ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

ಬೆಂಗಳೂರು: ಬಿಬಿಎಂಪಿಯು ಆಸ್ತಿ ತೆರಿಗೆ ಸಂಗ್ರಹ ಹಾಗೂ ಆದಾಯದ ಕ್ರೋಡೀಕರಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ  ತೆರಿಗೆ ಹೆಚ್ಚಿಸುವ ಮೂಲಕ ಹೊರೆ ಹೊರಿಸುತ್ತಿದೆ ಎಂದು ಆಮ್‌ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ‌ ದಾಸರಿ ಆರೋಪಿಸಿದರು.

ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಎ ಲೌಔಟ್ ಗಳ ಅನೇಕ ಭಾಗಗಳು  ಬಿಬಿಪಿಎಂಗೆ ಇದುವರೆಗೂ ಹಸ್ತಾಂತರಗೊಂಡಿಲ್ಲ. ಅಲ್ಲಿನ‌ ನಿವಾಸಿಗಳು ತೆರಿಗೆ ಕಟ್ಟಲು ಸಿದ್ಧರಿದ್ದಾರೆ. ಒಂದು ಮನೆ ಅಸೆಸ್ ಮಾಡಿ, ಬಿಬಿಎಂಪಿಗೆ ಹಸ್ತಾಂತರಿಸಲು ಅಧಿಕಾರಿಗಳು ಕನಿಷ್ಟ ಎರಡ್ಮೂರು ಲಕ್ಷ ರೂಪಾಯಿ ಲಂಚ ಕೇಳುತ್ತಿದ್ದಾರೆ. ಇದರಿಂದ ಜನರು ಬಿಬಿಎಂಪಿಗೆ ನೇರವಾಗಿ ತೆರಿಗೆ ಕಟ್ಟಲು ಆಗುತ್ತಿಲ್ಲ. ಮೂಲಸೌಲಭ್ಯಕ್ಕಾಗಿ ಪರಿತಪಿಸುವಂತಾಗಿದೆ. ಇಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು ಎಂದು ಹೇಳಿದರು.

ಬಿಡಿಎ ನಿರ್ಮಿಸಿರುವ  ಬಹುತೇಕ ಸೈಟ್, ಮನೆ, ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್ ಗಳು ಬಿಬಿಎಂಪಿಗೆ ತೆರಿಗೆ ಕಟ್ಟುತ್ತಿಲ್ಲ. ಬೆಂಗಳೂರಿನ ದಕ್ಷಿಣ ಭಾಗದ ಅಂಜನಾಪುರ ಭಾಗದಲ್ಲಿ 1ರಿಂದ11 ಬ್ಲಾಕ್ ಗಳು, ಜೆ.ಪಿ.ನಗರದ 9ನೇ ಫೇಸ್, ಬನಶಂಕರಿ 6ನೇ ಸ್ಟೇಜ್ ನ 1ರಿಂದ 10ನೇ ಬ್ಲಾಕ್ ಬಡಾವಣೆಗಳು ಹಾಗೂ ಕೆಂಗೇರಿ ಭಾಗದ ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆ ಗಳಿಂದ ಆಸ್ತಿ ತೆರಿಗೆ ಸಂಗ್ರಹವಾಗುತ್ತಿಲ್ಲ ಎಂದು ದೂರಿದರು.

ಕಂದಾಯ ಇಲಾಖೆಯ ವಿಶೇಷ ಆಯುಕ್ತರು ಈ ಬಗ್ಗೆ ಕ್ರಮ ವಹಿಸುತ್ತಿಲ್ಲ. ಬಿಡಿಎನಿಂದ ಬಿಬಿಎಂಪಿಗೆ ಅಭಿವೃದ್ಧಿ ಹೊಂದಿದ ಬಡಾವಣೆಗಳನ್ನು ಏಕೆ ಹಸ್ತಾಂತರ ಮಾಡುತ್ತಿಲ್ಲ‌?, ಇಲ್ಲಿ ಕಮಿಷನ್ ವ್ಯವಹಾರ ನಡೆಯುತ್ತಿದೆಯೇ? ಡಿ.ಕೆ.ಶಿವಕುಮಾರ್ ಹಾಗೂ ಬಿಡಿಎ ಅಧ್ಯಕ್ಷರಿಗೆ ಕಮಿಷನ್ ಹೋಗುತ್ತಿದ್ದೆಯೇ?  ಎಂದು‌ ಪ್ರಶ್ನಿಸಿದರು.

