GOVT. COMMITTED TO CREATE JOBS: B.S.Yediyurappa CM, launches Skill connect portal bringing both job seekers and recruiters on the same platform

Bengaluru
Chief Minister BS Yediyurappa on Monday said that the government is committed to provide impetuous to creating jobs by reviving economic and industrial activities.

He was speaking after launching the `Skill Connect Forum,’ portal that connects both private entrepreneurs and job seekers on the same platform.

The portal provides information on jobs available and who needs a job. “An unemployed will be imparted a skill and then enabled to get a job,” the CM said.

Registering in portal will get a job while it also provides a skilled pool of people for those looking to hire, the CM said.

Bridging Information, Communication:

Deputy Chief Minister Dr. C.N. Ashwath Narayan who is also the skill development Minister said that portal will be a boon to the youth seeking jobs. “It will avoid unemployment issue to a great extent,” he said.

“All these years, there was no information and communication between job seekers and recruiters. The portal will solve that problem,” he said.

Dr. Narayan said that there was no proper information on skilled workers and job market. Moreover, the skill development was not in sync with the market. All these issues have been addressed by the portal, the Deputy CM explained.

How it works:
The portal https://skillconnect.kaushalkar.com connects the job seekers and those who want to hire.
All one has to do is to register on the portal by uploading their educational, skill qualifications and other details.
Similarly those looking for hiring a specific skilled persons can also register on the portal giving job discription.
If they find someone suitable for the specified job skill, the companies or industries can contact the job seekers directly and vice versa.

Chief Minister’s political secretary SR Vishwanath, Skill Development Secretary Selva Kumar, Skill Development Authority Managing Director Ashwin Gowda and other trade body representatives were present.

City Today News

(citytoday.media)

9341997936

ಅಂಗೈನಲ್ಲೇ ಉದ್ಯೋಗ ಮಾಹಿತಿ: ಕೌಶಲ್ಯ ಸಂಪರ್ಕ ವೇದಿಕೆಗೆ ಚಾಲನೆ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪನಿರುದ್ಯೋಗ ನಿವಾರಣೆಗೆ ದಿಟ್ಟ ಹೆಜ್ಜೆ ಇಟ್ಟ ಸರಕಾರ

ಬೆಂಗಳೂರು: ಕೋವಿಡ್ 19 ನಂತರದ ಕಾಲದಲ್ಲಿ ರಾಜ್ಯದಲ್ಲಿ ಕುಂಠಿತಗೊಂಡಿರುವ ಆರ್ಥಿಕ, ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ ನಿಗಮವು ಖಾಸಗಿ ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳನ್ನು ಒಂದೇ ವೇದಿಕೆಗೆ ತಂದು ನಿರುದ್ಯೋಗ ನಿವಾರಿಸುವ ಸಲುವಾಗಿ ರೂಪಿಸಲಾಗಿರುವ ’ಕೌಶಲ್ಯ ಸಂಪರ್ಕ ವೇದಿಕೆ’ ಪೋರ್ಟಲ್ ಉದ್ಘಾಟಿಸಿ ಮಾತನಾಡಿದ ಅವರು, ಇದು ಸರಕಾರದ ಮಹತ್ವಾಕಾಂಕ್ಷೆ ಯೋಜನೆ. ವಲಸೆ ಕಾರ್ಮೀಕರಿಗೆ ಇದು ವರದಾನವಗಲಿದೆ ಮತ್ತು ಅವರಿಗೂ ತರಬೇತಿ ನೀಡಲಾಗುವುದು ಎಂದರು.

ಎಲ್ಲೆಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ, ಯಾರಿಗೆ ಕೆಲಸದ ಅಗತ್ಯವಿದೆ ಎಂಬ ಮಾಹಿತಿ ಈ ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ. ಲಭ್ಯವಿರುವ ಉದ್ಯೋಗಗಳಿಗೆ ಅಗತ್ಯವಾದ ತರಬೇತಿಯನ್ನು ನೀಡಿ ಆ ಅಭ್ಯರ್ಥಿಗಳನ್ನು ಕೌಶಲಗೊಳಿಸಿ ಸಂಬಂಧಿತ ಕಂಪನಿಗೆ ಕಳಿಸಲಾಗುವುದು ಎಂದು ಸಿಎಂ ನುಡಿದರು.

ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಖಚಿತವಾಗಿ ಕೆಲಸ ದೊರೆಯುತ್ತದೆ. ಅದೇ ರೀತಿ ಕಂಪನಿಗಳಿಗೂ ಈ ಸಂಪರ್ಕ ವೇದಿಕೆ ಮೂಲಕ ಉತ್ತಮ ಗುಣಮಟ್ಟದ ಕೌಶಲಪೂರ್ಣ ಮಾನವ ಸಂಪನ್ಮೂಲ ದೊರೆಯುತ್ತದೆ ಎಂದು ಅಷ್ಟೇ ಖಚಿತವಾಗಿ ಹೇಳಬಲ್ಲೆಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಮಾಹಿತಿ, ಸಂಪರ್ಕದ ಸೇತುವೆ:
ಕೌಶಲ್ಯ ಸಂಪರ್ಕ ವೇದಿಕೆ ಪೋರ್ಟಲ್ ಬಗ್ಗೆ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಕೌಶಲಾಭಿವೃದ್ಧಿ ಖಾತೆ ಸಚಿವರೂ ಆದ ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಯುವಜನರಿಗೆ ವರದಾನವಾಗಬಲ್ಲ ಈ ಪೋರ್ಟಲ್ ನಿಂದ ಗಣನೀಯವಾಗಿ ನಿರುದ್ಯೋಗ ಸಮಸ್ಯೆ ತಪ್ಪಲಿದೆ ಎಂದರು.

ಇದುವರೆಗೂ ರಾಜ್ಯದದಲ್ಲಿ ಊದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರ ನಡುವೆ ಮಾಹಿತಿ, ಸಂಪರ್ಕದ ಕೊರತೆ ಇತ್ತು. ಈಗ ಆ ಪರಿಸ್ಥಿತಿ ಬದಲಾಗಿ ಕುಗ್ರಾಮದಲ್ಲಿರುವ ಪ್ರತಿಭಾವಂತರಿಗೂ ಎಲ್ಲೆಲ್ಲಿ ಉದ್ಯೋಗ ಸಿಗಲಿದೆ ಎಂಬ ಮಾಹಿತಿ ಸುಲಭ, ಸರಳವಾಗಿ ಸಿಗಲಿದೆ. ಪ್ರತಿಭೆಗೆ ತಕ್ಕ ಕೆಲಸ ಹಾಗೂ ಉದ್ಯೋಗದಾತರಿಗೆ ತಮ್ಮ ಅಗತ್ಯಕ್ಕೆ ತಕ್ಕ ಮಾನವ ಸಂಪನ್ಮೂಲ ಲಭ್ಯವಾಗಲಿದೆ ಎಂದು ಡಿಸಿಎಂ ಹೇಳಿದರು.

ಈ ಹಿಂದೆ ಎಲ್ಲಿ ಉದ್ಯೋಗ ಲಭ್ಯವಿದೆ ಎಂಬ ಮಾಹಿತಿ ಸಿಗುತ್ತಿರಲಿಲ್ಲ. ಹಾಗೇಯೇ, ಉದ್ಯೋಗಧಾತರಿಗೂ ಎಲ್ಲಿ ಕೌಶಲಪೂರ್ಣ ಸಿಗುತ್ತಾರೆಂಬುದು ಗೊತ್ತಾಗುತ್ತಿರಲಿಲ್ಲ. ಜಾಬ್ ಮಾರುಕಟ್ಟೆಯ ಬೇಡಿಕೆಯನ್ನು ಗಮನಿಸದೇ ತರಬೇತಿ ನೀಡುವ ಅವೈಜ್ಞಾನಿಕ ಪದ್ಧತಿ ಇತ್ತು. ಈಗ ಅಂಥ ವ್ಯವಸ್ಥೆಗೆ ಸಂಪೂರ್ಣವಾಗಿ ತಿಲಾಂಜಲಿ ನೀಡಿ ನಿರುದ್ಯೋಗಿಗಳಿಗೆ ಖಚಿತ ಭರವಸೆ ಮೂಡಿಸಲಾಗುತ್ತಿದೆ ಎಂದು ಅವರು ತಿಳಿದರು.

