ಲೇಖಕ ಮತ್ತು ಪತ್ರಕರ್ತ ತುರುವನೂರು ಮಂಜುನಾಥ ರವರ ‘ಮೊಳಕೆ’ ಕೃತಿ ಬಿಡಗಡೆ

ಬೆಂಗಳೂರು;-ಸಾಹಿತ್ಯಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ ಎಂದು ನಾಡೋಜ,ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ಪಟ್ಟರು.
ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ತುರುವನೂರು ಮಂಜುನಾಥ ಅವರ ‘ಮೊಳಕೆ ಕೃತಿಯನ್ನು ಬಿಡಗಡೆಗೊಳಿಸಿ ಮಾತನಾಡಿದ ಅವರು ಸಾಹಿತ್ಯ ಕ್ಷೇತ್ರದಲ್ಲಿ ವಿನಮ್ರತೆಯಿಂದ ವಿಷಯ  ಮತ್ತು ವಿಮರ್ಶೆಗಳ ಮಂಡನೆಯಿಂದ  ಬರಹಗಾರ ಮೌಲಿಕ ಗುಣಗಳು ಪ್ರಮುಖ ಪಾತ್ರ ವಹಿಸುತ್ತಾನೆ, ಆ ನಿಟ್ಟಿನಲ್ಲಿ ವಿನಮ್ರತೆಯಿಂದಲೇ ತುರುವನೂರು ಮಂಜುನಾಥ ಈ ಕೃತಿಯಲ್ಲಿ ವಿಷಯಮಂಡನೆ ಮಾಡುವ ಮೂಲಕ ಜನರಿಗೆ ನೇರವಾಗಿ ತಲುಪುವ ಪ್ರಮುಖ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು
ಸಾಹಿತ್ಯ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಾದ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಹಿಂದಿನ ಸಾಹಿತಿಗಳ ನಡುವೆ ಸಾಹಿತ್ಯ ಸಂವಾದಗಳು ನಡೆಯುತ್ತಿದ್ದ ಕಾರಣ ಗುಣಮಟ್ಟದ ಸಾಹಿತ್ಯ ರಚನೆಯಾಗುತ್ತಿದ್ದವು ಆದರೆ ಇತ್ತೀಚಿನ ದಿನಗಳ ಅಂತ ವಾತಾವರಣ ಕಡಿಮೆಯಾಗುತ್ತಿದೆ ಎಂದು ಹೇಳಿದರು.
ಮೊಳಕೆ ಕೃತಿ ಯಾವುದೆ ವೈಚಾರಿಕ ಪಂಥಕ್ಕೆ ಸೇರದೆ ಉತ್ತಮವಾದದನ್ನು ಆಯ್ಕೆಮಾಡಿಕೊಳ್ಳಬೇಕು ಎನ್ನುವ ದೃಷ್ಟಿಯಲ್ಲಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಆ ನಿಟ್ಟಿನಲ್ಲಿ ಜನಪರತೆಯ ಹಾದಿಯಲ್ಲಿ ಈ ಕೃತಿ ಗೆಲ್ಲುತ್ತದೆ ಎಂದು ವಿಶ್ಲೇಷಿಸಿದರು.
ಯು.ಆರ್. ಅನಂತಮೂರ್ತಿ ಅವರ ಸಂಸ್ಕಾರ ಕುರಿತು ಪರಿಚಯಿಸಿರುವ ಅವರು ಉತ್ತಮ ವಿಮರ್ಶೆಯೊಂದನ್ನು ಮಂಡಿಸಿದ್ದಾರೆ ಹಾಗೆಯೇ ಗದ್ದರ್ ಕುರಿತಂತ,ಅವರ ಹೋರಾಟ ಮತ್ತು ಕೊನೆಕಾಲದ ಕುರಿತು ಅವರ ಜೀವಂತಿಕೆಯನ್ನು ಪ್ರಸ್ತಾಪ ಮಾಡಿದ್ದಾರೆ, ವ್ಯಕ್ತಿಚಿತ್ರಗಳಲ್ಲಿ ಉತ್ತಮವಾದದ್ದನ್ನು ಮಾತ್ರ ಆಯ್ಕೆಮಾಡಿಕೊಂಡು ಜನರಿಗೆ ತಲುಪಿಸುವ ಕೆಲಸ ಮಂಜುನಾಥ್ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಈ ಕೃತಿಯಲ್ಲಿ ಮಂಜುನಾಥ ಅಂತರಾಳದ ಭಾವಗಳ ಕುರಿತು ಬರೆದಿರುವ ಕಾರಣ ಎದೆಗೆ ಬಿದ್ದ ಆ ಕ್ಷಣದ ಅಕ್ಷರಗಳ ಮತ್ತು ವಿಷಯಗಳನ್ನು ಉತ್ತಮವಾಗಿ ಪ್ರಸ್ತಾಪಿಸುವು ಮೂಲಕ ಒಂದು ವೈಚಾರಿಕ ಮನೋಭವಾದ ಹಿನ್ನಲೆಯಲ್ಲಿ ಬರದ ಕಾರಣ ಎಲ್ಲವೂ ಜನಪರ ಮತ್ತು ಜೀವಂತಿಕೆಯನ್ನು ಪಡೆದಿವೆ ಎಂದು ಹೇಳಿದರು.