ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ದವಾದ ಅಧಿಕಾರವಿದೆ ಎಂದು ಆಗಸ್ಟ್ 01-2024 ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದೆ. ಮತ್ತು ಈ ತೀರ್ಪುನ್ನು ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕು-ಎಂ.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂಚಾಲಕರು

ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರ ಇದೆ ಮತ್ತು ಈ ಆದೇಶವನ್ನು ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ದಿನಾಂಕ 01.08.2024 ರಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದು ಕಳೆದ 30 ವರ್ಷಗಳಿಂದ ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಅಲ್ಲದೇ ಇದು ಮೀಸಲಾತಿ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಹೆಜ್ಜೆಯಾಗಿದೆ. ಈ ಹಿಂದೆ ಈ ವಿಚಾರದಲ್ಲಿ ಪರಸ್ಪರ ವಿರುದ್ಧವಾದ ತೀರ್ಪುಗಳನ್ನು ನ್ಯಾಯಾಲಯಗಳು ನೀಡಿದ್ದವು. ಈಗ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ಈ ವಿಚಾರದಲ್ಲಿದ್ದ ಗೊಂದಲವನ್ನು ಪರಿಹರಿಸಿದೆ. ಒಳಮೀಸಲಾತಿ ನೀಡಿಕೆಯು ಸಂವಿಧಾನ ಕಲ್ಪಿಸಿರುವ ಸಮಾನತೆಯ ಹಕ್ಕನ್ನು ಉಲ್ಲಂಘಿಸುವುದಿಲ್ಲ. ವಾಸ್ತವಿಕವಾಗಿ ಸಮಾನತೆಯನ್ನು ಹೆಚ್ಚಿಸಲು ಅಗತ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಬದಲಿಗೆ ವಾಸ್ತವಿಕವಾಗಿ ಸಮಾನತೆಯನ್ನು ಹೆಚ್ಚಿಸಲು ಅಗತ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಪರಿಶಿಷ್ಟ ಜಾತಿಯ ಸಮುದಾಯಗಳು ಸಮರೂಪದಲ್ಲಿ ಮತ್ತು ಅವುಗಳಿಗೆ ಅಗೋಚರವಾದ ಏಕರೂಪವೂ ಇಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ಜಾತಿಗಳ ಒಳಗೆ ಇರುವ ಕೆಲವು ಉಪ ಜಾತಿಗಳಿಗೆ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಇಂತಹ ಉಪಜಾತಿಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಹಿಂದುಳಿದಿರುವಿಕೆಯ ಆಧಾರದಲ್ಲಿ ಮೀಸಲಾತಿ ನೀಡಿದರೆ ಈ ತನಕ ಮೀಸಲಾತಿಯ ಲಾಭ ಪಡೆದುಕೊಳ್ಳಲು ಸಾಧ್ಯವಾಗದ ಸಮುದಾಯಗಳಿಗೆ ಕೂಡ ಪ್ರಯೋಜನ ದೊರೆಯಬಹುದು.

ಪಂಜಾಬ್, ಹರಿಯಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಂತಹ ರಾಜ್ಯಗಳು ಒಳಮೀಸಲಾತಿ ನೀಡಲು ಈ ಹಿಂದೆ ಪ್ರಯತ್ನಿಸಿದ್ದವು. ಆದರೆ ಈ ಪ್ರಯತ್ನಗಳಿಗೆ ನ್ಯಾಯಾಂಗವೇ ತಡೆಯೊಡ್ಡಿತ್ತು. ಒಳಮೀಸಲಾತಿ ಕಲ್ಪಿಸುವುದು ಬಹಳ ಸಾಧ್ಯವಾಗದ ಕೆಲಸ. ಹಾಗಾಗಿ ಈ ಕೆಲಸವನ್ನು ನ್ಯಾಯಯುತವಾಗಿ ಮಾಡಬೇಕು. ಒಳಮೀಸಲಾತಿ ನೀಡಿಕೆಯು ಯಾರದೋ ಇಷ್ಟಾನಿಷ್ಟಗಳನ್ನು ಅವಲಂಬಿಸದೆ, ಗಣನೀಯವಾದ ಮತ್ತು ಪ್ರಮಾಣೀಕರಿಸಬಹುದಾದ ದತ್ತಾಂಶಗಳ ಆಧಾರದಲ್ಲಿ ನಿರ್ಧಾರವಾಗಬೇಕು.