ಬಿಬಿಎಂಪಿಗೆ ಹೊಸ ತೆರಿಗೆ ವ್ಯವಸ್ಥೆ ಜಾರಿಗೊಳಿಸಿದರೆ ಅಧಿಕ ಆಸ್ತಿ ತೆರಿಗೆ ಬರುತ್ತದೆಯೇ? ಅಂದಾಜು ₹20 ಸಾವಿರ ಕೋಟಿ ಆದಾಯ ಬರುವಂತ ಯೋಜನೆಗಳ ಬಗ್ಗೆ ನಮ್ಮ ಪಕ್ಷ  ಸಂಶೋಧನೆ ಮಾಡುತ್ತಿದೆ. ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಆಸ್ತಿ ತೆರಿಗೆ ಮತ್ತು ಇನ್ನಿತರ ತೆರಿಗೆಯನ್ನು ಬಿಬಿಎಂಪಿಗಾಗಿ ಸಂಗ್ರಹಿಸಲು ಮುಂದಾಗುತ್ತೇವೆ ಎಂದು ತಿಳಿಸಿದರು.

ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ.ಸತೀಶ್ ಕುಮಾರ್ ಮಾತನಾಡಿ, ಬಿಬಿಎಂಪಿ ಜೊತೆಗೆ ಬಿಡಿಎ, ಬಿಡಬ್ಲ್ಯುಎಸ್ಎಸ್ ಬಿ ಮುಂತಾದ ಅಂಗ ಸಂಸ್ಥೆಗಳು ಒಗ್ಗೂಡದಿರುವುದು ದುರಂತ. ಸಮನ್ವಯತೆ ಸಾಧಿಸದಿದ್ದರೆ ಅಭಿವೃದ್ಧಿ ಕುಂಠಿತವಾಗಲಿದೆ. ಸರ್ಕಾರ ಈ ಬಗ್ಗೆ ಜಾಣ ವಹಿಸುವುದು ತರವಲ್ಲ. ನಿರ್ಮಾಣ ಕಾರ್ಯ ಅಪೂರ್ಣಗೊಂಡಿರುವ ಕೆಂಪೇಗೌಡ ಬಡಾವಣೆ ಬಗ್ಗೆ ನಗರಾಭಿವೃದ್ಧಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

₹100 ಕೋಟಿಗೂ ಅಧಿಕ ಆಸ್ತಿ ತೆರಿಗೆ ವಸೂಲಿ ಆಗಬೇಕಿದೆ ಎಂದು ಬಿಬಿಎಂಪಿ ಅಡಿಟ್ ವರದಿ ಹೇಳಿದೆ. ಈ ಬಗ್ಗೆ ಸರ್ಕಾರ ಕ್ರಮವಹಿಸುತ್ತಿಲ್ಲ ಎಂದರು.

City Today News 9341997936

ಕೇಂದ್ರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಚ್. ಡಿ. ಕುಮಾರ್ ಸ್ವಾಮಿ ಅವರಿಗೆ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ ರವರು ಶುಭಕೋರಿದರು.

ಕೇಂದ್ರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಚ್. ಡಿ. ಕುಮಾರ್ ಸ್ವಾಮಿ ಅವರಿಗೆ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ  ರವರು  ಶುಭಕೋರಿದರು.


