
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಅಧಿಕ ಮಾಸ ಪೌರ್ಣಿಮೆ ಪ್ರಯುಕ್ತ ಪರಮ ಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದಿಂದ್ರ ಆಚಾರ್ಯರ ನೇತೃತ್ವದಲ್ಲಿ ಪುರೋಹಿತರಾದ ಶ್ರೀ ನಂದ ಕಿಶೋರ್ ಆಚಾರ್ ಹಾಗೂ ಕಟ್ಟಿ ರಾಘವೇಂದ್ರ ಆಚಾರ್ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯ ಕಾರ್ಯಕ್ರಮವು ವಿಶೇಷವಾಗಿ ಪುಷ್ಪಾರ್ಚನೆ ಹಾಗೂ ಕಥಾಶ್ರವಣದೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಶ್ರೀಮಠದ ಸಿಬ್ಬಂದಿಗಳು ಹಾಗೂ ನೂರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಈ ದಿನ ಸಂಜೆ 5 ಕ್ಕೆ ಜೆ. ಪಿ. ನಗರದ ಗಾಯತ್ರಿ ಮಹಿಳಾ ಭಜನಾ ಮಂಡಳಿಯವರಿಂದ ಶ್ರೀ ಹರಿ ಭಜನೆ ನೆರವೇರುವುದು.
City Today News 9341997936

You must be logged in to post a comment.