ಇದು ಬಹುದೊಡ್ಡ ಸವಾಲಿನ ಕೆಲಸ. ಪರಿಶಿಷ್ಟ ಜಾತಿಗಳಲ್ಲಿ ನೂರಾರು ಉಪಜಾತಿಗಳಿವೆ. ಒಪ್ಪಿತವಾದ ಮಾನದಂಡಗಳು ಮತ್ತು ವಿಧಾನಗಳ ಮೂಲಕ ತುಲನಾತ್ಮಕವಾಗಿ ಈ ಜಾತಿಗಳ ಹಿಂದುಳಿದಿರುವಿಕೆಯನ್ನು ನಿರ್ಣಯಿಸಬೇಕು.ಈ ಮಾನದಂಡಗಳು ಸರ್ಕಾರದಲ್ಲಿನ ಪ್ರಾತಿನಿಧ್ಯ ಮತ್ತು ಶಿಕ್ಷಣಕ್ಕೆ ಸೀಮಿತವಾಗಿರಬಾರದು.ಸಾಮಾಜಿಕ ಸ್ಥಾನಮಾನವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯವು ಹೇಳಿದೆ. ಒಳಮೀಸಲಾತಿ ನೀಡುವುದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗ್ರಹಿಸಿದ್ದರು. ಆದರೆ ಒಳಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂಕೋರ್ಟ್ ಈಗ ತೆರೆ ಎಳೆದಿದೆ. ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ಸದರಿ ಆದೇಶವನ್ನು ಅನುಷ್ಠಾನಗೊಳಿಸದೆ ನಿದ್ದೆ ಹೊಡೆಯುತ್ತಿದೆ. ಈ ನಿದ್ದೆ ಹೊಡೆಯುತ್ತಿರುವ ಸರ್ಕಾರವನ್ನು ಬಡಿದೆಬ್ಬಿಸಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಸುಪ್ರೀಂ ಕೋರ್ಟ್ ತೀರ್ಪು ಅನ್ವಯ ರಾಜ್ಯ ಸರ್ಕಾರ ತಕ್ಷಣವೇ ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಆಗ್ರಹಿಸಿ, ಹಾಗೂ ಈ ಕೆಳಕಂಡ ಹಕ್ಕೊತ್ತಾಯಗಳು ಈಡೇರಿಕೆಗಾಗಿ ಒತ್ತಾಯಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಸೆಪ್ಟೆಂಬರ್ 12, 2024ರ ಗುರುವಾರ, ಬೆಳಗ್ಗೆ 11-00 ಗಂಟೆಗೆ “ಬೃಹತ್ ತಮಟೆ ಚಳುವಳಿ” ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಈ ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಪರ ಇರುವ ದಲಿತ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು, ಬುದ್ದಿಜೀವಿಗಳು, ವಿದ್ಯಾರ್ಥಿಗಳು, ದಸಂಸ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ
ಬಂದು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಈ ಮೂಲಕ ರಾಜ್ಯ ಸಮಿತಿ ಕೋರುತ್ತದೆ.

ಹಕ್ಕೊತ್ತಾಯಗಳು

1) ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ದವಾದ ಅಧಿಕಾರವಿದೆ ಎಂದು ಆಗಸ್ಟ್ 01-2024 ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದೆ. ಮತ್ತು ಈ ತೀರ್ಪುನ್ನು ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕು.

2) ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನವಾದ ಜೂನ್ 09 ನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ಮತ್ತು ಪ್ರೊ.ಬಿ.ಕೃಷ್ಣಪ್ಪ ನವರಿಗೆ “ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಬೇಕು.

3) ಬಾಕಿ ಉಳಿದಿರುವ “ಬ್ಯಾಕ್ ಲಾಗ್” ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕು. ಒಳಮೀಸಲಾತಿ ಜಾರಿಯಾಗುವವರೆಗೂ ರಾಜ್ಯ ಸರ್ಕಾರದ ಎಲ್ಲಾ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕು.

4) ಬಗರ್ ಹುಕುಂ ಸಾಗುವಳಿ ಯನ್ನು ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು.

5) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು ಎಂದು ಪ್ರೊ. ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ವತಿಯಿಂದ ಸಮಿತಿಯ ಮುಖಂಡರುಗಳು ಜಂಟಿಯಾಗಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಪ್ರಕಟಣೆ ಮಾಡಿದರು.

City Today News 9341997936

‘ರಾಜ್ಯ ಒಕ್ಕಲಿಗರ ಸಂಘ’ದ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಎರಡೇ ತಿಂಗಳಲ್ಲಿ ಅವಿಶ್ವಾಸ ಮಂಡನೆ, ಗರಿಗೆದರಿದ ಕುದುರೆ ವ್ಯಾಪಾರ,ರೆಸಾರ್ಟ್ ರಾಜಕೀಯ! ಪಟ್ಟಭದ್ರ ಆಸ್ತಿ ಲೂಟಿಕೋರರು ಅವಿಶ್ವಾಸದ ಹಿಂದಿರುವ ಶಂಕೆ,ಸಮುದಾಯ ಎಚ್ಚೆತ್ತುಕೊಳ್ಳಲಿ, ಒಕ್ಕಲಿಗ ಜನಾಂಗದ ಮಾನ ಮೂರು ಕಾಸಿಗೆ ಹರಾಜಾಗುವ ಮುನ್ನ ಒಕ್ಕಲಿಗ ಸಮುದಾಯದ ಮಠಾಧೀಶರು, ಮುತ್ಸದ್ಧಿ ನಾಯಕರು ಬುದ್ದಿ ಹೇಳಲಿ.



