ಕೇಂದ್ರ ಮಂತ್ರಿ ಮಂಡಲದಲ್ಲಿ ಮಾದಿಗ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕೊಡಬೇಕೆಂದು ಜೈ ಮಾದಿಗರ ಬೌದ್ಧಿಕ ವೇದಿಕೆ ವತಿಯಿಂದ ಒತ್ತಾಯ

ಭಾರತದಲ್ಲಿ ಅತಿ ದೊಡ್ಡ ಸಮುದಾಯವಾಗಿರುವ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸರ್ಕಾರ ರಚನೆ ಸಮಯದಲ್ಲಿ ಮಂತ್ರಿ ಮಂಡಲದಲ್ಲಿ ಮಾದಿಗ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯವನ್ನು ಕೊಡದೆ ಇರುವುದು ಸಮುದಾಯಕ್ಕೆ ನೋವು, ತಿರಸ್ಕಾರ ಮತ್ತು  ಅವಮಾನವನ್ನು ಮಾಡಿದೆ. ದಿನಾಂಕ: 10/6/2024 ರಂದು ಸೋಮವಾರ ಮಧ್ಯಾಹ್ನ 12:30 ಗಂಟೆಗೆ ಕೇಂದ್ರ ಮಂತ್ರಿ ಮಂಡಲದಲ್ಲಿ ಮಾದಿಗ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕೊಡಬೇಕೆಂದು ಒತ್ತಾಯಿಸಿ ಕರೆದಿರುವ ಪತ್ರಿಕಾಗೋಷ್ಠಿ.



ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀ ನರೇಂದ್ರ ಮೋದಿಜಿಯವರು ಭಾರತದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಸಂದರ್ಭದಲ್ಲಿ ಇಡೀ ಭಾರತದ ಮಾದಿಗ ಸಮುದಾಯದ ಪರವಾಗಿ ಅವರಿಗೆ ಮತ್ತು ಕರ್ನಾಟಕದಿಂದ ಆಯ್ಕೆಯಾದ ಮಂತ್ರಿಗಳಿಗೆ ಹಾಗೂ ಮಾದಿಗ ಸಮುದಾಯದ ಲೋಕಸಭಾ ಸದಸ್ಯರಾಗಿ ಕರ್ನಾಟಕದಿಂದ ಆಯ್ಕೆಯಾಗಿರುವ ಶ್ರೀ ರಮೇಶ್ ಜಿಗಜಿಣಿಗಿ ಮತ್ತು ಶ್ರೀ ಗೋವಿಂದ ಕಾರಜೋಳ ರವರಿಗೆ ಅಭಿನಂದನೆಗಳು.

ಮಾದಿಗ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮಾಜವಾಗಿದ್ದು ಸ್ವಾತಂತ್ರ ಬಂದಾಗಿನಿಂದಲೂ ನಿರಂತರವಾಗಿ ರಾಜಕೀಯ ಪಕ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿದೆ. 1984 ರ ನಂತರ ಶ್ರೀ ರಮೇಶ ಜಿಗಜಿಣಗಿ ಮತ್ತು ಶ್ರೀ ಗೋವಿಂದ ಕಾರಜೋಳರವರು ಶ್ರೀ ರಾಮಕೃಷ್ಣ ಹೆಗಡೆಯವರ ನೇತೃತ್ವದಲ್ಲಿ ಜನತಾ ಪಕ್ಷವನ್ನು ಬೆಳೆಸಿದರು ಇದರ ಪರಿಣಾಮ ಕರ್ನಾಟಕದಲ್ಲಿ ಜನತಾ ಪಕ್ಷ 44 ಶಾಸಕರಿಂದ 84 ಶಾಸಕರು ಗೆದ್ದು ಬಂದರು. ಈ ಮಾತನ್ನು ಬೆಂಗಳೂರಿನ ಸಭೆಯೊಂದರಲ್ಲಿ ಅಂದಿನ ಪ್ರಧಾನ ಮಂತ್ರಿಗಳಾದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಮತ್ತು ಶ್ರೀ ಲಾಲಕೃಷ್ಣ ಅಡ್ವಾಣಿಯವರು ತುಂಬು ಮನಸ್ಸಿನಿಂದ ಶ್ರೀ ರಮೇಶ ಜಿಗಜಿಣಗಿ ಮತ್ತು ಶ್ರೀ ಗೋವಿಂದ ಕಾರಜೋಳ ಅವರನ್ನು ಅಭಿನಂದಿಸಿದರು.