ಭಕ್ತಿ ಇರಬೇಕು ಆದರೆ ಫಂಥ ಸ್ಥಾಪಿದ ಧರ್ಮವ ಭಕ್ತಿಯ ಹೆಸರಿನಲ್ಲಿ ಮೂಡನಂಬಿಕೆ ಕಂದಾಚಾರಗಳನ್ನು ಸಮಾಜದಲ್ಲಿ ಹೇಗೆ ಶೋಷಣೆಗೊಳ್ಳುತ್ತದೆ ಎನ್ನವುದನ್ನು ಈ ಕೃತಿಯಲ್ಲಿ ಪ್ರಸ್ತಾಪಿಸಿದ್ದಾರೆ, ಭಕ್ತಿಯ ಮೂಲ ಆಶಯವನ್ನು ತಿಳಿಸಲು ಹೊರಟಿರುವುದು ಒಂದು ವೈಚಾರಿಕೆ ನೆಲಗಟ್ಟಿನ ಹಿನ್ನಲೆಯಲ್ಲಿ ಇದು ಅತ್ಯಂತ ಮಹತ್ವ ಪಡೆಯುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್ ಮತನಾಡಿ ಪತ್ರಿಕೋದ್ಯಮದಲ್ಲಿ ಇಂದು ಸತ್ಯ ಅಸತ್ಯವಾಗಿಹೋಗಿದೆ. ಸತ್ಯದ ಹೆಸರಿನಲ್ಲಿ ಸುಳ್ಳುಗಳನ್ನು ರಾರಾಜಿಸಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಈ ನಿಟ್ಟಿನಲ್ಲಿ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಇನ್ನೊಬ್ಬ ಹಿರಿಯ ಪ್ರತಕರ್ತ ಅನಂತ ಚಿನಿವಾರ ಮಾತನಾಡಿ ಇಂದು ಪತ್ರಕರ್ತನಾದವನಿಗೆ ಅಹಂ ಮತ್ತು ಸಿನಿಕತನ ಇರಬಾರದು ಅದರಿಂದ  ಸುದ್ದಿಗಳ ಮೇಲೆ ಪರಿಣಾಮ ಬೀರುತ್ತವೆ, ಹೀಗಾಗಿಯೇ ಇಂದು ಸುದ್ದಿಗಳ ಗುಣಮಟ್ಟ ಕಡಿಮೆಯಗುತ್ತಿದೆ ಎಂದು ವಿಷಾದಿಸಿದರು.
ಪತ್ರಕರ್ತರಾದವರ ಸ್ಥಿತಿ ಇಂದು ಶೋಚನಿಯವಾಗಿದೆ ಸುದ್ದಿಮನೆಯ ಮಾಲೀಕ ಹೇಳಿದ ರೀತಿಯಲ್ಲಿ ಸುದ್ದಿಗಳನ್ನು ಸೃಷ್ಟಿಸುವುದರಿಂದ ಸತ್ಯ ಹೇಳಬೇಕಾದ ಸಂದರ್ಭದಲ್ಲಿ ಸುಳ್ಳುಗಳನ್ನು ಸೃಷ್ಟಿಯಾಗುತ್ತಿವೆ ಎಂದು ಹೇಳಿದರು, ಇದರಿಂದ ಇಂದು ಮಾದ್ಯಮಗಳ ಮೇಲೆ ನಂಬಿಕೆಯಿಲ್ಲದಂತಾಗಿದೆ ಎಂದು ವಿಶ್ಲೇಷಿಸಿದರು.
ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ,ಪತ್ರಿಕೋದ್ಯಮದ ಸ್ಥಿತಿ ಶೋಚನೀಯವಾಗಿದೆ ಸೋಶಿಯಲ್ ಮೀಡಿಯಾ ಹಾವಳಿಯಿಂದ ಯಾರು ಪತ್ರಕರ್ತರು ಯಾರು ಅಲ್ಲ ಎನ್ನುವುದನ್ನು ಗುರುತಿಸಲು ಆಗದ ಸ್ಥಿತಿ ಬಂದೊದಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪತ್ರಿಕೆಗಳು ಒಂದು ಕಾಲದಲ್ಲಿ ಜಾಹೀರಾತು ಇಲ್ಲದೆ ಪ್ರಕಟವಾಗುತ್ತಿದ್ದವು ಆದರೆ ಈಗ ಜಾಹೀರಾತು ಇಲ್ಲದೆ ಪತ್ರಿಕೆಗಳು ನಡೆಯುವುದು ಕಷ್ಟವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಜಿ.ಎನ್,ಶಿವಮೂರ್ತಿ ಮತ್ತು ಮೊಳಕೆ ಕೃತಿಯ ಲೇಖಕ ಮತ್ತು ಪತ್ರಕರ್ತ ತುರುವನೂರು ಮಂಜುನಾಥ ,  ಹಿರಿಯ ಪತ್ರಕರ್ತ ಹನುಮೇಶ್ ಯಾವಗಲ್  ಹಾಜರಿದ್ದರು.