118 ವರ್ಷಗಳ ಇತಿಹಾಸ ಇರುವ ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘ ಅನೇಕ ಮುತ್ಸದ್ದಿ ಮಹನೀಯರಿಂದ ಸಂಸ್ಥಾಪಿಸಲ್ಪಟ್ಟು ಬೆಳೆದದ್ದು, ನಂತರ ಕೆಲವು ಸ್ವಾರ್ಥ ಹಾಗು ದುರಾಸೆಯ ಲೂಟಿಕೋರರ ಕೈಗೆ ಸಿಲುಕಿ ನೌಕರರಿಗೆ ಸಂಬಳ ಕೊಡಲೂ ಪರದಾಡುವ ಸ್ಥಿತಿಗೆ ಬಂದದ್ದು ವಿಪರ್ಯಾಸ ಎನಿಸಿತ್ತು. ಇತ್ತೀಚೆಗಿನ ಕೆಲ ಉತ್ತಮ ಆಡಳಿತಗಾರರಿಂದ ಸಂಘದ ಸ್ಥಿತಿ ಸರಿ ಹೋಗುತ್ತಿದೆ ಎಂಬ ಅತಾವರಣ ಸೃಷ್ಟಿಯಾಗುತ್ತಿರುವಾಗ ಹೊಸ ಆಡಳಿತ ಮಂಡಳಿಯ ಭರವಸೆಯ ಹೆಜ್ಜೆಗಳು ಸಮುದಾಯಕ್ಕೆ ಒಳಿತು ಮಾಡಬಹುದು ಎನ್ನುವ ಹೊತ್ತಲ್ಲೇ ಪರವಾಗಿಲ್ಲ,ಉತ್ತಮರೆನಿಸಿಕೊಂಡಿದ್ದ ಕೆಲವು ನಿರ್ದೇಶಕರನ್ನು ಅಧಿಕಾರ, ಹಣದ ಆಮಿಷದ ಖೆಡ್ಡಾಕ್ಕೆ ಕೆಡವಿ, ಕೇವಲ ಎರಡೇ ತಿಂಗಳಲ್ಲಿ ಉತ್ತಮ ಆಡಳಿತದ ಭರವಸೆ ಮೂಡಿಸಿದ್ದ ಶಾಸಕ ಬಾಲಕೃಷ್ಣ ಅವರ ತಂಡದ ಕೆಲವರನ್ನೇ ಕುದುರೆ ವ್ಯಾಪಾರ ಮಾಡಿ ಕೆಳಗಿಳಿಸಲು ಅವಿಶ್ವಾಸ ಮಂಡಿಸುತ್ತಿರುವುದು ಸಮುದಾಯವನ್ನು ಆತಂಕಕ್ಕೆ ದೂಡಿದೆ. ಹಾಗು ಇದರ ಹಿಂದೆ ಸಚ್ಚೇಪಾಳ್ಯ ಜಮೀನು ಲೂಟಿಕೋರ ಖಾಸಗೀ ಬಿಲ್ಡರ್ ಗಳ ಲಾಭಿ ಇರುವ ಶಂಕೆ ವ್ಯಕ್ತವಾಗುತ್ತಿದೆ.ಆದ್ದರಿಂದ ಇದನ್ನೆಲ್ಲಾ ಮೂಕ ಪ್ರೇಕ್ಷಕರಾಗಿ ಸುಮ್ಮನೆ ನೋಡುತ್ತಾ ಕೂರದೆ, 5 ಲಕ್ಷಕ್ಕೂ ಮಿಗಿಲಾದ ಅಜೀವ ಸದಸ್ಯರು ಜಾಗೃತರಾಗಿ ಎಚ್ಚೆತ್ತು ಪ್ರಶ್ನಿಸಬೇಕಿದೆ.

ಕೇವಲ ಎರಡು ತಿಂಗಳಲ್ಲೇ ನಮಗೆ ಎಂಥಾ ಭರವಸೆ ಮೂಡಿಸಿತ್ತು ಪ್ರಸ್ತುತ ಇರುವ ಸಮಿತಿ, ಅದರಲ್ಲಿ ನೀವು ಯಾವ ತಪ್ಪನ್ನು ಕಂಡಿರಿ !? ಸಂಘದಲ್ಲಿ ನಡೆದಿರುವ ಮೂರ್ನಾಲ್ಕು ತಾತ್ಕಾಲಿಕ ಕಾರ್ಯಕಾರೀ ಸಮಿತಿ ಸಭೆಗಳಲ್ಲಿ ಚರ್ಚೆಯನ್ನೇ ಮಾಡದೆ ಅಧಿಕಾರ ಲಾಲಸೆಗೆ ಈ ರೀತಿ ವಾಮಮಾರ್ಗ ಹಿಡಿಯುತ್ತಾ,ನಿರ್ದೇಶಕರ ಹೈಜಾಕ್ ಮಾಡಿ, ರೆಸಾರ್ಟ್ ಗೆ ಕರೆದೊಯ್ದು ಕುದುರೆ ವ್ಯಾಪಾರ ಮಾಡುತ್ತಿರುವುದರ ಹಿಂದಿನ ಮರ್ಮವೇನು!? ಇದರ ಹಿಂದೆ ಇರುವ ಲೂಟಿಕೋರ ಲಾಭಿಗೆ ಮಣಿದು, ಸಂಘದ ಹಿತಾಸಕ್ತಿ ಬಲಿಗೊಡುವುದು ಯಾವ ನ್ಯಾಯ..!? ಒಕ್ಕಲಿಗ ಸಂಘದ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರತಿಷ್ಠಿತ ಘನತೆಗೆ ಕುಂದು ಉಂಟಾಗುವುದು ನಿಮಗೆ ಅರಿವಲ್ಲವೇ.!?