ನಂತರದ ದಿನಗಳಲ್ಲಿ 1984 ರಿಂದ ಇದುವರೆವಿಗೆ ಮಾದಿಗ ಸಮುದಾಯದ ನಾಯಕರು ಮತ್ತು ಸಮುದಾಯ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದು ಬಿಜೆಪಿಯ ಭಾಗವಾಗಿ ಇಂದು ಮಾದಿಗ ಸಮುದಾಯ ನಿಂತಿದೆ. ಈ ಸಮುದಾಯ ಬಿಜೆಪಿ ಪರವಾಗಿ ನಿಂತಿದೆ ಎಂದು ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿವೆ.

ಆದರೆ ಇತ್ತೀಚಿನ 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮಾದಿಗ ಸಮಾಜ ಬಿಜೆಪಿ ಪರವಾಗಿ ನಿಂತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ಬಿಜೆಪಿ ದಲಿತ ವಿರೋಧಿ ಮತ್ತು ಬಿಜೆಪಿ ಗೆದ್ದರೆ ಮೀಸಲಾತಿಯನ್ನು ತೆಗೆದು ಹಾಕುತ್ತಾರೆ. ಸಂವಿಧಾನ ವಿರೋಧಿ, ದಲಿತರಿಗೆ ಅವಕಾಶಗಳನ್ನು ಕೊಡುವುದಿಲ್ಲ ಎಂದು ನಿರಂತರವಾಗಿ ದಾಳಿ ಮಾಡಿದಾಗ, ಬಿಜೆಪಿ ಪರವಾಗಿ ನಿಂತು ಪಕ್ಷದ ಪರ ಕೆಲಸ ಮಾಡಿದವರು ಮಾದಿಗ ಸಮುದಾಯದವರು,

ಭಾರತದಲ್ಲಿ ಅತಿದೊಡ್ಡ ಸಮುದಾಯವಿರುವ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸರ್ಕಾರ ರಚನೆ ಸಮಯದಲ್ಲಿ ಮಂತ್ರಿ ಮಂಡಲದಲ್ಲಿ ಮಾದಿಗ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯವನ್ನು ಕೊಡದೆ ಇರುವುದು ಮಾದಿಗ ಸಮಾಜ ದಿಗ್ದಮೆಗೊಂಡಿದೆ. ವಿಶೇಷವಾಗಿ ಕರ್ನಾಟಕ, ತೆಲಂಗಾಣ, ಆಂದ್ರಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿರುವ ಅಪಾರ ಸಂಖ್ಯೆಯ ಮಾದಿಗ ಸಮುದಾಯಕ್ಕೆ ಆಘಾತಗೊಂಡಿದೆ.

ಯಾವ ಮಾದಿಗ ಸಮುದಾಯ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳನ್ನು ಎದುರು ಹಾಕಿಕೊಂಡು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದು ಬಿಜೆಪಿ ಅಧಿಕಾರಕ್ಕೆ ಬರಲು ಕಾರಣೀಬೂತವಾಗಿತ್ತು ಆ ಬಿಜೆಪಿ ಇಂದು ಮಾದಿಗ ಸಮುದಾಯಕ್ಕೆ ನೋವು, ಅವಮಾನ ಮತ್ತು ತಿರಸ್ಕಾರವನ್ನು ಮಾಡಿದೆ. ಸಮುದಾಯ ಆಕ್ರೋಶಗೊಂಡಿದೆ. ಆದ್ದರಿಂದ ಈ ಪತ್ರಿಕಾಗೋಷ್ಠಿಯ ಮೂಲಕ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರನ್ನು ಮತ್ತು ಬಿಜೆಪಿ ಮುಖಂಡರನ್ನು ಕರ್ನಾಟಕದ ಮಾದಿಗ ಸಮುದಾಯಕ್ಕೆ ಕೇಂದ್ರ ಮಂತ್ರಿ ಮಂಡಲದಲ್ಲಿ ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕೆಂದು ಶ್ರೀ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಆಗ್ರಹಿಸುತ್ತೇವೆ. ಒತ್ತಾಯಿಸುತ್ತೇವೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಮಾದಿಗ ಸಮುದಾಯ ಸೂಕ್ತ ನಿರ್ಧಾರ ಮತ್ತು ಉತ್ತರ ಕೊಡಲಿದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಲಾಯಿತು.

