ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ನರ್ತನ ಸೇವೆ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 3, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ 5000 ಭಕ್ತಾದಿಗಳಿಗೆ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನರ್ತನ ಕೀರ್ತನ ಸಂಸ್ಥೆಯ ಗುರು ವಿದುಷಿ ಶ್ರೀಮತಿ ಸೌಂದರ್ಯ ಶ್ರೀವತ್ಸ ಮತ್ತು ಅವರ ವಿದ್ಯಾರ್ಥಿಗಳಿಂದ ನರ್ತನ ಸೇವೆಗಳು ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ

City Today News 9341997936

ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ನರ್ತನ ಸೇವೆ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜನವರಿ 11, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಹೃದ್ಯಾ ಅಕಾಡೆಮಿಯ ವಿದುಷಿ ಶ್ರೀಮತಿ ರೂಪಶ್ರೀ ಮತ್ತು ಅವರ ವಿದ್ಯಾರ್ಥಿಗಳಿಂದ ನರ್ತನ ಸೇವೆಗಳು ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ,

ವಿಶೇಷವಾಗಿ ಚಿಕ್ಕ ಚಿಕ್ಕ ಪುಟ್ಟ ಮಕ್ಕಳಿಂದಲೂ “ಭರತನಾಟ್ಯ” ಸೇವೆ ನಡೆಯಿತು ಈ ಸೇವೆಯಲ್ಲಿ ಸುಮಾರು 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು “ನೃತ್ಯ” ಪ್ರದರ್ಶನ ನೀಡಿದರು, ಭಕ್ತರು ಚಪ್ಪಾಳೆ ತಟ್ಟುವ ಮೂಲಕ ಕಲಾವಿದರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು, ಈ ಸಂದರ್ಭದಲ್ಲಿ ಭಕ್ತಾದಿಗಳು ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936