City Today News 9341997936

Dr.Yoonas Jones received The ‘BHARATH JYOTHI’ National Award

Dr.Yoonas Jones received The ‘BHARATH JYOTHI’ National Award in recognition of his remarkable achievements in SOCIAL WORKS  and FILMS from Dr. Ramesh Survey, Chairman of ‘SURVE CULTURAL ACADEMY(R)’,

Smt. Vimala Mala Bujjiah, esteemed author, Mr. Raj Sampatjith, Committee Director, and other prominent dignitaries were present in the award presenting event, at a ceremony held at Ravindra Kalakshetra Kannada Bhavana 27/12/2024 Friday, Bangalore, Karnataka, organized by SURVEY CULTURAL ACADEMY(R), Affiliated to Kannada and Culture, Government of Karnataka.

City Today News 9341997936

FC Expo 2025: A Platform to Empower Vokkaliga Entrepreneurs


Bangalore: The First Circle Society (FCS) is organising the first-of-its kind Udyami Vokkaliga-FC Expo 2025. This three-day entrepreneurial extravaganza dedicated to fostering the growth and success of Vokkaliga enterprises between January 3- 5. 2025 at Gayatri Grand and Gayatri Vriksha, Palace Grounds. This landmark event will showcase the entrepreneurial spirit of the Vokkaliga community while providing a platform for innovation, networking, and collaboration.

The Vokkaliga community, deeply rooted in South Karnataka for over 1,800 years, has a rich legacy of agricultural prowess and leadership across diverse sectors. Vokkaligas have played a pivotal role in shaping Karnataka’s history and development. Over time, they have excelled in education, engineering, and medicine, guided by the vision of luminaries like Kuvempu and Adichunchanagiri Shree. However, the shift in global dynamics over the past five decades has created challenges, with limited representation in trade, modern industries, and digital enterprises. Recognising this gap, FCS was established in 2022 to foster entrepreneurship within the Vokkaliga community by building a robust network of mutual growth and support.

With over 10,000 active members and branches across Karnataka, FCS promotes collaboration through marketing, sourcing, and innovation while providing professional training and mentorship. The upcoming FC Expo 2025 will bring together community entrepreneurs, showcasing their products and services while encouraging partnerships and knowledge sharing. FCS also leverages cutting-edge tools like FC Bills Tech and the FC Next App, alongside the guidance of Adichunchanagiri Mutt, to empower members with digital solutions for business growth.

On behalf of The First Circle Society (FCS) the foresaid information were released at a press meet held at press club of bengaluru.