ಇಂದು ದೆಲ್ಲಿ ಯಲ್ಲಿ  ಮಾನ್ಯ ಶ್ರೀ. ನರೇಂದ್ರ ಮೋದಿ ಯವರ ನೇತೃತ್ವದ NDA ಸರಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಚ್.ಡಿ.ಕುಮಾರ ಸ್ವಾಮಿ ಅವರಿಗೆ ಹೂ ಗುಚ್ಛ ನೀಡಿ ಶುಭ ಕೋರಿದ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಹಾಗು ಬೊಜೆ ಗೌಡ.

City Today News 9341997936

ವಿಧಾನಪರಿಷತ್ ನಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮೆಲ್ಲರದ ಧ್ವನಿ ಡಾ.ಸಿ.ಎಸ್.ದ್ವಾರಕಾನಾಥ್ ಸರ್ ಅವರ ಮೂಲಕ ಮೊಳಗುವುದನ್ನು ಕೇಳಿಸಿಕೊಂಡು ಪುಲಕಿತರಾಗಲು ಕಾತುರರಾಗಿ ಕಾಯುತಿದ್ದೇವೆ

ಈ ದೇಶಕ್ಕೆ ಸ್ವಾತಂತ್ರ್ಯ ಬಂದು, ವಿಧಾನಸಭೆ ಮತ್ತು ವಿಧಾನಪರಿಷತ್ ಸೃಷ್ಟಿ ಆದಾಗಿನಿಂದಲೂ ನಮ್ಮ ಅಲೆಮಾರಿ/ಆದಿವಾಸಿ ಸಮುದಾಯದ ಪ್ರತಿನಿದಿಗಳು ಎರಡೂ ಸದನಗಳಲ್ಲಿ ಕಾಲಿಟ್ಟಿಲ್ಲ. ಅವರಿಗೆ ಈವರೆಗೂ ಇದರ ಅರಿವೇ ಇರಲಿಲ್ಲ. ಈ ಕಾರಣಕ್ಕೆ ನಮ್ಮ ನೋವು, ಅಸಹಾಯಕತೆ ಮತ್ತು ಸಮಸ್ಯೆಗಳ ಕುರಿತಂತೆ ವಿಧಾನಸಭೆ ಮತ್ತು ವಿಧಾನಪರಿಷತ್‌ ನಲ್ಲಿ ಈವರೆಗೂ ಯಾವುದೇ ಚರ್ಚೆಯಾಗಿಲ್ಲ!! ನಮ್ಮ ಸಮಸ್ಯೆಗಳ ಕುರಿತು ಯಾರಿಗೂ ಅರಿವಿಲ್ಲ, ಆದ್ದರಿಂದಲೇ ನಾವು ಇಂದಿಗೂ ನಿರ್ಗತಿಕರಾಗಿಯೇ ಉಳಿದಿದ್ದೇವೆ.

“ಶಾಸನವನ್ನು ರೂಪಿಸುವ ಜಾಗಕ್ಕೆ ನೀವು ಹೋಗದ ಹೊರತು ನಿಮ್ಮ ಸಮಸ್ಯೆಗಳು ಪರಿಹಾರವಾಗಲಾರವು” ಎಂದು ಡಾ.ಅಂಬೇಡ್ಕರ್ ರವರು ಹೇಳುತ್ತಾರೆ. ಆದರೆ ಹಣಬಲ, ಜಾತಿಬಲ, ಸಂಘಟನೆಯ ಬಲ ಯಾವುದೂ ಇಲ್ಲದ ನಾವು ವಿಧಾನಸಭೆ, ವಿಧಾನಪರಿಷತ್‌ ಗಳಿಗೆ ಹೇಗೆ ಹೋಗಲು ಸಾಧ್ಯ? ಆದ್ದರಿಂದ ಕನಿಷ್ಟ ವಿಧಾನಪರಿಷತ್ತಿಗೆ ನಮ್ಮ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡುವುದೊಂದೇ ಈಗಿರುವ ಮಾರ್ಗ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಆದಿವಾಸಿ ಮತ್ತು ಅಲೆಮಾರಿಗಳೆಲ್ಲಾ ಸೇರಿ ಸುಮಾರು 120 ಸಮುದಾಯಗಳು ಸಂಘಟಿತರಾಗಿ ಡಾ.ಸಿ.ಎಸ್.ದ್ವಾರಕಾನಾಥ್ ಸರ್ ಅವರನ್ನು ನಮೆಲ್ಲರ ಪ್ರತಿನಿಧಿಯನ್ನಾಗಿ ವಿಧಾನಪರಿಷತ್ತಿಗೆ ಕಳುಹಿಸಿಕೊಡಲು ನಾಮನಿರ್ದೇಶನ ಮಾಡಬೇಕೆಂದು ಒತ್ತಾಯಿಸಲು ತೀರ್ಮಾನಿಸಿದ್ದೇವೆ.