ಸಾಕುಮಾಡಿ ಈ ಹುಚ್ಚಾಟವಾ.!?

ಕೇವಲ ಎರಡು ತಿಂಗಳ ಚಿಕ್ಕ ಅವಧಿಯಲ್ಲಿನ ನೂತನ ಸಮಿತಿಯ ಉತ್ತಮ ಆಡಳಿತವ ಏಕೆ ಸಹಿಸಿಕೊಳ್ಳಲಾಗುತ್ತಿಲ್ಲ..!?

* ಪ್ರಸ್ತುತ ಇರುವ ಬಿ.ಐ.ಟಿ. ಜೊತೆಗೆ ಕೆಂಗೇರಿ ಹಾಗು ಶ್ರೀ ಗಂಧದಕಾವಲಿನಲ್ಲಿ ಮತ್ತೆರಡು ಇಂಜಿನಿಯರಿಂಗ್ ಕಾಲೇಜು ಆರಂಭಿಸಲು ತೆಗೆದುಕೊಂಡಿದ್ದ ನಿರ್ಣಯ ಖುಷಿಯ ವಿಚಾರ ಅಲ್ಲವೇ!?

* ನಾವು ಹೋರಾಟ ಮಾಡಿದ್ದ ಸಂಘದಿಂದ ಕೈಬಿಟ್ಟು ಹೋಗಿದ್ದ ಶ್ರೀ ಗಂಧದ ಕಾವಲಿನ 10 ಎಕರೆ ಭೂಮಿಯನ್ನು ಸರ್ಕಾರದೊಂದಿಗಿನ ಸಮನ್ವಯತೆಯಿಂದ ಸಂಘದ ಹೆಸರಿಗೆ ‘ಪಹಣಿ ‘ ತಂದಂತಹ ಕ್ರಮ ಷಹಬ್ಬಾಸ್ ಎನ್ನುವಂತದ್ದಲ್ಲವೇ..!?

* ಸಂಘದ ‘ಕೆಂಪೇಗೌಡ ಆಸ್ಪತ್ರೆ’ಯಲ್ಲಿ ಉಚಿತ ಹೆರಿಗೆ ಸೌಲಭ್ಯ ನೀಡಿ ಜನಾನುರಾಗಿತ್ವ ಗಳಿಸಿ, ಆಸ್ಪತ್ರೆ ಸುಸಜ್ಜಿತ ಉತ್ತಮ ದರ್ಜೆಗೇರುತ್ತಿರುವುದನ್ನು ಇಡೀ ಸಮುದಾಯ ಪ್ರಶಂಸಿಸಿ ಎಮ್ಮೆ ಪಡುತ್ತಿದೆ, ಆದರೆ ನೀವು ಇಂತಹ ಆಡಳಿತ ಕೆಡವಲೊರಟಿದ್ದೀರಿ ಇದು ಸರಿಯೇ..!?

* ಕಳೆದ 9 ವರ್ಷಗಳಿಂದ ನಡೆಸದೇ ಇದ್ದ ಸಂಘದ ಸಾಮಾನ್ಯ ಸಭೆ (general body )ಯನ್ನು ಸೆ.29ಕ್ಕೆ ನಿಗದಿಗೊಳಿಸಿ, ಉತ್ತಮ

ವಿಚಾರಗಳ ಚರ್ಚೆಗೆ ಅನುವು ಮಾಡಿಕೊಟ್ಟ ಕ್ರಮ ನಿಮಗೆ ಸರಿ ಎನಿಸಿಲ್ಲವೇ…!? * ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ‘ಪ್ರತಿಭಾ ಪುರಸ್ಕಾರ ‘ ಕಾರ್ಯಕ್ರಮ ರೂಪಿಸಿದ್ದು ನಿಮಗೆ ಯಾಕೆ ಸರಿ ಎನಿಸುತ್ತಿಲ್ಲ!?

* ಕೇವಲ ಎರಡೇ ತಿಂಗಳಲ್ಲಿನ ಅವಧಿಯಲ್ಲಿ ದೆಹಲಿಗೆ ಓಡಾಡಿ ಪ್ರತಿಷ್ಠಿತ’ ಕೆಂಪೇಗೌಡ ಮೆಡಿಕಲ್ ಕಾಲೇಜಿಗೆ’ 180ಮೆಡಿಕಲ್ ಸೀಟುಗಳು ಹಾಗು 68 ಪಿ.ಜಿ.ಸೀಟುಗಳನ್ನು ಹೆಚ್ಚಿಸಲು ಬಾಲಕೃಷ್ಣ ನೇತೃತ್ವದ ತಂಡ ಕೈಗೊಂಡ ಕ್ರಮ ನಿಮಗೆ ಸಹ್ಯವಾಗಲಿಲ್ಲವೇ..!?

