ಜಯನಗರ ರಾಯರ ಮಠದಲ್ಲಿ ಯಶಸ್ವಿಯಾಗಿ ಜರುಗಿದ ಟಿ ಟಿ ಡಿ ಕಾರ್ಯಕ್ರಮ ಪ್ರವಚನದ ಮಂಗಳ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 6 ರಿಂದ 9ರ ವರೆಗೆ ವಿವಿಧ ಭಜನಾ ಮಂಡಳಿಗಳಿಂದ ಹರಿ ಭಜನೆ, ಮ||ಶಾ||ಸಂ|| ಶ್ರೀ ಬ್ರಹ್ಮಣ್ಯಾಚಾರ್ಯರಿಂದ “ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ” ವಿಷಯವಾಗಿ ಧಾರ್ಮಿಕ ಪ್ರವಚನ, ಶ್ರೀಮತಿ ಚಾಂದಿನಿ ಗರ್ತಿಕೆರೆ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ, ಆಗಸ್ಟ್ 8, ಗುರುವಾರ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳು, ಸುಮಾರು ಐದು ಸಾವಿರ ಜನರಿಗೆ ಅನ್ನದಾನ ಸೇವೆ,  ಸಂಜೆ ಕಾರ್ಯಕ್ರಮದಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ ತೊಟ್ಟಿಲು ಸೇವೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಮತ್ತು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ವಾನ್ – ಬ್ರಹ್ಮಣ್ಯ ಆಚಾರ್ಯರಿಗೆ ಶ್ರೀ ಮಠದ ಪರವಾಗಿ ಆರ್ ಕೆ ವಾದಿಂದ್ರಚಾರ್ಯರು ಮತ್ತು ನಂದಕಿಶೋರಾಚಾರ್ಯರು ಸನ್ಮಾನಿಸಿದರು ಈ ವಿಶೇಷ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ಶ್ರೀ ಸುಧೀಂದ್ರ  ದೇಸಾಯಿಯವರು ಮತ್ತು ಶ್ರೀಮಠದ ಸಿಬ್ಬಂದಿಗಳು ಹಾಗೂ ನೂರಾರು ಭಕ್ತರು ಭಾಗವಹಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