ಪತ್ರಿಕಾ ಗೋಷ್ಠಿಯಲ್ಲಿ  ಶ್ರೀ ಷಡಕ್ಷರಿ ಮುನಿದೇಶಿಕೇಂದ್ರ ಸ್ವಾಮೀಜಿ ಆದಿಜಾಂಬವ ಬೃಹನ್ಮಠ ಕೋಡಿಹಳ್ಳಿ,ಬಿ.ಆರ್. ಮುನಿರಾಜ್- ರಾಜ್ಯಾಧ್ಯಕ್ಷರು ಜೈ ಮಾದಿಗರ ಬೌದ್ಧಿಕ ವೇದಿಕೆ,ಮುತ್ತುರಾಜು-ಅಧ್ಯಕ್ಷರು ಅಹಿಂದ ಹೋರಾಟ ಸಮಿತಿ ಮತ್ತು ಸಿದ್ಧರಾಜು-ರಾಜ್ಯಾಧ್ಯಕ್ಷರು ಆದಿ ಜಾಂಬವ ಸಂಘದ ವತಿಯಿಂದ ಉಪಸ್ಥಿತರಿದ್ದರು.

City Today News 9341997936

ಲೋಕಸಭೆ ಚುನಾವಣೆ-2024 ರಲ್ಲಿ ಬಿ.ಜೆ.ಪಿ. / ಎನ್.ಡಿ.ಎ. ಮೈತ್ರಿಕೂಟವನ್ನು ಬೆಂಬಲಿಸಿದ ವಿಶ್ವಕರ್ಮ ಸಮುದಾಯಕ್ಕೆ ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ವತಿಯಿಂದ ಧನ್ಯವಾದ-ಡಾ.ಜಯಂತ್ ಕೆ.ಎಂ.