ಸರಕಾರವು ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳಲಿದೆ. ಅವರ ಬೇಡಿಕೆಗೆ ತಕ್ಕಂತೆ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಕಳಿಸಲಾಗುವುದು. ಇದು ಅತ್ಯಂತ ಪರಿಣಾಮಕಾರಿ. ರಾಜ್ಯದ ಪ್ರಗತಿಗೆ ಇದು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಪೋರ್ಟಲ್ ಹೇಗೆ ಕೆಲಸ ಮಾಡುತ್ತದೆ?:
ಇದು ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳ ಸಂಪರ್ಕ ಕೊಂಡಿ. ಇದರ ಮೂಲಕ ಕಂಪನಿಗಳು ತಮಗೆ ಅಗತ್ಯವಿರುವ ಮಾನವ ಸಂಪನ್ಮೂಲದ ಬಗ್ಗೆ ಬೇಡಿಕೆ ಇಡಬಹುದು. ಅದರನ್ವಯ ಉದ್ಯೋಗಾಂಕ್ಷಿಗಳು ತಮ್ಮ ವಿದ್ಯಾರ್ಹತೆ, ಕೌಶಲಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ತಂತ್ರಾಂಶವನ್ನು ಬಳಸಿ ಉದ್ಯೋಗಿಗಳನ್ನು ಪೋರ್ಟಲ್ ಹೊಂದಾಣಿಕೆ ಮಾಡಲಿದೆ.

ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ದಿನ ನಿಗಮ ಸೂಕ್ತ ತರಬೇತಿ ನೀಡುತ್ತದೆ. ಇದು ಉದ್ಯೋಗಿಗಳಿಗೆ ಅನುಕೂಲವಾಗಿರುತ್ತದೆ. ಜಾಬ್ ಮಾರುಕಟ್ಟೆಗೆ ಬೇಡಿಕೆ ಅನುಗುಣವಾಗಿ ಯುವಕರು ಕೆಲಸ ಹುಡುಕುವುದು ಸುಲಭ. ಅಂಗೈಯಲ್ಲಿ ಎಲ್ಲ ಮಾಹಿತಯೂ ಅವರಿಗೆ ಸಿಗಲಿದೆ.

ಅದೇ ರೀತಿ ಈ ಪೋರ್ಟಲ್ ಮೂಲಕ ಕಂಪನಿಗಳು ಕೂಡ ಆಕಾಂಕ್ಷಿಗಳ ಮಾಹಿತಿಯನ್ನು ನೋಡಬಹುದು. ತಮಗೆ ಸೂಕ್ತವೆನಿದರೆ ನೇರ ಸಂದರ್ಶನಕ್ಕೆ ಕರೆಯಬಹುದು. ಇಲ್ಲವೇ ತಮಗೆ ಅಗತ್ಯವಾದ ಮಾನವ ಸಂಪನ್ಮೂಲದ ಬಗ್ಗೆ ಕೌಶಲ್ಯಾಭಿವೃದ್ಧಿ ನಿಗಮಕ್ಕೆ ಕೋರಿಕೆ ಸಲ್ಲಿಸಬಹುದು. ಅದೇ ರೀತಿ ಅಭ್ಯರ್ಥಿಗಳು ಕೂಡ ತಮಗೆ ಸೂಕ್ತವಾದ ಉದ್ಯೋಗಗಳನ್ನು ಹುಡುಕಿಕೊಳ್ಳಬಹುದು. ಜತೆಗೆ ತಮ್ಮ ಸಾಮರ್ಥ್ಯದ ಮೌಲ್ಯಮಾಪನವನ್ನೂ ಮಾಡಿಕೊಳ್ಳಬಹುದು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಇಲಾಖೆ ಕಾರ್ಯದರ್ಶಿ ಸೆಲ್ವ ಕುಮಾರ್, ಕೌಶಲ್ಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಎಫ್ ಕೆಸಿಸಿಐ ಮತ್ತು ಕಾಸಿಯಾ ಪ್ರತಿನಿಧಿಗಳು ಹಾಜರಿದ್ದರು.

