ ಕಾರ್ಯದರ್ಶಿ

City Today News
9341997936