ಈ ಹಿಂದೆ ಲೋಕಸಭಾ ಚುನಾವಣೆ-2024 ದೃಷ್ಟಿಯಿಂದ ಅಖಿಲ ಭಾರತ ವಿಶ್ವಕರ್ಮ ಮಹಾಸಂಘ (ರಿ) ವು ಚುನಾವಣೆ ಪೂರ್ವದಲ್ಲಿ ಮಾನ್ಯ ಶ್ರೀ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದೀಜಿರವರು ನಮ್ಮ ವಿಶ್ವಕರ್ಮ ಸಮಾಜಕ್ಕೆ ನೀಡಿದಂತ ವಿಶ್ವಕರ್ಮ ಸಮ್ಮಾನ್ ಯೋಜನೆ ಹಾಗೂ ಅಯೋಧ್ಯೆಯ ಶ್ರೀರಾಮ ಮೂರ್ತಿಯನ್ನು ಕೆತ್ತನೆ ಮಾಡಲು ವಿಶ್ವಕರ್ಮ ಸಮಾಜದವರೇ ಆದ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ರವರಿಗೆ ಅವಕಾಶ ಕಲ್ಪಿಸಿಕೊಟ್ಟು ಮಹತ್ತರವಾದ ಕಾರ್ಯವನ್ನು ನಮ್ಮ ವಿಶ್ವಕರ್ಮ ಸಮಾಜಕ್ಕೆ ನೀಡಿರುತ್ತಾರೆ. ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆ-2024 ಕ್ಕೆ ಬಿ.ಜೆ.ಪಿ / ಎನ್.ಡಿ.ಎ. ಮೈತ್ರಿಕೂಟಕ್ಕೆ ಅಖಿಲ ಭಾರತ ವಿಶ್ವಕರ್ಮ ಮಹಾಸಂಘವು ಬೆಂಬಲ ಸೂಚಿಸಿತ್ತು. ಅದರಂತೆ ಬಿ.ಜೆ.ಪಿ. / ಎನ್.ಡಿ.ಎ. ಮೈತ್ರಿಕೂಟ ಬಹುಮತವನ್ನು ಪಡೆದು ಕೇಂದ್ರದಲ್ಲಿ ಸರ್ಕಾರವನ್ನು ಸ್ಥಾಪಿಸಿದೆ. ಈ ಬಹುಮತ ಪಡೆಯುವಲ್ಲಿ ವಿಶ್ವಕರ್ಮರ ಪಾಲೂ ಇದೆ. ಇದಕ್ಕಾಗಿ ಶ್ರಮಿಸಿದ ಭಾರತ ದೇಶದಲ್ಲಿರುವ ಎಲ್ಲಾ ವಿಶ್ವಕರ್ಮ ಸಮಾಜದವರಿಗೆ ಅಖಿಲ ಭಾರತ ವಿಶ್ವಕರ್ಮ ಮಹಾಸಂಘ (ರಿ) ದ ವತಿಯಿಂದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಜಯಂತ್ ಕೆ.ಎಂ. ಆದ ನಾನು ಮತ್ತು ಸಂಘದ ಪ.ದಾಧಿಕಾರಿಗಳು ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇವೆ. ಹಾಗೂ ಮುಂಬರುವ ರಾಷ್ಟ್ರ ಮತ್ತು ರಾಜ್ಯದ ಚುನಾವಣೆಗಳಲ್ಲಿ ಅಂದರೆ ರಾಜ್ಯಸಭಾ, ವಿಧಾನಸಭೆ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಶ್ವಕರ್ಮರಿಗೆ ಸೂಕ್ತ ರಾಜಕೀಯ ಸ್ಥಾನಮಾನ ಹಾಗೂ ಸಮಾಜದ ಶೈಕ್ಷಣಿಕ ಹಾಗೂ ಆರ್ಥಿಕ ಸದೃಢತೆಗಾಗಿ ಸರ್ಕಾರದ ಯೋಜನೆಗಳನ್ನು ರೂಪಿಸುವ ಮುಖಾಂತರ ಸಮಾಜದ ಏಳಿಗೆಗಾಗಿ ಬಿ.ಜೆ.ಪಿ. / ಎನ್.ಡಿ.ಎ. ಮೈತ್ರಿಕೂಟವು ಬೆಂಬಲಿಸಬೇಕಾಗಿ ಮನವಿ ಮಾಡುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಬಿ.ವೈ. ವಿಜಯೇಂದ್ರ ರವರ ನೇತೃತ್ವದಲ್ಲಿ ಬಿ.ಜೆ.ಪಿ. / ಎನ್.ಡಿ.ಎ. ಮೈತ್ರಿಕೂಟವು ಅತ್ಯುತ್ತಮವಾದ ಫಲಿತಾಂಶವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದು, ಬಿ.ಜೆ.ಪಿ. ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ರವರಿಗೂ ಸಹ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅಖಿಲ ಭಾರತ ವಿಶ್ವಕರ್ಮ ಮಹಾಸಂಘ (ರಿ) ದ ವತಿಯಿಂದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಜಯಂತ್ ಕೆ.ಎಂ. ತಿಳಿಸಿದರು.

City Today News 9341997936

ಡಾ. ಟಿ ಎ ಶರವಣ ಅವರು ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಪ್ರಸಾದವನ್ನು ಹೆಚ್ ಡಿ ಕುಮಾರಸ್ವಾಮಿಯವರಿಗೆ ನೀಡುವುದರ ಮೂಲಕ ಶುಭಕೋರಿದರು.



ಲೋಕ ಸಭಾ ಚುನಾವಣೆ ಸಂಬಂಧಿಸಿದಂತೆ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ  ರವರು ಮಾಜಿ ಮುಖ್ಯಮತ್ರಿಗಳಾದ  ಶ್ರೀ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭಕೋರಿದರು.