ಪೋರ್ಟಲ್ ವಿಳಾಸ:
https://skillconnect.kaushalkar.com

City Today News

(citytoday.media)

9341997936

Dr. P S HARSHA ASSUMES CHARGE AS COMMISSIONER FOR INFORMATION AND PUBLIC RELATIONS

BENGALURU, JUNE 29  :

Senior Police Officer Dr. P. S. Harsha, who was the Commissioner of Police at Mangaluru, assumed charge as Commissioner for the Department of Information and Public Relations here on Monday.

Dr. P. S. Harsha had earlier served as the Commissioner of Information and Public Relations.

Mr S N Siddaramappa, who was Commissioner for the Department of Information and Public Relations, handed over the charge to Dr P S Harsha and wished him all the best.

Mr S N Siddaramappa has taken over charge as Deputy Inspector General of Police, C I D ( Economic Offences Wing )in Bengaluru.

City Today News

(citytoday.media)

9341997936

ಜನರ ಆರೋಗ್ಯದ ಜತೆ ಚೆಲ್ಲಾಟ ಬೇಡ – ಕಾಂಗ್ರೆಸ್ಸಿಗೆ ಡಿ.ಸಿ.ಎಂ. ಸವದಿ ಎಚ್ಚರಿಕೆ

ಇಡೀ ದೇಶದಾದ್ಯಂತ ಒಕ್ಕೋರಲಿನಿಂದ ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಚುನಾವಣಾ ರ್ಯಾಲಿಯ ರೀತಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮುಖಂಡರು ಬೆಂಗಳೂರಿನಲ್ಲಿ ಸೈಕಲ್ ಜಾಥಾ ನಡೆಸುತ್ತಾ ಸಾವಿರಾರು ಮಂದಿ ತಮ್ಮ ಕಾರ್ಯಕರ್ತರೊಂದಿಗೆ ‘ಕಾನೂನು ಭಂಗ’ ಮಾಡಿರುವುದು ತೀವ್ರ ಖಂಡನೀಯ.

ಕಾಂಗ್ರೆಸ್ಸಿನ ಈ ರ್ಯಾಲಿ ಸಾರ್ವಜನಿಕರ ಜೀವದೊಂದಿಗೆ ಅವರು ನಡೆಸುತ್ತಿರುವ ಚೆಲ್ಲಾಟವಲ್ಲದೇ ಮತ್ತೇನೂ ಅಲ್ಲ. ಕೊರೋನಾದಂತಹ ಅಪಾಯಕಾರಿ ಸಾಂಕ್ರಾಮಿಕ ರೋಗ ವ್ಯಾಪಕವಾಗುತ್ತಿರುವುದನ್ನು ತಡೆಗಟ್ಟಲು ನಮ್ಮ ಸರ್ಕಾರ ಸಕಲ ಪ್ರಯತ್ನಗಳನ್ನು ಮಾಡುತ್ತಿದ್ದರೆ ಈ ಪಯತ್ನಗಳಿಗೆ ಜವಾಬ್ದಾರಿಯುತ ವಿರೋಧಪಕ್ಷವಾಗಿ ಸಹಕಾರ ನೀಡುವುದನ್ನು ಬಿಟ್ಟು ಅಮಾಯಕರ ಆರೋಗ್ಯಕ್ಕೇ ಸಂಚಕಾರ ಉಂಟುಮಾಡುವಂತಹ ಈ ರೀತಿ ರ್ಯಾಲಿ-ಪ್ರತಿಭಟನೆಗಳ ಗಿಮಿಕ್‍ಗೆ ಕಾಂಗ್ರೆಸ್ ಇಳಿದಿರುವುದು ಆ ಪಕ್ಷ ಹತಾಶೆಯ ಸ್ಥಿತಿಗೆ ತಲುಪಿರುವುದಕ್ಕೆ ದ್ಯೋತಕವಾಗಿದೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಕೊರೋನಾ ವಿರುದ್ಧದ ಹೋರಾಟದಲ್ಲಿ ಎಲ್ಲಾ ಪಕ್ಷಗಳೂ ಭಾಗಿಯಾಗಿ ಜನದಟ್ಟಣೆ ಸೇರುವುದನ್ನು ತಪ್ಪಿಸಲು ಅಲಿಖಿತವಾಗಿ ಒಪ್ಪಂದ ಮಾಡಿಕೊಂಡಿರುವಾಗ ಕಾಂಗ್ರೆಸ್ಸು ಈ ರೀತಿ ಸಾಂಕ್ರಾಮಿಕ ರೋಗ ಹರಡಲು ಅವಕಾಶವಾಗುವಂತೆ ರ್ಯಾಲಿ ನಡೆಸಿದ್ದು ನಿಜಕ್ಕೂ ಅಕ್ಷಮ್ಯ. ಒಂದು ವೇಳೆ ಕಾಂಗ್ರೆಸ್ ಮುಖಂಡರಿಗೆ ಪ್ರತಿಭಟಿಸಲು ನೈಜ ಕಾರಣವಿದ್ದರೆ ಅವರು ಸಮೂಹ ಮಾಧ್ಯಮಗಳ ಮೂಲಕ ತಮ್ಮ ಅಹವಾಲುಗಳನ್ನು ವ್ಯಕ್ತಪಡಿಸಬಹುದಿತ್ತು. ಅದನ್ನು ಬಿಟ್ಟು ಪೊಲೀಸ್ ಇಲಾಖೆಯ ಸಮ್ಮತಿಯನ್ನು ಪಡೆಯದೇ ಅಮಾಯಕರ ಜೀವಕ್ಕೆ ಕುತ್ತು ತರುವಂಥ ಕೃತ್ಯಕ್ಕೆ ಮುಂದಾಗಿರುವುದು ಯಾವ ಪುರುಷಾರ್ಥಕ್ಕೆ?