ದ್ವಾರಕಾನಾಥ್ ಸರ್ ಅವರು ಕಳೆದ ಮೂರುನಾಲ್ಕು ದಶಕಗಳಿಂದ ನಮ್ಮ ಅಲೆಮಾರಿ ಮತ್ತು ಆದಿವಾಸಿ ಸಮಸ್ಯೆಗಳ ಕುರಿತಂತೆ ನ್ಯಾಯಾಲಯ ಮತ್ತು ಸರ್ಕಾರದ ಮಟ್ಟದಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಡುತಿದ್ದಾರೆ. ನಮ್ಮ ಎಲ್ಲಾ ಸಮುದಾಯಗಳ ಬಗ್ಗೆ ಅವರಿಗೆ ಅಪಾಯ ಮಾಹಿತಿ ಇದೆ. ಸುಮಾರು 48 ಸಮುದಾಯಗಳ ಸಂಶೋಧನಾ ಕೃತಿಗಳಿಗೆ ಮಾರ್ಗದರ್ಶಕರಾಗಿ ಸರ್ಕಾರದ ‘ಡಾ.ಅಂಬೇಡ್ಕರ್ ಸಂಶೋದನ ಸಂಸ್ಥೆ’ಗೆ ಕೆಲಸ ಮಾಡಿ ಕೊಟ್ಟಿದ್ದಾರೆ. ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿರುವ 46 ಅಲೆಮಾರಿ ಸಮುದಾಯಗಳಿಗೆ ಅಸ್ಮಿತೆ ನೀಡಿದ್ದಾರೆ.

ರಾಜ್ಯದಲ್ಲಿ ಮೊಟ್ಟಮೊದಲ ಸಲ ಅಲೆಮಾರಿ ಪಟ್ಟಿ ಪ್ರಕಟಿಸಲು ಕಾರಣರಾಗಿದ್ದಾರೆ. “ಅಲೆಮಾರಿ ಕೋಶ” “ಅಲೆಮಾರಿ ಅಭಿವೃದ್ಧಿ ನಿಗಮ” ಮತ್ತು ಈಗ ಬಜೆಟ್ ನಲ್ಲಿ ಪ್ರಕಟವಾದ “ಅಲೆಮಾರಿ ಆಯೋಗ” ರಚಿಸಲು ಕೂಡ ದ್ವಾರಕಾನಾಥ್ ಅವರೇ ಮೂಲ ಕಾರಣಕರ್ತರಾಗಿದ್ದಾರೆ. ನಾಡಿನಾದ್ಯಂತ ಮೂಲೆಮೂಲೆಗಳಿಂದ ದಿಕ್ಕಿಲ್ಲದೆ ಬರುವ ಅಲೆಮಾರಿಗಳ ಜಾತಿ ಸರ್ಟಿಫಿಕೇಟ್, ಸಾಲಸೋಲ, ನಿವೇಶನ, ಭೂಮಿ, ಅನುದಾನ, ಸವಲತ್ತು ಕೂಡಿಸಲು ತಮ್ಮ ಲಾಯರ್ ಆಫೀಸನ್ನೇ ಮೀಸಲಾಗಿ ಇಟ್ಟಿದ್ದಾರೆ! ಸದಾ ಅಲೆಮಾರಿ, ಆದಿವಾಸಿಗಳ ಸಮಸ್ಯೆಗಳು ಮತ್ತು ಪರಿಹಾರಗಳ ಕುರಿತಂತೆ ನಿರಂತರ ಅಧ್ಯಯನದಲ್ಲಿ ತೊಡಗಿರುತ್ತಾರೆ. ಒಂದು ಮಾತಿನಲ್ಲಿ ಹೇಳುವುದಾದರೆ ದ್ವಾರಕಾನಾಥ್ ಅವರು ನಮ್ಮ ಪಾಲಿಗೆ ಅಂಬೇಡ್ಕರ್ ರವರೇ ಕಳಸಿದ ಅವದೂತರಿದ್ದಂತೆ. ಅವರು ಮಾಡಿದ ಕೆಲಸಗಳನ್ನು ಪಟ್ಟಿ ಮಾಡುತ್ತಾ ಹೋದರೆ ಅದಕ್ಕೆ ಕೊನೆಮೊದಲಿರಲಾರದು.