ಮಾಜಿ ಮುಖ್ಯಮತ್ರಿಗಳಾದ  ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಸಂದರ್ಭದಲ್ಲಿ, ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಜಾತ್ಯತೀತ ಜನತಾದಳದ ರಾಜ್ಯ ಉಪಾಧ್ಯಕ್ಷರಾದ ಡಾ. ಟಿ ಎ ಶರವಣ ಅವರು ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಪ್ರಸಾದವನ್ನು ಹೆಚ್ ಡಿ ಕುಮಾರಸ್ವಾಮಿಯವರಿಗೆ ನೀಡುವುದರ ಮೂಲಕ ಶುಭಕೋರಿದರು.

City Today News 9341997936

ಚುನಾವಣೆ ಫಲಿತಾಂಶ ಜೆಡಿಎಸ್ ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ – ಟಿ.ಎ.ಶರವಣ

ಟಿ.ಎ.ಶರವಣ,ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರು

ಈ ಚುನಾವಣೆ ಫಲಿತಾಂಶ ಜೆಡಿಎಸ್ ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ,
ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಆಯ್ಕೆ ಮಾಡಿದ್ದಾರೆ, ಸತತ ಮೂರನೇ ಬಾರಿಗೆ ಎನ್.ಡಿ. ಎ. ಗೆಲುವಿನ ಮೂಲಕ ಹೊಸ ದಾಖಲೆ,Bjp jds ಮೈತ್ರಿ ಎನ್ನು ರಾಜ್ಯದ ಜನ ಅಧಿಕೃತ ಮುದ್ರೆ ಒತ್ತಿದ್ದಾರೆ,ಈ ಮೈತ್ರಿ ಒಂದು ಪ್ರಬಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ,ವಿಶೇಷವಾಗಿ ಇಡೀ ಹಳೆ ಮೈಸೂರಲ್ಲಿ ದೇವೇಗೌಡ, ಕುಮಾರಸ್ವಾಮಿ ಅವರು ಮತ್ತೊಮ್ಮೆ ತಮ್ಮ ತೆಕ್ಕೆಗೆ ತೆಗೆದುಕೊಳ್ಳುವುದರ ಮೂಲಕ ಬಲಿಷ್ಠ ಪಕ್ಷ ಆಗುತ್ತೆ, Jds ಪಕ್ಷವನ್ನು ಮುಗಿಸುವ ಸಂಚು ವಿಫಲ ಆಗಿದೆ ,Jds ಎರಡು ಸ್ಥಾನ ಅಧಿಕೃತ ವಾಗಿ ಗೆದ್ದಿರಬಹುದು. ಆದರೆ ಸುಮಾರು 9ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲು ಜೆಡಿಎಸ್ ಸಹಕಾರ ಸಿಕ್ಕಿದೆ,ಹೀಗಾಗಿ ರಾಜ್ಯದಲ್ಲಿ ಜೆಡಿಎಸ್ ಪ್ರಬಲ ಶಕ್ತಿ, ಇನ್ನು ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮ್ಮಿದ್ದಾರೆ, ಕುಮಾರಸ್ವಾಮಿ , ದೇವೇಗೌಡರನ್ನು ಮುಗಿಸುವ ಸಂಚುಗೆಳನ್ನು ರಾಜ್ಯದ ಜನ ವಿಫಲ ಆಗಿದ್ದಾರೆ.ರಾಷ್ಟ್ರ ರಾಜಕಾರಣ ಕೂಡ ಮತ್ತೊಮ್ಮೆ ಎನ್.ಡಿ. ಎ ಅಧಿಕಾರಕ್ಕೆ ಬರುವ ಮೂಲಕ ಹಲವು ಯೋಜನೆಗಳು ಜೀವ ತಲೆಯಲಿವೆ, ಕರ್ನಾಟಕ ಸರಕಾರ ಹೆಚ್ಚು ಸಂಖ್ಯೆಯಲ್ಲಿ ಗೆಲ್ಲಲು ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡರೂ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ ತಿಳಿಸಿದರು.

City Today News 9341997936

ವಿಧಾನ ಪರಿಷತ್ ಚುನಾವಣೆ; ಕರಾವಳಿ ಭಾಗದ ಕ್ರೈಸ್ತರಿಗೆ ಆದ್ಯತೆ.ಬೆಂಗಳೂರು ಭಾಗದ ಕ್ರೈಸ್ತರಿಂದ ಅಸಮಾಧಾನ.