ರಾಜಕೀಯ ಮಾಡಲು ಇತರೆ ಬೇಕಾದಷ್ಟು ವಿಷಯಗಳಿವೆ. ಆದರೆ ದೇಶದ ಹಿತ, ಸಾರ್ವಜನಿಕರ ಆರೋಗ್ಯ ರಕ್ಷಣೆಯಂಥ ವಿಷಯಗಳಲ್ಲಿ ರಾಜಕೀಯ ಲಾಭ ಬದಿಗಿಟ್ಟು ಒಟ್ಟಾಗಿ ಕೆಲಸ ಮಾಡುವುದೇ ನಿಜವಾದ ಮಾನವೀಯತೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿರುವ ಈ ಕಾಂಗ್ರೆಸ್ ಮುಖಂಡರು ನಮ್ಮ ರಾಜ್ಯದ ಸಾಮಾಜಿಕ ಹಿತಕ್ಕೇ ಕೊಡಲಿಪೆಟ್ಟು ಹಾಕುತ್ತಿದ್ದಾರೆ.

ಒಂದು ದಿನ ಇವರೆಲ್ಲಾ ತಮ್ಮ ದುಬಾರಿ ಕಾರುಗಳನ್ನು ಮನೆಯಲ್ಲಿ ಬಿಟ್ಟು ಸೈಕಲ್ ಹತ್ತಿದಾಕ್ಷಣ ಪೆಟ್ರೋಲ್ ದರ ಇಳಿದುಬಿಡುತ್ತದೆಯೇ? ಅಸಲಿಗೆ ಇದು ಕೇವಲ ಬೂಟಾಟಿಕೆಯ ಪ್ರದರ್ಶನವಾಗಿ ಕಾಣುತ್ತದೆ ಅಷ್ಟೇ!

ಲಕ್ಷ್ಮಣ ಸವದಿ
ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು.

City Today News

(citytoday.media)

9341997936

ಪೆಟ್ರೋಲ್, ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ಮೋದಿಯವರಿಗೆ ಮನುಷ್ಯತ್ವವೇ- ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ

ಬೆಂಗಳೂರು : ಪೆಟ್ರೋಲ್, ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ಮೋದಿಯವರಿಗೆ ಮನುಷ್ಯತ್ವವೇ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿಯವರನ್ನು ರಾಕ್ಷಸೀ ಪ್ರವೃತ್ತಿ. ಅವರಿಗೆ ಮಾನವೀಯತೆ ಎಂಬುದೇ ಇಲ್ಲ ಎಂದು ಅವರು ಕಿಡಿ ಕಾರಿದ್ದಾರೆ.
ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಸೈಕಲ್ ಚಳವಳಿ ಮತ್ತು ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಡಾ. ಮನಮೋಹನಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ತೈಲ ದರವನ್ನು ಕೊಂಚ ಏರಿಸಿದ್ದರೂ ಬಿಜೆಪಿಯವರು ತಲೆಯ ಮೇಲೆ ಗ್ಯಾಸ್ ಸಿಲಿಂಡರ್‍ಗಳನ್ನು ಹೊತ್ತು ಬೀದಿಗೆ ಇಳಿಯುತ್ತಿದ್ದರು. ಇದೀಗ ಪೆಟ್ರೋಲ್, ಡೀಸೆಲ್ ದರ ಗಗನ ಮುಟ್ಟಿದೆ ಆದರೂ ಬಿಜೆಪಿಯವರೇಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ್ ದರವನ್ನು ಏರಿಸಿ ಜನ ಸಾಮಾನ್ಯರಿಗೆ ತೊಂದರೆ ಕೊಡಬಾರದು ಎಂದು ಮನಮೋಹನಸಿಂಗ್ ಅವರು ಸಬ್ಸಿಡಿ ನೀಡುತ್ತಿದ್ದರು. ಆದರೆ, ನರೇಂದ್ರ ಮೋದಿಯವರಿಗೆ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಜನರನ್ನು ಸುಲಿಗೆ ಮಾಡುವ ಜನ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದಾರೆ ಎಂದರು.
ಕಳೆದ 22 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಕೊರೊನಾ ಪರಿಣಾಮ ಉದ್ಯೋಗ ಇಲ್ಲದೆ ಪರದಾಡುತ್ತಿರುವ ಮಧ್ಯಮ ವರ್ಗದ ಜನತೆ ಹಾಗೂ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ ರೈತರು ಇದರಿಂದ ಭಾರಿ ಹೊಡೆತ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರ ಬ್ಯಾರಲ್‍ಗೆ 130 ಡಾಲರ್‍ನಂತೆ ಮಾರಾಟವಾಗುತ್ತಿದ್ದಾಗಲೇ ಅಂದಿನ ಯುಪಿಎ ಸರ್ಕಾರ ದರ ಏರಿಕೆಯನ್ನು ಈ ಪ್ರಮಾಣದಲ್ಲಿ ಮಾಡಿರಲಿಲ್ಲ. ಹೀಗಾಗಿ ಮೋದಿಯವರು ತಮ್ಮ ಬೆನ್ನು ತಾವೇ ನೋಡಿಕೊಳ್ಳಬೇಕು.
ಕಚ್ಛಾ ತೈಲ ದರ ಇದೀಗ ಬ್ಯಾರಲ್‍ಗೆ 20-30 ಡಾಲರ್ ನಂತೆ ಮಾರಾಟವಾಗುತ್ತಿದೆ. ಹೀಗಿರುವಾಗ ಪೆಟ್ರೋಲ್, ಡೀಸೆಲ್ ಲೀಟರ್‍ಗೆ 25-30 ರೂ. ಪ್ರಕಾರ ಮಾರಾಟವಾಗಬೇಕಿತ್ತು. ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಯದ್ವಾತದ್ವ ಏರಿಕೆ ಮಾಡುವ ಮೂಲಕ 18 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹ ಮಾಡಿದೆ ಎಂದು ಹೇಳಿದರು.
ಜನತೆಯ ರಕ್ತ ಹೀರುವ ಸರ್ಕಾರ ಕೇಂದ್ರದಲ್ಲಿದೆ. ಅಲ್ಲಿ ಆಡಳಿತ ನಡೆಸುತ್ತಿರುವವವರು ಮಾನವೀಯತೆಯನ್ನೇ ಮರೆತು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಅವರು ಕಿಡಿ ಕಾರಿದರು.
ಸೈಕಲ್ ಚಳವಳಿಯ ಅಂಗವಾಗಿ ಸಿದ್ದರಾಮಯ್ಯ ಅವರು ಬೆಳಗ್ಗೆ ತಮ್ಮ ನಿವಾಸದಿಂದ ಕೆಪಿಸಿಸಿ ಕಚೇರಿ ವರೆಗೆ ಸೈಕಲ್ ನಲ್ಲಿ ತೆರಳಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

City Today News

(citytoday.media)

9341997936