ದೇಶಪ್ರೇಮ ರಾಜ್ಯಾಭಿಮಾನಗಳನ್ನು ಅಭಿವ್ಯಕ್ತಿಗೊಳಿಸಿರುವ  “ಆಲ್ಬಮ್ ವಿಡಿಯೋ ” ಉದ್ಘಾಟನೆ

ಶತಮಾನಗಳಿಂದ ಈ ದೇಶದ ಪ್ರಜೆಗಳಾಗಿದ್ದರೂ ನಾಗರಿಕ ಮತ್ತು ಮಾನವ ಹಕ್ಕುಗಳು ಕೌಟುಂಬಿಕ, ಸಾಮಾಜಿಕ ಸ್ಥಾನಮಾನಗಳಿಂದ  ವಂಚಿತರಾಗಿ, ಅಭದ್ರತೆಯಿಂದ  ಅಸಡ್ಡೆಗೆ ಒಳಗಾಗಿರುವ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯಕ್ಕೆ ನಮ್ಮ ದೇಶದ ಸಂವಿಧಾನ, ಕಾನೂನು ಮತ್ತು ನ್ಯಾಯ ವ್ಯವಸ್ಥೆಯು ನಾಗರಿಕ ಮತ್ತು ಮಾನವ ಹಕ್ಕುಗಳನ್ನು ಕೊಡ ಮಾಡಿ ದೇಶದ ಸಮಾನ ಪ್ರಜೆಗಳು ಎಂದು ಘೋಷಿಸಿವೆ.
ದೇಶಭಕ್ತಿ ರಾಜ್ಯಾಭಿಮಾನಗಳು ಗಂಡು ಹೆಣ್ಣುಗಳ ಸೊತ್ತಷ್ಟೇ ಅಲ್ಲದೆ ನಮ್ಮಲ್ಲಿಯೂ ರಾಷ್ಟ್ರಪ್ರೇಮ,ರಾಜ್ಯ ಭಕ್ತಿ ಅಣುವಣುವಿನಲ್ಲಿ ತುಂಬಿದೆ ಎಂದು ಸಾರಿ ಸಾರಿ ಹೇಳಲು 9ನೇ,ಆಗಸ್ಟ್ 2024 ರಂದು ದೇಶದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯದವರು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ತಮ್ಮ ನೈಜ ಧ್ವನಿಯಲ್ಲಿ ಹಾಡಿ ದೇಶವು ನಮ್ಮದು ರಾಜ್ಯವು ನಮ್ಮದು ಇಂದು ತಮ್ಮ ದೇಶಪ್ರೇಮ ರಾಜ್ಯಾಭಿಮಾನಗಳನ್ನು ಅಭಿವ್ಯಕ್ತಿಗೊಳಿಸಿರುವ  “ಆಲ್ಬಮ್ ವಿಡಿಯೋ ” ಉದ್ಘಾಟನೆ ಗೌರವಾನ್ವಿತ ಶ್ರೀಯುತ.ಶ್ರೀಮತಿ ಮಾರ್ಗರೆಟ್ ಆಳ್ವ ಘನತೆವೆತ್ತ ಮಾಜಿ ರಾಜ್ಯಪಾಲರು, ಬೆಂಗಳೂರು ಮತ್ತು  ಅನೇಕ ಸಾಂವಿಧಾನಿಕ ಸಂಸ್ಥೆಗಳ ರೂವಾರಿಗಳ ಘನ ಉಪಸ್ಥಿತಿಯಲ್ಲಿ  ಲೋಕಾರ್ಪಣೆ ಆಗಲಿದೆ.

ಹಾಗೆಯೇ  ನಮ್ಮ ಕರುನಾಡ ನೆಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯದವರಿಂದ ರಚನೆಗೊಂಡಿರುವ ಈ ಸಮುದಾಯದ ವಿಷಯ ವಸ್ತುವನ್ನೇ ಒಳಗೊಂಡಿರುವ 10 ಪುಸ್ತಕಗಳು ಒಂದೇ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವುದು ಅದ್ಭುತ ಘಟ್ಟಕ್ಕೆ ಸಾಕ್ಷಿಭೂತವಾಗಲಿದೆ.

ನಮ್ಮ ಸಮುದಾಯದ ಹಿರಿಯರು, 55 ವರ್ಷಗಳಿಗೂ ಅಧಿಕ ವಯಸ್ಸಿನವರ ತಂಡ ಒಂದು ವಿನೂತನ ಮತ್ತು ವಿಶೇಷವಾದ “ತಲ್ಕಿ ” ಎಂಬ ನಾಟಕವನ್ನು ಪ್ರದರ್ಶಿಸುತ್ತಿದ್ದು, ಈ ಮೂಲಕ ತಮ್ಮ ಭಾವನೆಗಳು, ಹೋರಾಟ ಮತ್ತು ಅಭಿವ್ಯಕ್ತಿಗಳನ್ನು ನವರಸ ಭರಿತವಾಗಿ  ಹಂಚಿಕೊಳ್ಳಲಿದ್ದಾರೆ ಎಂದು ಅಕ್ಕೈ ಪದ್ಮಶಾಲಿ, ಚಾಂದಿನಿ, ಕ್ರಿಸ್ಟಿರಾಜ್ ಮತ್ತು ಉಮಾ ರವರುಗಳ ಉಪಸ್ಥಿತಿಯಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪ್ರಕಟಿಸಲಾಯಿತು.