ಡಾ.ಯೂನಸ್ ಜೋನ್ಸ್- ಉಪಾಧ್ಯಕ್ಷರು, ಕೆಪಿಸಿಸಿ ಮಾನವ ಹಕ್ಕುಗಳ ವಿಭಾಗ

ಬೆಂಗಳೂರು ಜೂನ್3; ಇದೇ ಹದಿಮೂರರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಗೊಳಿಸಿರುವ ಬೆನ್ನಲ್ಲೇ ಸಮುದಾಯ ಪ್ರಾತಿನಿದ್ಯ ಕುರಿತಂತೆ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ನಲ್ಲಿ ಕ್ರೈಸ್ತ ಸಮುದಾಯದ ಕೋಟಾದಲ್ಲಿ ಕರಾವಳಿ ಭಾಗದ ಐವಾನ್ ಡಿಸೋಜಾ ಅವರನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರು ಭಾಗದ ಕ್ರೈಸ್ತ ಬಾಂಧವರು ಪಕ್ಷದ ವರಿಷ್ಢರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ಕರಾವಳಿ ಮತ್ತು ಕೊಡಗು ಭಾಗದ ಕ್ರೈಸ್ತ ಸಮುದಾಯದವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿರುತ್ತದೆ,ಆದರೆ ಅದಕ್ಕಿಂತ ಐದು ಪಟ್ಟು ಹೆಚ್ಚು ಪ್ರಮಾಣದ ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರು ಭಾಗದ ಕ್ರೈಸ್ತ ಸಮುದಾಯದವರನ್ನು ಕಡೆಗಣಿಸಲಾಗಿರುತ್ತದೆ.

ಕಳೆದ ಬಾರಿಯೂ ಮಂಗಳೂರಿನ ಐವಾನ್ ಡಿಸೋಜ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು, ಮತ್ತೆ ಅದೇ ಭಾಗದ ಐವಾನ್ ಡಿಸೋಜ ಅವರನ್ನು ನೇಮಕ ಮಾಡಿರುವುದು ಅಸಮಾಧಾನ ತಂದಿದೆ ಎಂದು ಕೆಪಿಸಿಸಿ ಮಾನವ ಹಕ್ಕುಗಳ ವಿಭಾಗದ ಉಪಾಧ್ಯಕ್ಷರು ಡಾ.ಯೂನಸ್ ಜೋನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ.

ಎಸ್.ಎಂ. ಕೃಷ್ಣ, ಧರ್ಮಸಿಂಗ್ ಅವಧಿಯಲ್ಲಿ ಕೊಡಗು ಭಾಗದ ಟಿ.ಜಾನ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು, ಅವರನ್ನು ಸಚಿವರನ್ನಾಗಿ ನೇಮಕ ಮಾಡಲಾಗಿತ್ತು, ಬೆಂಗಳೂರು ಭಾಗದಲ್ಲಿ ವಿಧಾನ ಸಭಾ ಸದಸ್ಯರಾಗಿರುವ ಸಚಿವರಾದ ಕೆ.ಜೆ.ಜಾರ್ಜ್ ಹೊರತು ಪಡಿಸಿದರೆ ಕ್ರೈಸ್ತ ಸಮುದಾಯದವರನ್ನು ಕಡೆಗಣಿಸಲಾಗಿದೆ, ಕಳೆದ ವಿಧಾನ ಸಭಾ,ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು, ಉತ್ತರ ಭಾಗದ ಕ್ರೈಸ್ತರು ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.ಮುಂಬರುವ ಬಿಬಿಎಂಪಿ ಚುನಾವಣೆಯ ಹಿನ್ನಲೆಯಲ್ಲಿ ಕ್ರೈಸ್ತ ಸಮುದಾಯದವರಿಗೆ ಹಚ್ಚಿನ ಆದ್ಯತೆ ನೀಡುವುದು ಅಗತ್ಯವಾಗಿದೆ.ಇಲ್ಲವಾದರೆ ಕ್ರೈಸ್ತ ಸಮುದಾಯದ ವಿಶ್ವಾಸವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಸಲಹೆ ನೀಡಿದ್ದಾರೆ.

City Today News 9341997936