ಚಲನಚಿತ್ರ ನಟ ದರ್ಶನ್‌ರವರು ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಖಂಡನೆ

ಚಲನಚಿತ್ರ ನಟ ದರ್ಶನ್‌ರವರು ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಖಂಡಿಸುವ ಪತ್ರಿಕೆ ಪ್ರಕಟಣೆ.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಟ ದರ್ಶನ್ ಶ್ರೀರಂಗಪಟ್ಟಣದಲ್ಲಿ 25ನೇ ವರ್ಷದ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ನಮ್ಮ ನಾಡಿನ ಹೆಣ್ಣು ಮಕ್ಕಳ ಬಗ್ಗೆ ಕೀಳು ಭಾವನೆಯಿಂದ ಒಬ್ಬಳು ಹೋಗುತ್ತಾಳೆ, ಒಬ್ಬಳು ಬರುತ್ತಾಳೆ. ಅವಳ ಅಜ್ಜಿನ ಬಡಿಯ ಎಂದು ಕೀಳಾಗಿ ಮಾತನಾಡಿರುತ್ತಾರೆ. ಈ ಸಭೆಯಲ್ಲಿ ಆದಿಚುಂಚನಗಿರಿ ಗುರುಗಳು ಹಾಗೂ ಸಂಸದೆ ಸುಮಲತಾ ಅಂಬರೀಷ್‌ರವರು ಹಾಗೂ ಹಲವಾರು ಗಣ್ಯಾತಿಗಣ್ಯರು ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು. ಕನ್ನಡ ನಾಡಿಗೆ ಮಾದರಿ ಆಗಬೇಕಿದ್ದ ಒಬ್ಬ ನಾಯಕ ನಟ ಸಾರ್ವಜನಿಕವಾಗಿ ಮಾತನಾಡುವುದು ತಪ್ಪು ಹಾಗೂ ಅಪರಾಧವಾಗಿದ್ದು, ವಿಚಾರಣೆ ನಡೆಸಿ ಆತ ಉಪಯೋಗಿಸಿರುವ ಪದಗಳನ್ನು ಯಾವ ಭಾವನೆಯಿಂದ ಹೇಳಿದ್ದಾರೆಂದು ಅವರಿಗೆ ಜನ್ಮ ನೀಡಿರುವುದು ಒಂದು ಹೆಣ್ಣು ಅದನ್ನು ಮರೆಯಬಾರದು ಹಾಗೂ ವಿವರಣೆ ಕೇಳಬೇಕಾಗಿ ವಿನಂತಿ ಹಾಗೂ ದರ್ಶನ್‌ರವರು 6 ಕೋಟಿ ಕನ್ನಡಿಗರ ಬೆಂಬಲದಿಂದ ಈ ಸ್ಥಾನಕ್ಕೆ ಬರಲು ಕಾರಣವಾಗಿರುತ್ತಾರೆ. ಕರ್ನಾಟಕದಲ್ಲಿ ನಮಗೆ ನಮ್ಮ ಹೆಣ್ಣು ಮಕ್ಕಳ ಬಗ್ಗೆ ಜವಾಬ್ದಾರಿ ಇರುತ್ತದೆ. ಕನ್ನಡಾಂಬೆಯು ಒಂದು ಹೆಣ್ಣು, ಭಾರತ ಮಾತೆಯೂ ಒಂದು ಹೆಣ್ಣು. ಆದರೆ ಇವರು ತೆರೆಯ ಮೇಲೆ ಹೆಣ್ಣು ಮಕ್ಕಳಿಗೆ ಗೌರವಿಸಿದಂತೆ ತೆರೆಯ ಹಿಂದೆಯು ಗೌರವಿಸಬೇಕು. ಈ ವಿಚಾರಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ನಮ್ಮ ಹೆಣ್ಣು ಮಕ್ಕಳ ಮೇಲೆ ಯಾವ ರೀತಿ ಕೆಟ್ಟ ಪರಿಣಾಮವು ಬೀಳಬಾರದು. ಹೆಣ್ಣು ಮಕ್ಕಳ ಬಗೆಗಿನ ಅವರ ದೃಷ್ಟಿ ಕೋನ ಬದಲಾಯಿಸಬೇಕು. 6 ಕೋಟಿ ಕನ್ನಡಿಗರ ಮುಂದೆ ದರ್ಶನ್‌ರವರು ಕೂಡಲೇ ಕ್ಷಮೆಯಾಚಿಸಬೇಕು ಎಂದು . ರಂಗಸ್ವಾಮಿ ಸಂಸ್ಥಾಪಕ ಅಧ್ಯಕ್ಷರು ಆಗ್ರಹಿಸಿದರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ನವೀನ್ ಕುಮಾರ್ ಸಿ.ಎನ್ ರಾಜ್ಯ ಸಂಘಟನಾ ಕಾರ್ಯದರ್ಶಿ,ಕೆ. ಧರ್ಮೇಂದ್ರ ರಾಜ್ಯಾ ಉಪಾಧ್ಯಕ್ಷರು,ಮತ್ತು ಆಂಜನಪ್ಪ .ಕ,ರಾಜ್ಯ ಪ್ರಧಾನ ಕಾರ್ಯದರ್ಶಿ ಉಪಸ್ಥಿತರಿದ್ದರು.

City Today News 9341997936