City Today News 9341997936

ಶ್ರೀ ರಾಘವೇಂದ್ರ ಸ್ವಾಮಿಗಳವರ “353ನೇ ಆರಾಧನಾ ಮಹೋತ್ಸವ”- ರಾಯರ ಸನ್ನಿಧಿಯಲ್ಲಿ ಪೂರ್ವಭಾವಿ ಸ್ವಯಂ ಸೇವಕರ ಸಭೆ

ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ1008 ಶ್ರೀಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆರಾಧನೆಯ ಪೂರ್ವಭಾವಿಯಾಗಿ ಸ್ವಯಂಸೇವಕರ ಸಭೆಯ ಅಂಗವಾಗಿ ವೇದಘೋಷ, ಕೊಳಲುವಾದನ, ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮವು ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಆರ್. ಕೆ.  ವಾದೀಂದ್ರಾಚಾರ್ಯರು ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಯ ಬಗ್ಗೆ ಪ್ರಸ್ತಾಪಿಸಿ, ಆಗಸ್ಟ್18 ರಂದು ಸಂಜೆ 6-30ಕ್ಕೆ ಉಡುಪಿಯ ಕಾಣಿಯೂರು ಮಠದ ಪರಮಪೂಜ್ಯ1008 ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು “ಉದ್ಘಾಟನೆ” ಮಾಡಲಿದ್ದಾರೆ ಎಂದು ತಿಳಿಸಿದರು. ತದನಂತರ ಸುಮಾರು ವರ್ಷಗಳಿಂದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ ಭಕ್ತರು ತಮ್ಮ ತಮ್ಮ ಅಭಿಪ್ರಾಯಗಳನ್ನು  ಮುಕ್ತವಾಗಿ ಹಂಚಿಕೊಂಡು ಶ್ರೀಮಠದ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ತಿಳಿದು ಸಂತೋಷ ವ್ಯಕ್ತಪಡಿಸಿದರು  ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು. ಶ್ರೀ ರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಸಪ್ತರಾತ್ರೋತ್ಸವ ಉತ್ಸವದ ಅಂಗವಾಗಿ ದಿನಾಂಕ 18-8-2024  ರಿಂದ 24-82024 ವರೆಗೆ ರಾಯರ ಬೃಂದಾವನಕ್ಕೆ ವಿಶೇಷ ಅಭಿಷೇಕ, ಅಲಂಕಾರ, ಭಕ್ತರಿಗೆ ಅನ್ನಸಂತರ್ಪಣೆ, ಉತ್ಸವಗಳು, ಪ್ರವಚನ, ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ  ಶ್ರೀಮತಿ ಮೇಘ ಶಿವಕುಮಾರ್ (ಹರಿದಾಸವಾಣಿ), ವಿದ್ವಾನ್ ಶ್ರೀ ಪ್ರಾದೇಶಾಚಾರ್ಯ (ಹರಿದಾಸ ಮಂಜರಿ), ಬೆಂಗಳೂರು ಸಹೋದರರಾದ ವಿದ್ವಾನ್ ಹರಿಹರನ್-ಅಶೋಕ್ (ಹರಿನಾಮ ಘೋಷ),  ವಿದ್ವಾನ್ -ಜಯತೀರ್ಥ ಮೇವುಂಡಿ (ಹರಿನಾಮ ಸಂಕೀರ್ತನೆ), ವಿದ್ವಾನ್ ಶ್ರೀ ಶೇಷಗಿರಿದಾಸ್ ರಾಯಚೂರು (ದಾಸರ ಪದಗಳ ಗಾಯನ), ವಿದುಷಿ ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರಸ್ಟ್ ನ ವಿದ್ಯಾರ್ಥಿಗಳಿಂದ (ಭರತನಾಟ್ಯ), ವಿದ್ವಾನ್ ಜಗನ್ನಾಥಾಚಾರ್ಯ ರಾಯಚೂರು ಇವರಿಂದ ಪ್ರವಚನ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳವರ 353ನೇ “ಆರಾಧನಾ” ಮಹಾರಥೋತ್ಸವವು ಭಕ್ತಾದಿಗಳ ಸಹಕಾರದೊಂದಿಗೆ ಅತ್ಯಂತ ಸಂಭ್ರಮ ಸಡಗರ ವಿಜೃಂಭಣೆಯಿಂದ ನೆರವೇರಿಸಲು ಉದ್ದೇಶಿಸಿದ್ದು, ಈ ಸಂದರ್ಭದಲ್ಲಿ ಶ್ರೀ ಗುರುರಾಯರ ಸನ್ನಿಧಿಗೆ ಆಗಮಿಸುವ ಭಕ್ತರಿಗಾಗಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ಯರು ತಿಳಿಸಿದರು, ಸ್ವಯಂಸೇವಕರ ಕಾರ್ಯಕ್ರಮದಲ್ಲಿ ಶ್ರೀ ಮಠದ ಸಿಬ್ಬಂದಿಗಳು ಹಾಗೂ ಶ್ರೀ ಮಧುರನಾಥ್, ಡಾ|| ಶ್ರೀಧರ್, ಸುರೇಶ್ , ವಿಜಯ್ ಕುಮಾರ್, ಶ್ರೀನಾಥ್, ಇಂಜಿನಿಯರ್ ಶ್ರೀಧರ್, ಜಯಂತಿ ರಾಘವೇಂದ್ರ, ಉಷಾ ಮೋಹನ್, ಎ ಸಂತೋಷ್, ರಾಜೇಶ್ ಕುಲಕರ್ಣಿ, ಇನ್ನೂ ಮುಂತಾದ  ನೂರಾರು ಸ್ವಯಂ ಸೇವಕರು ಭಾಗವಹಿಸಿ ಶ್ರೀ ಗುರುರಾಯರ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