* ಎಲ್ಲಾ ಜಿಲ್ಲೆಗಳಲ್ಲೂ ಸಂಘದ ಶಿಕ್ಷಣ ಹಾಗು ಆರೋಗ್ಯ ಸೇವೆ ವಿಸ್ತರಿಸಲು ಸಂಸ್ಥೆಗಳ ಸ್ಥಾಪನೆಗೆ ಆಯಾ ಜಿಲ್ಲೆಗಳಲ್ಲೇ ಸಂಘಕ್ಕೆ ಆಸ್ತಿ ಕೊಳ್ಳಲು ತೆಗೆದುಕೊಂಡ ತೀರ್ಮಾನ ನಿಮಗೆ ಸರಿ ಎನಿಸಲಿಲ್ಲವೇ!? ಈ ಹಿಂದಿನ ಕೆಲವು ಖದೀಮರಂತೆ ಅವರವರ ಸ್ವಂತ ಹೆಸರಿಗೆ

ಮಾಡಿಸಿಕೊಳ್ಳಬೇಕಿತ್ತೇ..!? వారు భూరg. 94 ఈ శుదురి వరద రుద రంజి ఇద్దు. ఇదు విందనాయ..

ಒಂದು ಆಡಳಿತ ಸಮಿತಿ ಅಸ್ತಿತ್ವಕ್ಕೆ ಬಂದು ಕನಿಷ್ಠ ಒಂದು ವರ್ಷ ಅಥವಾ 6 ತಿಂಗಳಾದರೂ ಆಡಳಿತ ನಡೆಸಲೂ ಬಿಡದೆ, ಯಾವ ತಪೂ ಇರದ, ಅಂತಹ ತಪ್ಪೇನಾದರೂ ಆಗಿದ್ದರೆ ಕಾರ್ಯಕಾರೀ ಸಮಿತಿಯಲ್ಲಿ ಚರ್ಚಿಸದೆ, ಕೇವಲ ಅಧಿಕಾರ ಲಾಲಸೆ ಹಾಗು ಸಂಘದ ಆಸ್ತಿ ನುಂಗುವ ದುಷ್ಟ ಶಕ್ತಿಗಳ ಜೊತೆ ಕೈಜೋಡಿಸಿ ಈ ರೀತಿಯ ದುಸ್ಸಾಹಸಕ್ಕೆ ಕೈ ಹಾಕಿದ್ದೀರೆಂಬ ಆರೋಪಗಳಿಗೆ ಉತ್ತರ ಕೊಡದೆ ಪಲಾಯನ ಮಾಡಿ ರೆಸಾರ್ಟ್ ನಲ್ಲಿ ಕುಳಿತು ನೀವು ನಡೆಸುತ್ತಿರುವ ಕೃತ್ಯದಿಂದ ಇಡೀ ಒಕ್ಕಲಿಗ ಸಮುದಾಯ ತಲೆತಗ್ಗಿಸಬೇಕಿದೆ.ಇಡೀ ಜನಾಂಗದ ಮಾನ-ಮರ್ಯಾದೆ ಹಾದಿ ಬೀದಿಯಲ್ಲಿ ಹರಾಜು ಹಾಕುವ ಈ ಸ್ವಾರ್ಥದಿಂದ ಒಕ್ಕಲಿಗ ಜನಾಂಗ ತಲೆತಗ್ಗಿಸಬೇಕಾಗಿದೆ, ಆದ್ದರಿಂದ ಒಕ್ಕಲಿಗ ಸಮುದಾಯದ ಶ್ರೀ ಗುರುಗಳು, ಎಲ್ಲ ಪಕ್ಷಗಳ ಮುತ್ಸದ್ದಿ ಮುಖಂಡರು ಕೂಡಲೇ ಇಂತಹವರನ್ನ ಕರೆದು ಬುದ್ದಿ ಹೇಳುವ ಮೂಲಕ ಸಮುದಾಯದ ಹಾಗು ಸಂಘದ ಗೌರವ ಕಾಪಾಡಬೇಕಾಗಿ ಸಮುದಾಯದ ಕಾಳಜಿಯಿಂದ ನಿರಂತರವಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು ಈ ಪತ್ರಿಕಾಗೋಷ್ಠಿಯ ಮೂಲಕ ಮನವಿ ಮಾಡುತ್ತಾ ಸಂಘದ 5 ಲಕ್ಷಕ್ಕೂ ಮೀರಿದ ಅಜೀವ ಸದಸ್ಯರು ಚುನಾವಣೆ ಬಂದಾಗ ಮಾತ್ರ ಕೇವಲ ಮತ ಹಾಕಿ ಸುಮ್ಮನಾಗದೆ, ಮಾತೃಸಂಸ್ಥೆ ಉಳಿವಿಗಾಗಿ ಇಂತಹ ಸಂದರ್ಭದಲ್ಲಿ ಎಚ್ಚೆತ್ತು ಹೋರಾಟಕ್ಕಿಳಿದು, ಸಮುದಾಯದ ಸೇವೆ ಮಾಡಲು ಆರಿಸಿರುವ ನಿರ್ದೇಶಕರು ಸ್ವಾರ್ಥಿಗಳಾಗಲೊರಟಾಗ ಬುದ್ದಿ ಹೇಳುವ ಕೆಲಸವನ್ನೂ ಮಾಡುವಂತವರಾಗಬೇಕೆಂದು ಆಗ ಮಾತ್ರ ಮಾತೃಸಂಸ್ಥೆ’ ರಾಜ್ಯ ಒಕ್ಕಲಿಗರ ಸಂಘ’ ಉಳಿಯುತ್ತದೆಂದು ಈ ಪತ್ರಿಕಾಗೋಷ್ಠಿ ಯ ಮೂಲಕ ಮನವಿ ಮಾಡುತ್ತಿದ್ದೇವೆ ಎಂದು ಕೆ.ಎನ್.ಲಿಂಗೇಗೌಡ-ಪ್ರಧಾನ ಸಂಚಾಲಕರು, ಸಂಘದ ಮುಖಂಡರುಗಳಾದ A. S. ಗೋವಿಂದೇಗೌಡ ಹಾಗೂ R. G. S. ಗೌಡ ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