City Today News 9341997936

ಡಿಸೆಂಬರ್ 31: ಜನವರಿ 1ರ ಭೀಮ-ಕೊರೇಗಾಂವ್ ವಿಜಯೋತ್ಸವಕ್ಕೆ ಚಾಲನೆ

ಪ್ರತಿವರ್ಷವೂ ಆಚರಿಸಿತ್ತಿರುವಂತೆ ಮುಂದಿನ ಜನವರಿ 01ರಂದು ಭೀಮ- ಕೊರೇಗಾಂವ್ ವಿಜಯೋತ್ಸವವನ್ನು ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿ ಬಳಗದಿಂದ ದೇಶದಾದ್ಯಂತ ಆಚರಿಸಲಾಗುತ್ತಿದೆ. ಕರ್ನಾಟಕದಲ್ಲೂ ಸಹ ಎಲ್ಲಾ ಜಿಲ್ಲೆಗಳಲ್ಲೂ ಈ ವಿಜಯೋತ್ಸವವನ್ನು ಸಮತಾ ಸೈನಿಕ ದಳವು ಆಚರಿಸುತ್ತಿದೆ. ಅಸ್ಪೃಶ್ಯ ಜನಾಂಗಗಳು ಕೇವಲ ಗುಲಾಮರೆಂದು ಬಿಂಬಿಸುತ್ತಿದ್ದ ಜಾತಿವಾದಿ ಶಕ್ತಿಗಳಿಗೆ ಪಾಠಕಲಿಸುವ ಭೀಮ-ಕೊರೇಗಾಂವ್ ಯುದ್ಧದ 2 1-1-1818 ನಡೆದು ಈ ದೇಶದ ಹೊಸ ಚರಿತ್ರೆ ಬರೆಯಲ್ಪಟ್ಟಿತು. ಮಹರ್ ಜನಾಂಗದ 500 ಸೈನಿಕರ ಪಡೆಯು ಪೂನಾದ ಪೇಳ್ವೆ ಸಂಸ್ಥಾನದ 28000 ಸೈನಿಕರನ್ನು ಕೇವಲ 24 ಗಂಟೆಗಳಲ್ಲಿ ಸದೆಬಡೆದು 2ನೇ ಬಾಜಿರಾಯನನ್ನು ಯುದ್ಧ ಭೂಮಿಯಿಂದ ಓಡಿಸಿದ ಇತಿಹಾಸ ಗರ್ಭದಲ್ಲಿ ಹುದುಗಿದ್ದ ವಿಷಯವು ಬಾಬಾಸಾಹೇಬ ಅಂಬೇಡ್ಕರ್ ಅಧ್ಯಯನದಿಂದ ಗೊತ್ತಾಗಿ ಇಂದಿನ ದೇಶದ ಅಸ್ಪೃಶ್ಯ ಜನಾಂಗಗಳಲ್ಲಿ ಹೊಸ ಚಿಂತನೆಯೊಂದರ ಸಂಚಲನ ಉಂಟುಮಾಡಿದೆ. ಪ್ರತಿ ವರ್ಷವೂ ಜನವರಿ 01ರಂದು ದೇಶದ ಎಲ್ಲಾ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೀಮಾಕೊರೇಗಾಂವ್‌ಗೆ ಹೋಗಿ ವೀರಯೋಧರ ವಿಜಯ ಸ್ಥಂಭದ ಸ್ಮಾರಕಕ್ಕೆ ನಮನ ಸಲ್ಲಿಸಿ ಬರುತ್ತಿರುವ ಕೋಟ್ಯಾಂತರ ಜನತೆಯ ಭೆಟ್ಟಿಯು ಇತ್ತೀಚಿನ ದಿನಗಳಲ್ಲಿ ಮಹತ್ವ ಪಡೆದಿದೆ. ಸಮತಾ ಸೈನಿಕ ದಳವು ಕಳೆದ 30ವರ್ಷಗಳಿಂದ ಈ ವಿಜಯೋತ್ಸವದ ಪ್ರವಾಸದಲ್ಲಿ ಭಾಗಿಯಾಗಿ ಕಾರ್ಯ ಕರ್ತರಿಗೆ ಭೀಮಾಸ್ಫೂರ್ತಿಯನ್ನು ನೀಡುತ್ತಾ ಬಂದಿದೆ. 2017ರಲ್ಲಿ ಭೀಮ- ಕೊರೇಗಾಂವ್‌ನಲ್ಲಿ ನಡೆದ ಜಾತಿ ಗಲಭೆಯಿಂದ ರೋಚಕ ತಿರುವು ಪಡೆದುಕೊಂಡು ದಲಿತ ಜನಾಂಗಗಳ ಇತಿಹಾಸದ ಹೊಸ ಚರ್ಚೆಗಳನ್ನು ಹುಟ್ಟುಹಾಕಿದೆ. ಅಂದಿನಿಂದ ಸಮತಾ ಸೈನಿಕ ದಳವು ಪ್ರತಿ ಡಿಸೆಂಬರ 31ರ ರಾತ್ರಿ ದಲಿತ ಜನಾಂಗಗಳ ವಿರೋಚಿತ ಹೋರಾಟಗಳ ಮೆಲುಕುಹಾಕುವ ಸಿಂಹಾವಲೋಕನದ ಸಂವಾದದ ಸಭೆಯನ್ನು ನಡೆಸಿ ರಾತ್ರಿ 12 ಗಂಟೆಗೆ ವಿಜಯೋತ್ಸವಗಳಿಗೆಗೆ ಚಾಲನೆ ನೀಡುವ ಸಂಭ್ರಮಾಚರಣೆಯನ್ನು ಆಯೋಜಿಸುತ್ತಾ ಬಂದಿದೆ. ಇದೇ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ರಾತ್ರಿ 11.30ರವರೆಗೆ ಈ ಪೂರಕವಾಗಿ ಚರಿತ್ರೆಯ ಸಿಂಹಾವಲೋಕನದ ಚರ್ಚೆ ಸಂವಾದಗಳನ್ನು ನಡೆಸಿ ಮದ್ಯರಾತ್ರಿ 12ಗಂಟೆಗೆ ವೀರಯೋಧ ಸಿದ್ಧನಾಕನ ವೇಷಧಾರಿಗಳಿಂದ ಹೊನಲುಬೆಳಕಿನ ಯುದ್ಧ ಪ್ರದರ್ಶನದ ಸಾಮೂಹಿಕ ನೃತ್ಯದ ಹಾಡಿನೊಂದಿಗೆ ಜನವರಿ 1ರ ಭೀಮಾಕೋರೇಗಾಂವ್ ವಿಜಯೋತ್ಸವಕ್ಕೆ ಚಾಲನೆ ನೀಡಲಾಗುವುದು.

