ಮಾರ್ಚ್ 15ರಂದು ರಾಜ್ಯಮಟ್ಟದ ‘ಗೋ ಸಮ್ಮಾನ’ ಕಾರ್ಯಾಗಾರ

ಬೆಂಗಳೂರು, ಮಾ.14: ದೇಶಾದ್ಯಂತ ನಾಲ್ಕು ಹಂತಗಳಲ್ಲಿ ನಡೆಸಲು ಉದ್ದೇಶಿಸಿರುವ ‘ಗೋ ಸಮ್ಮಾನ ಅಭಿಯಾನ’ಕ್ಕೆ ಪೂರ್ವಭಾವಿಯಾಗಿ ಮಾರ್ಚ್ 15ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರಚಾರಕರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಅಭಿಯಾನದ ಸಂಘಟಕರು ತಿಳಿಸಿದ್ದಾರೆ. ಈ ಕುರಿತು ಇಂದು Press Club of Bangalore ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಹಾಲಕ್ಷ್ಮೀಪುರಂನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ Hindu Sadar Kshemabhivruddhi Sangha ಸಭಾಂಗಣದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದೆ. ರಾಜ್ಯದ ವಿವಿಧ ತಾಲ್ಲೂಕುಗಳಿಂದ ಪ್ರತಿನಿಧಿಗಳಾಗಿ ಗೋಭಕ್ತರು, ಗೋಸಂರಕ್ಷಕರು ಹಾಗೂ ರಾಜ್ಯ-ಹೊರರಾಜ್ಯಗಳಿಂದ ಆಗಮಿಸುವ ಸಂತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಅಭಿಯಾನದ ಪ್ರಮುಖ ಬೇಡಿಕೆಗಳಲ್ಲಿ ಗೋವನ್ನು ‘ರಾಷ್ಟ್ರಮಾತೆ’ ಎಂದು ಘೋಷಿಸುವುದು, ದೇಶಾದ್ಯಂತ ಏಕಕಾನೂನಿನಡಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು ಹಾಗೂ ಗೋಮಾಳಗಳನ್ನು ಗೋಸಂರಕ್ಷಣೆಗೆ ಮೀಸಲಿಡುವುದು ಸೇರಿವೆ.
ಈ ಬೇಡಿಕೆಗಳನ್ನು ಒತ್ತಿಹೇಳುವ ಉದ್ದೇಶದಿಂದ ಅಭಿಯಾನವನ್ನು ನಾಲ್ಕು ಹಂತಗಳಲ್ಲಿ ನಡೆಸಲು ಯೋಜಿಸಲಾಗಿದೆ. ಮೊದಲ ಹಂತದಲ್ಲಿ ಏಪ್ರಿಲ್ 27ರಂದು ದೇಶದಾದ್ಯಂತ ಸುಮಾರು 5,400 ತಹಶೀಲ್ದಾರ್ಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಎರಡನೇ ಹಂತದಲ್ಲಿ ಜುಲೈ 27ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಮೂರನೇ ಹಂತದಲ್ಲಿ ಅಕ್ಟೋಬರ್ 27ರಂದು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮವಿದೆ.
ನಾಲ್ಕನೇ ಹಂತವಾಗಿ 2027ರ ಫೆಬ್ರವರಿ 27ರಿಂದ ಆಗಸ್ಟ್ 15ರವರೆಗೆ ದೆಹಲಿಯಲ್ಲಿ ಸಂತರು ಮತ್ತು ಗೋಭಕ್ತರು ಶಾಂತಿಯುತ ಧರಣಿ ನಡೆಸುವ ಯೋಜನೆ ಇದೆ. ಆಗಲೂ ಬೇಡಿಕೆಗಳು ಈಡೇರದಿದ್ದರೆ, ಅಂತಿಮವಾಗಿ 2027ರ ಆಗಸ್ಟ್ 16ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಈ ಅಭಿಯಾನವು ಯಾವುದೇ ನಿರ್ದಿಷ್ಟ ವ್ಯಕ್ತಿ ಅಥವಾ ಸಂಸ್ಥೆಯ ಹೆಸರಿನಲ್ಲಿ ನಡೆಯದೇ, ಗೋಮಾತೆ ಹಾಗೂ ನಂದಿ ಬಾಬಾರವರ ನೇತೃತ್ವದಲ್ಲಿ ಸಾಮೂಹಿಕವಾಗಿ ನಡೆಯಲಿದೆ. ಅಭಿಯಾನದ ಹೆಸರಿನಲ್ಲಿ ವಂತಿಗೆ ಸಂಗ್ರಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಆರೂಡಭಾರತಿ ಸ್ವಾಮೀಜಿ,ಶ್ರೀಕಲಿತನಯ ಸ್ವಾಮೀಜಿ,ಮುಖೇಶ್ ಗೌಡ,ಸಂಜಯ್ ಕುಮಾರ್ ತಕ್ ಮತ್ತು ಇತರ ಮುಖಂಡರುಗಳ ಸಮ್ಮುಖದಲ್ಲಿ ಸ್ಪಷ್ಟಪಡಿಸಿದರು.
ಅಭಿಯಾನದಲ್ಲಿ ಭಾಗವಹಿಸಲು ಆಸಕ್ತರು 9067777323 ಸಂಖ್ಯೆಗೆ ಮಿಸ್ ಕಾಲ್ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ 9571712140 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
City Today News 9341997936

You must be logged in to post a comment.