ಜಯನಗರ ರಾಯರ ಮಠದಲ್ಲಿ “ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ”(ಧಾರ್ಮಿಕ ಪ್ರವಚನ)

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 6, 7 ಮತ್ತು 9ರಂದು ಪ್ರತಿದಿನ ಸಂಜೆ 6-30 ರಿಂದ 7-30ರ ವರೆಗೆ ಮ||ಶಾ||ಸಂ|| ಶ್ರೀ ಬ್ರಹ್ಮಣ್ಯಾಚಾರ್ಯರಿಂದ “ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ” ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ ಎಂದು ಟಿಟಿಡಿಯ ಡಾ|| ಪಿ. ಭುಜಂಗರಾವ್ ಮತ್ತು ಶ್ರೀಮಠದ ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

City Today News 9341997936

6ನೇ ಆಗಸ್ಟ್ 2024ರಂದು ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟಿರವರ 103ನೇ ಆರಾಧನಾ ಮಹೋತ್ಸವ ಯಜಮಾನ್ ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರವರ 103ನೇ ಆರಾಧನಾ ಮಹೋತ್ಸವ

6ನೇ ಆಗಸ್ಟ್ 2024ರಂದು ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟಿರವರ 103ನೇ ಆರಾಧನಾ ಮಹೋತ್ಸವ ಯಜಮಾನ್ ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರವರ 103ನೇ ಆರಾಧನಾ ಮಹೋತ್ಸವ ನಡೆಯಲಿದೆ. ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಸಂಸದರು, ಶಾಸಕರು ಹಾಗೂ ಗಣ್ಯ ವ್ಯಕ್ತಿಗಳು, ಸಮುದಾಯದ ಹಿರಿಯರು ಭಾಗವಹಿಸುವರು. ಈ ಬಗ್ಗೆ ಮಾಹಿತಿ ನೀಡಲು ಶ್ರೀಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ವತಿಯಿಂದ ಪತ್ರಿಕಾ ಗೋಷ್ಠಿ.

ಅಧ್ಯಕ್ಷರಾದ ಸುರೇಶ್ ಎಸ್. ಮತ್ತು ಆಡಳಿತ ಮಂಡಳಿಯ ಸದಸ್ಯರಾದ ವಿನೋದ್ ಎಂ.ಜಿ.. ವಿ.ಎಸ್.ಮಂಜುನಾಥ್, ನಿರಂಜನ್ ಗಾಣಿಗ.ಎನ್. ಮುನಿಚೆಟ್ಟಿ ವಿ. ಶ್ರೀಮತಿ ಉಮಾದೇವಿ ಜಿ.ಎ. ಶ್ರೀಮತಿ ಸ್ಪಪ್ನಚಂದ್ರಶೆಟ್ಟಿ, ರಾಜಣ್ಣ ಎಂ.ಸಿ. ಷಹ ಸಂಜಯ್, ಶ್ರೀಮತಿ ಕೃಷ್ಣವೇಣಿ ಡಿ.ಸಿ ರವರು ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು.