ಇಷ್ಟೆಲ್ಲಾ ಹಿನ್ನೆಲೆಯುಳ್ಳ ದ್ವಾರಕಾನಾಥ್ ಸರ್ ಅವರು ಮಾತ್ರ ನಮ್ಮ ಎಲ್ಲಾ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಕುರಿತ ಪ್ರೀತಿ, ಕಾಳಜಿ, ಅರಿವು ಮತ್ತು ಜ್ಞಾನ ಉಳ್ಳವರು, ಅವರು ಮಾತ್ರ ನಮ್ಮ ಎಲ್ಲಾ 120 ಸಮುದಾಯಗಳನ್ನು ವಿಧಾನಪರಿಷತ್ ನಲ್ಲಿ ಸಮರ್ಥವಾಗಿ ಪ್ರತಿನಿಧಿಸಬಲ್ಲರು. ಈ ಕಾರಣಕ್ಕೆ, ದ್ವಾರಕಾನಾಥ್ ಅವರನ್ನು ನಮ್ಮೆಲ್ಲರ ಪ್ರತಿನಿಧಿಯಾಗಿ ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕೆಂದು ಅಖಿಲ ಭಾರತ ಕಾಂಗ್ರೆಸ್ ಅಧಿನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ನಮ್ಮ ಜನಪ್ರಿಯ ಮುಖ್ಯಮಂತ್ರಿ ಗಳಾದ ಶ್ರೀ ಸಿದ್ಧರಾಮಯ್ಯ ನವರನ್ನು ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅದ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ನೇರ ಮತ್ತು ನಿಷ್ಟುರತೆಗೆ ಹೆಸರಾದ ಶ್ರೀ ಶಿವಕುಮಾರ್ ಅವರನ್ನು ಅತ್ಯಂತ ನಮ್ರವಾಗಿ ವಿನಂತಿಸುತ್ತೇವೆ.

ವಿಧಾನಪರಿಷತ್ ನಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮೆಲ್ಲರದ ಧ್ವನಿ ಡಾ.ಸಿ.ಎಸ್.ದ್ವಾರಕಾನಾಥ್ ಸರ್ ಅವರ ಮೂಲಕ ಮೊಳಗುವುದನ್ನು ಕೇಳಿಸಿಕೊಂಡು ಪುಲಕಿತರಾಗಲು ಕಾತುರರಾಗಿ ಕಾಯುತಿದ್ದೇವೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಅಧ್ಯಕ್ಷರಾದ ಬಿ. ಎಲ್. ಹನುಮಂತಪ್ಪ ಮತ್ತು ಪ್ರಧಾನ ಕಾರ್ಯಧರ್ಶಿಗಳಾದ ನಾಗರಾಜ್ ಎಚ್. ಸಿ. ತಿಳಿಸಿದರು.