City Today News 9341997936

ಜಯನಗರ ಶ್ರೀ ಗುರುರಾಯರ ಮಠದಿಂದ “ಮಂತ್ರಾಲಯ ಯಾತ್ರೆ-ಭಕ್ತರಿಗೆ ಶ್ರೀಗಳಿಂದ ಅನುಗ್ರಹ ಸಂದೇಶ ಮತ್ತು ಫಲ ಮಂತ್ರಾಕ್ಷತೆ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಆರಾಧನೆಗೆ ವಿಶೇಷ ಸೇವೆ ಸಲ್ಲಿಸಿದ ಭಕ್ತಾದಿಗಳಿಗೆ  ಮಂತ್ರಾಲಯ ಕ್ಷೇತ್ರ ರಾಯರ ಸನ್ನಿಧಿಗೆ ಪ್ರಯಾಣವನ್ನು ಬೆಳೆಸಿ ದೇವಿ ಮಂಚಾಲಮ್ಮನ ದರ್ಶನ, ಶ್ರೀ ಗುರುರಾಯರ ದರ್ಶನ, ಶ್ರೀ ಮೂಲ ರಾಮದೇವರ ಪೂಜೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ, ನಂತರ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹ ಸಂದೇಶದೊಂದಿಗೆ  ಭಕ್ತರು ಫಲ ಮಂತ್ರಾಕ್ಷತೆ  ಸ್ವೀಕರಿಸಿ ಸಂಜೆ ಮಹಾ ರಥೋತ್ಸವದಲ್ಲಿ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು. ಭಕ್ತರಿಗೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಶ್ರೀಮಠದ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರಾಚಾರ್ಯರ, ಶ್ರೀ ನಂದಕಿಶೋರಾಚಾರ್ಯರ ನೇತೃತ್ವದಲ್ಲಿ ಸಿಬ್ಬಂದಿಗಳ ಸಹಕಾರದೊಂದಿಗೆ ನೆರವೇರಿತು.

City Today News 9341997936

Meditation is the way for inner transformation, brings positive changes; resolution passed during 3rd Regional Conference of Meditation Leaders @ IIM Bangalore

Bangalore, 1st September , 2024: The 3rd Regional Conference of Meditation Leaders was held successfully yesterday at IIM Bangalore and was jointly hosted by Buddha CEO Quantum Foundation and Pyramid Valley International. The objective of the conference was to create awareness about how meditation brings about transformation in individuals for a positive social change with thorough scientific understanding and plenty of case studies.

Prof. U Dinesh Kumar, dean of IIM Bangalore spoke about the importance of realising that meditation, inner strength and happiness can easily be attained through practise while we continue with our daily lives. We need not leave everything like Buddha did, and instead we need to find ways to build our inner strength here and now to help us face all the new challenges around us like war, mental health problems etc.

Padmashri D R Kaarthikeyan, former Director CBI and CRPF (GoI) began the day with a wonderful and inspiring speech about Shri Narendra Modi and his discipline towards his duty and yoga practice. He said “leaders who practice meditation are able to listen to their conscience, take inner guidance, and build the strength to follow through on it while making decisions. We request the active support of global and government bodies in spreading awareness about meditation for greater well-being and positive social change.” He encouraged everyone to internalize meditation practice and to remember that what lies within is most important and we must be true to it, no matter what we do.

The panel on holistic excellence addressed issues like mental and physical health, conflict resolution and all-round development.

Laurence Guihard-Joly, former IBM general manager and co-founder of Buddha CEO Quantum Foundation gave a power talk on how meditation brings about organisational excellence. She mentioned a few important changes that meditation brings about that help us in our daily professional life –  better emotional intelligence, moving from fixed mindset to growth mindset, and getting rid of unconscious biases and moving towards being more inclusive and diverse in all ways in order to bring about more holistic and unique perspectives and ideas to help the organisation grow.

Chandra Pulamarasetti, co-founder of Buddha CEO Quantum Foundation spoke about his extensive meditation practice and all the marvelous manifestations and miracles he has experienced over the years. He gave a short talk on the art and science of meditation covering topics like subconscious and conscious minds, brain wave states and provided many statistics about the impact of meditation on stress and mental health levels.

The panel discussion on meditation in youth was a fun and engaging session with the panelists sharing their experiences about how meditation helped them through their challenges in school, college and work. They spoke about spiritual parenting, and building confidence and clarity.