ಶ್ರೀ ದೊಡ್ಡಣ್ಣ ಶೆಟ್ಟರವರ ಧಾರ್ಮಿಕ ಕಾರ್ಯ. ಬಡವರಿಗೆ ಉಚಿತ ಶಿಕ್ಷಣ, ಹಾಗೂ ಉಚಿತ ಊಟ. ವಸತಿ ನೀಡಿದ ಮಹಾನ್ ವ್ಯಕ್ತಿತ್ವದವರು.

ಮೈಸೂರು ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ರವರ ಜೊತೆಯಲ್ಲಿ ಯಜಮಾನ್ ಜನೋಪಕಾರಿ ದೊಡ್ಡಣ್ಣ ಶೆಟ್ಟರವರ ಉತ್ತಮ ಒಡನಾಟವಿತ್ತು. ದೊಡ್ಡಣ್ಣ ಶೆಟ್ಟರ ರವರ ಸಮಾಜ ಸೇವೆಯನ್ನು ಗುರುತಿಸಿ ಇವರಿಗೆ ಜನೋಪಕಾರಿ ಎಂಬ ಬಿರುದು ಕೊಟ್ಟು ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ. ಮಹಾರಾಜರು ನೀಡಿದ 5.1/8 ಎಕರೆ ಜಾಗದಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಧರ್ಮಸಂಸ್ಥೆ ಸ್ಥಾಪಿಸಿದರು.

1905ರಲ್ಲಿ ಕಲಾಸಿಪಾಳ್ಯದಲ್ಲಿ ಸಭಾಂಗಣ ಕಟ್ಟಡ ನಿರ್ಮಾಣ ಮಾಡಿದರು. ದೊಡ್ಡಣ್ಣ ಶೆಟ್ಟರವರ ಸಾಮಾಜಿಕ ಮುಂದಿನ ಪೀಳಿಗೆಗೆ ತಿಳಿಯಬೇಕು. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಾಗಬೇಕು ಎಂಬುದು ಧರ್ಮ ಸಂಸ್ಥೆಯ ಉದ್ದೇಶವಾಗಿದೆ.

ಆಗಸ್ಟ್ 6ರಂದು ಶ್ರೀ ದೊಡ್ಡಣ್ಣಶೆಟ್ಟರವರ 103ನೇ ಆರಾಧನಾ ಮಹೋತ್ಸವವನ್ನು ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಬಯಲು ರಂಗಮಂದಿರದಲ್ಲಿ ಬೆಳಗ್ಗೆ 6 ಗಂಟೆಗೆ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗರೆಡ್ಡಿರವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯನ್ನು, ಸಂಸದರಾದ ಶ್ರೀ ತೇಜಸ್ವಿಸೂರ್ಯರವರು, ಶಾಸಕರಾದ ಡಾ: ಉದಯ ಸಿ ಗರುಡಾಚಾರ್ ರವರು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಧರ್ಮಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸಮುದಾಯದ ಎಲ್ಲಾ ಸಂಘ ಸಂಸ್ಥೆಯವರು ಹಿರಿಯ ಮುಖಂಡರು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಶ್ರೀ ದೊಡ್ಡಣ್ಣ ಶೆಟ್ಟರ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿದ ಹಳೆಯ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಎಸ್.ಸುರೇಶ್ ಅಧ್ಯಕ್ಷರು, ಶ್ರೀ ಲ.ನ.ಧರ್ಮಸಂಸ್ಥೆ, ಕೋಟೆ, ಬೆಂಗಳೂರು. ತಿಳಿಸಿದರು.

ಸ್ಥಳ:ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಬಯಲು ರಂಗಮಂದಿರ.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಧರ್ಮಸಂಸ್ಥೆ. ಬೆಂಗಳೂರು -560002.

City Today News 9341997936