ಈ ಕಾರ್ಯಕ್ರಮವು ಎಸ್.ಎಸ್.ಡಿ.ಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿದೆ. ಸಂವಾದದ ವಿವಿಧ ಗೋಷ್ಠಿಗಳನ್ನು ಇತಿಹಾಸ ತಜ್ಞರಿಂದ, ಹಿರಿಯ ಹೋರಾಟಗಾರರಿಂದ ಮತ್ತು ಹಿರಿಯ ಅಧಿಕಾರಿ ವರ್ಗದಿಂದ ನಡೆಸಲಾಗುವುದು. ಪ್ರತಿ ಅಂಬೇಡ್ಕರ್ ಅಭಿಮಾನಿಯು ಡಿಸೆಂಬರ್ 13ರ ಸಂಜೆ 6ಗಂಟೆಗೆ ಬೆಂಗಳೂರಿನ ನಾಗಸೇನ ಬುದ್ಧ ವಿಹಾರದ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಸಂವಾದ ಮತ್ತು ರಾತ್ರಿ ನಡೆಯುವ ವಿಜಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕೆಂದು ಕೋರುತ್ತೇವೆ ಎಂದು ಸಮತಾ ಸೈನಿಕ ದಳ ವತಿಯಿಂದ ತಿಳಿಸಲಾಯಿತು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ  ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಸಂಚಾಲಕರಾದ ಅಂಬರೀಷ್. ದಿ. ಎಂ.,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಲಯನ್ ಮಂಜುನಾಥ್, ಯುವ ಘಟಕದ ರಾಜ್ಯಾಧ್ಯಕ್ಷರಾದ ಪ್ರಶಾಂತ್. ಜಿ.ಪಿ ಹಾಗೂ ಸಮತಾ ಸೈನಿಕ ದಳದ ಮುಖಂಡರುಗಳು ಉಪಸ್ಥಿತರಿದ್ದರು.

City Today News 9341997936

C.S. Shadakshari elected as the President of the Government Employees Association for the second time.

Bengaluru, Dec. 28: Incumbent President C.S. Shadakshari was re-elected in the elections held for the Karnataka State Government Employees Association on Friday.
Shadakshari received 507 votes and B.P. Krishnagowda received 442 votes. Shadakshari was elected as the President by a margin of 65 votes, while Shivarudraiah was elected as the Treasurer of the Association, announced Returning Officer A. Hanumanarasayya.

Later, C.S. Shadakshari, who won the election for the second time in a landslide and celebrated his victory with huge crowds, said that the election strategy followed by the opponents with the intention of defeating me, the power of money has reduced my margin of victory, and that in the coming days, our main objective is to implement the old retirement scheme of APS and OPS in the year 2025, as well as the health Sanjeevini scheme to benefit the families of the employees.

He said that the allegations made by the opponents that I did not win through any kind of electoral malpractice, that I won through fake voting, are far from the truth.

City Today News 9341997936

.