City Today News 9341997936

ಮಡಿವಾಳ ಸಮಾಜದ ಅರ್ಹ ವ್ಯಕ್ತಿಗೆ / ಸಾಧಕರಿಗೆ /ಪರಿಣಿತರನ್ನು ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ಒತ್ತಾಯ

ಮಡಿವಾಳ ಸಮಾಜದ ಅರ್ಹ ವ್ಯಕ್ತಿಗೆ / ಸಾಧಕರಿಗೆ /ಪರಿಣಿತರನ್ನು ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡುವ ಬಗ್ಗೆ.

ಕರ್ನಾಟಕ ರಾಜ್ಯದಲ್ಲಿ ಮಡಿವಾಳ ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದ ಹಾಗೂ ನಿರ್ಲಕ್ಷಿತ ಸಮುದಾಯವಾಗಿದೆ. ಸಾಮಾಜಿಕ ಅಸಮಾನತೆ, ಶೈಕ್ಷಣಿಕ ಹಿಂದುಳಿದಿರುವಿಕೆ, ಆರ್ಥಿಕ ದುರ್ಬಲತೆ, ಕಡಿಮೆ ಪ್ರಮಾಣದ ಜನಸಂಖ್ಯೆ ಹಾಗೂ ರಾಜಕೀಯ ಪ್ರಾತಿನಿಧ್ಯ ಮತ್ತು ಸ್ಥಾನಮಾನ ಇಲ್ಲದಿರುವುದು ಈ ಸಮುದಾಯ ಹಿಂದುಳಿಯಲು ಪ್ರಮುಖ ಕಾರಣಗಳಾಗಿವೆ.

ಸ್ವಾತಂತ್ರ್ಯಾ ನಂತರದ 77 ವರ್ಷಗಳ ಬಳಿಕವೂ ಸಹ ಕರ್ನಾಟಕ ರಾಜ್ಯದಲ್ಲಿ ಮಡಿವಾಳ ಸಮುದಾಯಕ್ಕೆ ಯಾವುದೇ ರೀತಿಯ ರಾಜಕೀಯ ಪ್ರಾತೀನಿಧ್ಯ ಹಾಗೂ ಸ್ಥಾನಮಾನ ಲಭೀಸದಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದೆ. ವರ್ತಮಾನದಲ್ಲಿನ ಚುನಾವಣೆ ವ್ಯವಸ್ಥೆಯಲ್ಲಿ ದೊಡ್ಡ ದೊಡ್ಡ ಹಾಗೂ ಬಲಾಡ್ಯ ಸಮುದಾಯಗಳ ನಡುವೆ ಸಣಸಾಡಿ ರಾಜಕೀಯ ಪ್ರಾತೀನಿಧ್ಯ ಪಡೆಯುವುದು ಅತ್ಯಂತ ಸಣ್ಣ ಸಮುದಾಯವಾದ ಮಡಿವಾಳ ಸಮಾಜಕ್ಕೆ ಸಾಧ್ಯವಿಲ್ಲದ ಸಂಗತಿಯಾಗಿದೆ.

ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪನೆಯಾದ ನಂತರ ಮಡಿವಾಳ ಸಮುದಾಯಕ್ಕೆ ರಾಜಕೀಯ ಪ್ರಾತೀನಿಧ್ಯ ದೊರೆತದ್ದು ಅತೀ ವಿರಳ ಹಾಗೂ ಅಲ್ಪ ಮಾತ್ರ 1980 ರಲ್ಲಿ ಜನತಾ ಪಕ್ಷದಿಂದ ಮಡಿವಾಳ ಸಮುದಾಯದ ವಿದ್ಯಾಧಾರ ಗುರುಜಿಯವರನ್ನು ಎಂ.ಎಲ್.ಸಿ. ಮಾಡಲಾಗಿತ್ತು. ತದನಂತರ 2008 ರಲ್ಲಿ ಶ್ರೀ ಎನ್. ಶಂಕರಪ್ಪ ರವರನ್ನು ಬಿಜೆಪಿ ಪಕ್ಷವು ಎಂ.ಎಲ್.ಸಿ. ಯಾಗಿ ಮಾಡಿತ್ತಾದರೂ ಕೇವಲ 2 ವರ್ಷಗಳಲ್ಲಿ ಅವರ ಸ್ಥಾನಪಲ್ಲಟ್ಟ ಮಾಡುವ ಮೂಲಕ ಮಡಿವಾಳ ಜನಾಂಗದ ರಾಜಕೀಯ ಪ್ರಾತೀನಿಧ್ಯವನ್ನು ಕಸಿದುಕೊಂಡಿತ್ತು. ತದನಂತರ ಮಡಿವಾಳ ಸಮುದಾಯಕ್ಕೆ ಯಾವುದೇ ರಾಜಕೀಯ ಸ್ಥಾನಮಾನ ಲಭ್ಯವಾಗಿರುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಿಂದ ಇದುವರೆವಿಗೂ ಮಡಿವಾಳ ಸಮುದಾಯಕ್ಕೆ ರಾಜಕೀಯ ಪ್ರಾತೀನಿಧ್ಯ ದೊರೆತಿರುವುದಿಲ್ಲ. ಈ ಜನಾಂಗದ ಸಂಕಷ್ಟಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರಾತೀನಿಧ್ಯದ ಅವಶ್ಯಕತೆ ಇರುತ್ತದೆ. ಆದ್ದರಿಂದ, ಪ್ರಸ್ತುತ ನಡೆಯುತ್ತಿರುವ ಎಂ.ಎಲ್.ಸಿ. ನಾಮ ನಿರ್ದೇಶನದಲ್ಲಿ ಮಡಿವಾಳ ಜನಾಂಗ ಅರ್ಹ ವ್ಯಕ್ತಿಯೊಬ್ಬರಿಗೆ ಪ್ರಾತೀನಿಧ್ಯ ನೀಡಬೇಕೆಂದು ಸಮಸ್ತ ಮಡಿವಾಳ ಜನಾಂಗದ ಪರವಾಗಿ ನಿವೇದಿಸಿಕೊಳ್ಳುತ್ತೇವೆ ಎಂದು ಸಿ. ನಂಜಪ್ಪ-ಅಧ್ಯಕ್ಷರು, ಬಿ.ಆರ್. ಪ್ರಕಾಶ್ – ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಘದ ಪ್ರಮುಖರುಗಳು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

City Today News 9341997936

Provide immediate protection to the women affected by this breach of privacy.

Request for Immediate Action and Protection Regarding Sexual Exploitation Allegations

I am writing to you in my capacity as the President of the Mahila Congress KPCC to express our deep concern and to seek immediate intervention from the National Women’s Commission on a matter of serious allegations that have surfaced against an MP, as brought forth by BJP leader Devaraje gowda.

It has been brought to our attention that a pen drive, allegedly released in Hasan, contains videos that implicate the sexual exploitation of more than 2000 women. This act not only violates the privacy and dignity of the women involved but also poses a significant threat to their safety and well-being.

In light of these disturbing revelations, I urge the Commission to

1. Provide immediate protection to the women affected by this breach of privacy.

2. Register a formal case against the individual(s) responsible for the creation and dissemination of these videos.

3. Conduct a comprehensive investigation into the allegations and ensure that all parties involved are held accountable.

Furthermore, it has been alleged that political motivations may be influencing the situation, as Mr. Devaraje gowda has also mentioned the denial of an MP ticket to a JDS candidate. This adds a layer of complexity to the case that requires your esteemed body’s unbiased scrutiny.

The Mahila Congress KPCC is committed to supporting the Commission in any capacity to safeguard the rights and dignity of these women and to ensure that justice is served without delay.

I trust that the National Women’s Commission will take prompt and decisive action in this regard.

The above statement released by Asma Khanum, State General Secretary today.

City Today News 9341997936