The panel on organizational excellence brought out that meditation helps open doors, builds resilience, helps leaders know themselves more and hence allows them to change behavioural patterns. It brings more clarity and vision to leaders in policy-making roles.

Justice Gopal Gowda stated that the best solution for the challenges faced by the world over is meditation and Prof. Malla Bhaskar Rao, Neuro Surgeon from NIMHANS spoke about the several research at NIMHANS that is showcasing Meditation is a good solution for many challenges.

During the closing ceremony, the entire conference passed a resolution together, led by Dr D R Kaarthikeyan sir about our role and duty towards spreading meditation to people all over the world, which is the need of the hour, as more and more negativity and hatred grows around the world because of the growing negativities in the minds of people. It is of utmost importance for everyone in the world to transform internally so that our world will transform into something bigger and more beautiful.

The “Buddha-CEO Quantum Foundation” is a non-profit and non-religious
organization which provides transformative meditation wisdom and techniques in
a compassionate and friendly environment. Through various programs – online and
on site – and content, we empower leaders to grow their organizations with a higher
sense of purpose, towards their employees, communities and the larger society,
thereby contributing to world harmony and individual fulfillment. We also assist
the transformed leaders to integrate meditation practices in their organizations
and in the communities, they serve.

Pyramid Valley International is an international meditation centre housing the Maitreya Buddha Pyramid set up by the Pyramid Spiritual Societies Movement (PSSM). PVI organizes
customized training sessions, workshops and conferences on meditation and
spiritual science. World renowned spiritual masters, conduct stillness retreats,
master classes and talks. The events are organized in modern training rooms and
conference halls with audio and video facilities.

City Today News 9341997936

ಸುಪ್ರೀಂ ಕೋರ್ಟ್ ತೀರ್ಪಿನಂತೆ ಹರಿಶಿಷ್ಟ ಜಾತಿ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ

ಪರಿಶಿಷ್ಟ ಜಾತಿಗಳ ಮೀಸಲಾತಿಯು 101 ಪರಿಶಿಷ್ಟ ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆದ್ದರಿಂದ ಪರಿಶಿಷ್ಟ ಮೀಸಲಾತಿಯನ್ನು 4 ಗುಂಪುಗಳನ್ನಾಗಿ ವರ್ಗೀಕರಣ ಮಾಡಲು ಒತ್ತಾಯಿಸಿ 3 ದಶಕಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಚಳುವಳಿ ಮಾಡಿದ ಹಲವರು ಜೀವ, ಜೀವನ ಮತ್ತು ಬದುಕನ್ನೇ ಬಲಿಕೊಟ್ಟು ಬಸವಳಿದಿದ್ದಾರೆ.

ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಿಸಿ ಒಳಮೀಸಲಾತಿ ಕಲ್ಪಿಸಲು ಒತ್ತಾಯಿಸಿ ನಡೆಸಿದ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ 2004ರಲ್ಲಿ ನಿ. ನ್ಯಾ ಎ.ಜೆ. ಸದಾಶಿವ ಆಯೋಗ ರಚಿಸಿತು. ಆಯೋಗ ಸರ್ಕಾರಕ್ಕೆ ದಿನಾಂಕ 14-06-2012ರಂದು ವರದಿ ಸಲ್ಲಿಸಿತು. ಹಿಂದಿನ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರ್ಕಾರದ “ಸಚಿವ ಸಂಪುಟ”ವು ನಿವೃತ್ತ ನ್ಯಾ. ಸದಾಶಿವರವರ ವರದಿಯಲ್ಲಿನ ದತ್ತಾಂಶದ ಪ್ಯಾರ-1ನ್ನು ಅಂಗೀಕರಿಸಿ ದಿನಾಂಕ 31-03-2023ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತು. ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಸಹ ಪರಿಶಿಷ್ಠರ ಮೀಸಲಾತಿ ವರ್ಗೀಕರಣ ಮಾಡುವ ನಿರ್ಣಯವನ್ನು “ಸಚಿವ ಸಂಪುಟ ದಲ್ಲಿ ಅನುಮೋದಿಸಿ ದಿನಾಂಕ 17-03-2024ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತು.

ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್‌ಗಡ, ಜಾರ್ಖಂಡ್, ಹರಿಯಾಣ, ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಹಲವಾರು ದಶಕಗಳಿಂದ ಹೋರಾಟ ನಡೆಯುತ್ತಿದೆ.

ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು :- ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕಾಗಿ ವಿವಿಧ ರಾಜ್ಯಗಳ ಆಯೋಗಗಳ

ವರದಿಗಳು ಮತ್ತು ಕೋರ್ಟ್‌ಗಳ ಹಲವು ತೀರ್ಪುಗಳನ್ನು ಪರಮಾರ್ಶಿಸಿದ ಸುಪ್ರೀಂಕೋರ್ಟ್‌ನ 7 ನ್ಯಾಯಾಧೀಶರ ಸಂವಿಧಾನ ಪೀಠ ದಿನಾಂಕ : 01-08-2024ರಂದು “ಐತಿಹಾಸಿಕ ತೀರ್ಪು’ ನೀಡಿತು. ಈ ತೀರ್ಪಿನಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವ ಸಂವಿಧಾನಬದ್ಧ ಅಧಿಕಾರ ರಾಜ್ಯ ಸರ್ಕಾರಗಳಿಗಿದೆ ಎಂದು ತೀಪು ನೀಡಿದೆ

