
ಕನ್ನಡ ಕರಾವಳಿ ವೇದಿಕೆ 1997ರಲ್ಲಿ ಸ್ಥಾಪನೆಯಾಗಿ ಇದೀಗ ರಜತ ಮಹೋತ್ಸವದ ಸಂಭ್ರಮಕ್ಕೆ ಮುನ್ನಡೆಯುತ್ತಿದೆ ಕರಾವಳಿಯ ವಿಶಿಷ್ಟ ಕಲೆ ಸಾಹಿತ್ಯ ಸಂಸ್ಕೃತಿಗಳ ಜೊತೆಗೆ ಕನ್ನಡದ ಸೊಗಡನ್ನು ಉಳಿಸಿ ಬೆಳೆಸಿ ಪ್ರೋತ್ಸಾಹಿಸುವ ಗುರಿಯೊಂದಿಗೆ ಸಾಮಾಜಿಕ ಶೈಕ್ಷಣಿಕ ಬೆಳವಣಿಗೆಯ ಹೊಣೆಗಾರಿಕೆಯೊಂದಿಗೆ ಮುನ್ನಡೆಯುತ್ತಿದೆ. ಈ ಪ್ರಯುಕ್ತ ದಿನಾಂಕ 14.07.2024ರ ಭಾನುವಾರ ದಂದು ವಿಜಯನಗರದ ಬಂಟರ ಸಂಘದಲ್ಲಿ “ರಜಿತ ಮಹೋತ್ಸವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9:00 ಗಂಟೆಯಿಂದ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಗೋವಿಂದರಾಜ ನಗರ ಶಾಸಕ ಶ್ರೀ ಪ್ರಿಯ ಕೃಷ್ಣ ರವರು ಉದ್ಘಾಟಿಸಲಿದ್ದಾರೆ ಮಧ್ಯಾಹ್ನ ಒಂದು ಗಂಟೆಯಿಂದ ಜಾನಪದ ನೃತ್ಯ, ಗಂಗಾವತಿ ಪ್ರಾಣೇಶ್,ಬಸವರಾಜ್ ಮಹಾಮನಿ ಹಾಗೂ ಡಾಕ್ಟರ್ ಕೆಪಿ ಪುತ್ತೂರಾಯರಿಂದ ಹಾಸ್ಯಕಾರ್ಯಕ್ರಮಗಳು, ಫ್ಯಾಶನ್ ಶೋ ಮತ್ತು ಯಕ್ಷಗಾನ ಕಾರ್ಯಕ್ರಮಗಳಿರುತ್ತವೆ.

ಸಂಜೆ 4:30 ಗಂಟೆಗೆ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಶ್ರೀ ಯುಟಿ ಖಾದರ್ ಅವರಿಂದ ಕರಾವಳಿ ಸಿರಿ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದಾರೆ ಹಾಗೂ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಡಿ ವಿ ಸದಾನಂದ ಗೌಡ, ಕುಮಾರಿ ಶೋಭಾ ಕರಂದ್ಲಾಜೆ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವರು, ಭಾರತ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ಶಿವರಾಜ ತಂಗಡಗಿ, ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರ ಉಪಸ್ಥಿತಿಯಲ್ಲಿ, ಮಾಜಿ ಲೋಕಾಯುಕ್ತ ಜಸ್ಟಿಸ್ ಶ್ರೀ ಎನ್ ಸಂತೋಷ್ ಹೆಗ್ಡೆ ಅವರು ಸ್ಮರಣ ಸಂಚಿಕೆ “ರಜತ ಸಿರಿ” ಬಿಡುಗಡೆ ಮಾಡಲಿದ್ದಾರೆ.
“ಕರಾವಳಿ ಸಿರಿ” ಪ್ರಶಸ್ತಿ ಪ್ರಧಾನವನ್ನು ಮಾಜಿ ಮುಖ್ಯಮಂತ್ರಿ ಶ್ರೀ ಡಾ. ಎಂ ವೀರಪ್ಪಮೊಯಿಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಬಿ ಎಂ ಫಾರೂಕ್ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ಶ್ರೀ ದೇವೇಂದ್ರ ಹೆಗಡೆ ಕೊಕ್ರಾಡಿಯವರಿಗೆ ನೀಡಲಾಗುವುದು ಎಂದು ಫಣಿರಾಜ್ಜನ್,ಗೌರವಕಾರ್ಯದರ್ಶಿ ಕನ್ನಡ ಕರಾವಳಿ ವೇದಿಕೆ ಬೆಂಗಳೂರು ರವರು ವೇದಿಕೆಯ ವತಿಯಿಂದ ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ತಿಳಿಸಿದರು.
City Today News 9341997936

You must be logged in to post a comment.