ಕೆನೆಪದರ :- ಮೂಲ ಸಂವಿಧಾನದ ಅನುಚ್ಛೇದ 15(4) ಮತ್ತು 16 (4)ರಂತೆ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಿದ ಮೀಸಲಾತಿಯು ಮೂಲಭೂತ ಹಕ್ಕಾಗಿದ್ದು ಕೆನೆ ಪದರಕ್ಕೆ ಅವಕಾಶವೇ ಇಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠ 1992ರಲ್ಲಿ ಇಂದ್ರಸಾಕ್ಷಿ ಕೇಸ್‌ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಸಂವಿಧಾನದ ವಿಧಿ 15(4) ಮತ್ತು 16 (16) “ಸಮಕಾಲೀನ ಪಟ್ಟಿ” (Concurrent List of Subject) ಆಗಿದೆ. ಹಾಗಾಗಿ ಕೇಂದ್ರ ಸರ್ಕಾರ ಅಳವಡಿಸಿಕೊಂಡ ನೀತಿಯನ್ನೇ ರಾಜ್ಯಗಳು ಅನುಸರಿಸಬೇಕು. ಈಗಾಗಲೇ ಸುಪ್ರೀಂಕೋರ್ಟಿನ ಆದೇಶವನ್ನು ಸ್ವಾಗತಿಸಿರುವ ಕೇಂದ್ರ “ಸಚಿವ ಸಂಪುಟ” ಪ.ಜಾ / ಪ. ವರ್ಗಗಳಿಗೆ ಕೆನೆಪದರ ಮೀಸಲಾತಿ ಅಳವಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರ ಮತ್ತಷ್ಟು ವಿಳಂಬ ಧೋರಣೆ ಮಾಡಿ ಮೀನಾಮೇಷ ಎಣಿಸದೆ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಹಾಗೂ ಸಂವಿಧಾನಕ್ಕೆ ಗೌರವ ನೀಡಿ ಈ ಕೂಡಲೇ ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡಲು ದ.ಸಂ.ಸ. ಆಗ್ರಹಿಸಿದೆ.

-: ಹಕ್ಕೋತ್ತಾಯಗಳು :-

+ ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ತೀರ್ಪಿನಂತೆ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತರಲಿ.

+ 2023-2024 ಮತ್ತು 2024-2025ನೇ ಸಾಲಿನಲ್ಲಿ 25,391 ಕೋಟಿ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ

ಎಸ್‌ಸಿಪಿ/ಬಿಎಸ್‌ಪಿ ಅಭಿವೃದ್ಧಿಯ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಈ ಹಣವನ್ನು ಈ ಸಮಾಜದ

ಅಭಿವೃದ್ಧಿಗೆ ವಾಪಸ್ ನೀಡಲೇಬೇಕು. + ಪ.ಜಾತಿ / ಪ. ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸರಿಯಾಗಿ ನೀಡುತ್ತಿಲ್ಲ ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಮತ್ತು ವಿದೇಶದಲ್ಲಿ ಎಸ್.ಸಿ/ಎಸ್.ಟಿ. ವ್ಯಾಸಂಗ ಮಾಡಲು ಇದ್ದ ಪ್ರಬುದ್ಧ ಯೋಜನೆ ರದ್ದು ಮಾಡಲಾಗಿದೆ. ಪುನಃರಾರಂಭಿಸಲಿ.

+ ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ ಜಾರಿಯಾಗುವವರೆಗೂ ಕೇಂದ್ರ ಮತ್ತು ರಾಜ್ಯದ ಎಲ್ಲಾ ಉದ್ಯೋಗ ನೇಮಕಾತಿಗಳನ್ನು ಸ್ಥಗಿತಗೊಳಿಸಲಿ.

+ ಪಾಸಗಿ ಉದ್ಯೋಗ ಕ್ಷೇತ್ರ ಮತ್ತು ಗುತ್ತಿಗೆ ನೇಮಕಾತಿಗಳಲ್ಲಿಯೂ ಎಸ್.ಸಿ/ಎಸ್.ಟಿ ಮೀಸಲಾತಿ ಜಾರಿಯಾಗಲಿ.

+ ಕೇಂದ್ರ ಸರ್ಕಾರ ಕೂಡಲೇ ಎಸ್.ಸಿ/ಎಸ್.ಟಿ ಅಭಿವೃದ್ಧಿಗಾಗಿ ಎಸ್ ಸಿಪಿ/ಬಿಎಸ್ಪಿ ಕಾಯ್ದೆ ರಚಿಸಿ ಜನಸಂಖ್ಯೆಗನುಗುಣವಾಗಿ ಐಜೆಟ್‌ನಲ್ಲಿ ಹಣ ನೀಡಬೇಕು ಎಂದು ದಾದಾ ಸಾಹೇಬ್ ಡಾ॥ ಎನ್. ಮೂರ್ತಿ ದ.ಸಂ.ಸ ರಾಜ್ಯಾಧ್ಯಕ್ಷರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಆಗ್ರಹಿಸಿದರು.